ಮುಂಡಗೋಡ: ದಿನಾಂಕ 11 ರಂದು ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ, ಬಿಜೆಪಿಯ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತಾಲೂಕಿನ ಇಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 200 ಕ್ಕೂ ಹೆಚ್ಚಿನ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಗೊಂಡರು.
ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಕಾರ್ಯಕರ್ತರಿಗೆ ಸಚಿವ ಶಿವರಾಮ್ ಹೆಬ್ಬಾರ್ ಪಕ್ಷದ ಶಾಲು ಹಾಕಿ ಬರಮಾಡಿಕೊಂಡರು.ಈ ವೇಳೆ ಮಾತನಾಡಿದ ಸಚಿವ ಹೆಬ್ಬಾರ್ ಬಿಜೆಪಿ ಪಕ್ಷ ಅಭಿವೃದ್ಧಿ ಪರವಾದ ಪಕ್ಷ, ಎಲ್ಲಾ ವರ್ಗದವರ ಪರವಾಗಿರುವ ಪಕ್ಷ ಹಾಗಾಗಿ ಪಕ್ಷಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ ಇದು ಇಲ್ಲಿಗೆ ನಿಲ್ಲಲ್ಲ ಈಗ ಪ್ರಾರಂಭವಾಗಿದೆ ಎಂದರು.
ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಲ್ ಟಿ ಪಾಟೀಲ್, ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾದ ರವಿಗೌಡ ಪಾಟೀಲ್, ನಿಕಟಪೂರ್ವ ಮಂಡಲ ಅಧ್ಯಕ್ಷ ಗುಡ್ಡಪ್ಪ ಕಾತೂರ ಮಾತನಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹಾವಣಗಿ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕೆಸಿ ಗಲಬಿ, ಸಿದ್ದು ಹಡಪದ, ರಾಮಣ್ಣ ಲಮಾಣಿ, ಸಂತೋಷ್ ತಳವಾರ, ಮಂಜುನಾಥ ಕಟಗಿ, ಬಸಯ್ಯ ನಡುವಿನಮನಿ, ರಾಜು ಗುಬ್ಬಕ್ಕನವರ, ಮಂಜುನಾಥ ನಡಗೇರ ಸೇರಿದಂತೆ ಸ್ಥಳೀಯ ಕಾರ್ಯಕರ್ತರು ಮುಖಂಡರು ಹಾಜರಿದ್ದರು.
ವರದಿ :ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…