ಬೀದರ್ ಜಿಲ್ಲೆಯಲ್ಲಿ ಮಾನವೀಯತೆಯ ಕಳವುಗೊಳ್ಳುವಂತಹ ಕ್ರೂರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. 2 ವರ್ಷದ ಮಗಳ ಕಣ್ಣೆದುರಲ್ಲಿಯೇ ಪತಿ-ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಸವಕಲ್ಯಾಣ ತಾಲೂಕಿನ ಕೊಹಿನೂರ್ ಪಹಾಡ್ ಗ್ರಾಮದ ಬಳಿಯೇ ನಡೆದಿದೆ.
ಹತ್ಯೆಗೀಡಾದವರು ಜಾಫರ್ವಾಡಿ ಗ್ರಾಮದ ರಾಜು ಕೊಳಸುರೆ (28) ಹಾಗೂ ಶಾರದಾ (27) ದಂಪತಿಯಾಗಿದ್ದು, ದುಷ್ಕರ್ಮಿಗಳು ಇಬ್ಬರ ಕತ್ತೆ ಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾರೆ. ದುಷ್ಕರ್ಮಿಗಳು ಕ್ರೂರ ಕೃತ್ಯ ಎಸಗಿದ ಬಳಿಕ ಸ್ಥಳದಿಂದ ಪಲಾಯನವಾಗದೇ ನೇರವಾಗಿ ಪೊಲೀಸರಿಗೆ ಶರಣಾಗಿರುವುದೇ ಈ ಪ್ರಕರಣಕ್ಕೆ ಮತ್ತೊಂದು ವಿಕೋಪ ಭಾವನೆ ನೀಡಿದೆ.
ಪೊಲೀಸರು ನೀಡಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ರಾಜು ತನ್ನ ಸ್ನೇಹಿತ ದತ್ತಾತ್ರೇಯನ ತಂಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ಸಂಬಂಧದ ಬಗ್ಗೆ ರಾಜು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದ, ಇದರಿಂದ ಕೋಪಗೊಂಡ ದತ್ತಾತ್ರೇಯ, ತನ್ನ ಸ್ನೇಹಿತ ತುಕಾರಾಮನ ಸಹಾಯದಿಂದ ರಾಜು ಹಾಗೂ ಶಾರದಾಳನ್ನು ಕೊಲೆ ಮಾಡಿದ್ದಾನೆ.
ಈ ಪಾಶವಿಕ ಕೃತ್ಯದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದು, ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಗು ಮಾತ್ರ ನಿರ್ವಿಕಾರವಾಗಿ ಈ ದಾರಣ ದೃಶ್ಯಕ್ಕೆ ಸಾಕ್ಷಿಯಾಗಿರುವುದು ಮನಕಲಕುವ ಸಂಗತಿಯಾಗಿದ್ದು, ಗ್ರಾಮದಲ್ಲಿ ಶೋಕದ ಛಾಯೆ ಹರಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…