Latest

ಅನಧಿಕೃತ ಕ್ಲಿನಿಕ್ ಗಳ ಮೇಲೆ ಮುಂದುವರೆದ ದಾಳಿ.

ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.

  1. ಶ್ರೀ ಚನ್ನಬಸವೇಶ್ವರ ಮೆಡಿಕಲ್ & ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  2. ಶ್ರೀ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  3. ಕೋಡಂಬಿಯಲ್ಲಿ ಅಹ್ಮದಸಾಬ ಎನ್ನುವವರು ತಮ್ಮ ಮನೆಯ ಪಕ್ಕದ ಶೆಡನಲ್ಲಿ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದು, ಇವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್ ಲಗತ್ತಿಸಿ, ಕೀಲಿ ಹಾಕಲಾಯಿತು
  4. ಶ್ರೀ ಗುರು ಕ್ಲಿನಿಕ್, ಡಾ| ಅಮರ ಶಿಂಧೆ, ಇವರು ಕೋಡಂಬಿ ಮತ್ತು ಪಾಳಾ ಹಾಗೂ ತಮ್ಮ ಮನೆಯಲ್ಲಿ ಕೂಡ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರಿಂದ ಸದರಿಯವರ 2 ಕ್ಲಿನಿಕ್‌ಗಳಿಗೆ ಕೀಲಿ ಹಾಕಿ ಬಂದ ಮಾಡಲಾಯಿತು ಮತ್ತು ಮನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಸಿ ನೋಟಿಸ್‌ ನೀಡಲಾಯಿತು.
  5. ಧನ್ವಂತರಿ ಕ್ಲಿನಿಕ್, ಕಾತೂರು ಆರ್.ಜಿ ಪೂಜಾರ್ ಎನ್ನುವವರು ಯಾವುದೇ ವಿದ್ಯಾರ್ಹತೆ ಹೊಂದದೇ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಕ್ಲಿನಿಕ್ ಬಂದ ಮಾಡಿಸಿ ನೋಟಿಸ್ ನೀಡಲಾಯಿತು.
  6. ಗೋಪಾಲ ಬೆನ್ನೂರು ಎಂಬುವವರು ಗಣೇಶಪುರದ ಬಾಡಿಗೆ ಮನೆಯಲ್ಲಿ ಯಾವುದೇ ಬೋರ್ಡ್ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದದೇ ಆನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್‌ ಲಗತ್ತಿಸಿ, ಕೀಲಿ ಹಾಕಲಾಯಿತು.
  7. ಧನ್ವಂತರಿ ಕ್ಲಿನಿಕ್, ಕಾವಲಕೊಪ್ಪದಲ್ಲಿ ಬಸವರಾಜ ಹಡಪದ ಎಂಬುವವರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರಿಗೆ ನೋಟಿಸ್ ನೀಡಿ, ಕ್ಲಿನಿಕ್‌ಗೆ ಕೀಲಿ ಹಾಕಲಾಯಿತು.

ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

7 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

7 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

7 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

7 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

8 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago