Latest

ಅನಧಿಕೃತ ಕ್ಲಿನಿಕ್ ಗಳ ಮೇಲೆ ಮುಂದುವರೆದ ದಾಳಿ.

ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.

  1. ಶ್ರೀ ಚನ್ನಬಸವೇಶ್ವರ ಮೆಡಿಕಲ್ & ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  2. ಶ್ರೀ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  3. ಕೋಡಂಬಿಯಲ್ಲಿ ಅಹ್ಮದಸಾಬ ಎನ್ನುವವರು ತಮ್ಮ ಮನೆಯ ಪಕ್ಕದ ಶೆಡನಲ್ಲಿ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದು, ಇವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್ ಲಗತ್ತಿಸಿ, ಕೀಲಿ ಹಾಕಲಾಯಿತು
  4. ಶ್ರೀ ಗುರು ಕ್ಲಿನಿಕ್, ಡಾ| ಅಮರ ಶಿಂಧೆ, ಇವರು ಕೋಡಂಬಿ ಮತ್ತು ಪಾಳಾ ಹಾಗೂ ತಮ್ಮ ಮನೆಯಲ್ಲಿ ಕೂಡ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರಿಂದ ಸದರಿಯವರ 2 ಕ್ಲಿನಿಕ್‌ಗಳಿಗೆ ಕೀಲಿ ಹಾಕಿ ಬಂದ ಮಾಡಲಾಯಿತು ಮತ್ತು ಮನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಸಿ ನೋಟಿಸ್‌ ನೀಡಲಾಯಿತು.
  5. ಧನ್ವಂತರಿ ಕ್ಲಿನಿಕ್, ಕಾತೂರು ಆರ್.ಜಿ ಪೂಜಾರ್ ಎನ್ನುವವರು ಯಾವುದೇ ವಿದ್ಯಾರ್ಹತೆ ಹೊಂದದೇ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಕ್ಲಿನಿಕ್ ಬಂದ ಮಾಡಿಸಿ ನೋಟಿಸ್ ನೀಡಲಾಯಿತು.
  6. ಗೋಪಾಲ ಬೆನ್ನೂರು ಎಂಬುವವರು ಗಣೇಶಪುರದ ಬಾಡಿಗೆ ಮನೆಯಲ್ಲಿ ಯಾವುದೇ ಬೋರ್ಡ್ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದದೇ ಆನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್‌ ಲಗತ್ತಿಸಿ, ಕೀಲಿ ಹಾಕಲಾಯಿತು.
  7. ಧನ್ವಂತರಿ ಕ್ಲಿನಿಕ್, ಕಾವಲಕೊಪ್ಪದಲ್ಲಿ ಬಸವರಾಜ ಹಡಪದ ಎಂಬುವವರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರಿಗೆ ನೋಟಿಸ್ ನೀಡಿ, ಕ್ಲಿನಿಕ್‌ಗೆ ಕೀಲಿ ಹಾಕಲಾಯಿತು.

ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

25 minutes ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

48 minutes ago

ಗೌರಿಬಿದನೂರಿನಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಅಕ್ರಮ ಬಳಕೆ ವಿರುದ್ಧ ದಾಳಿ – 36 ಸಿಲಿಂಡರ್‌ಗಳು ಜಪ್ತಿ

ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…

1 hour ago

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

5 hours ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

18 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

20 hours ago