Latest

ಅನಧಿಕೃತ ಕ್ಲಿನಿಕ್ ಗಳ ಮೇಲೆ ಮುಂದುವರೆದ ದಾಳಿ.

ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.

  1. ಶ್ರೀ ಚನ್ನಬಸವೇಶ್ವರ ಮೆಡಿಕಲ್ & ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  2. ಶ್ರೀ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  3. ಕೋಡಂಬಿಯಲ್ಲಿ ಅಹ್ಮದಸಾಬ ಎನ್ನುವವರು ತಮ್ಮ ಮನೆಯ ಪಕ್ಕದ ಶೆಡನಲ್ಲಿ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದು, ಇವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್ ಲಗತ್ತಿಸಿ, ಕೀಲಿ ಹಾಕಲಾಯಿತು
  4. ಶ್ರೀ ಗುರು ಕ್ಲಿನಿಕ್, ಡಾ| ಅಮರ ಶಿಂಧೆ, ಇವರು ಕೋಡಂಬಿ ಮತ್ತು ಪಾಳಾ ಹಾಗೂ ತಮ್ಮ ಮನೆಯಲ್ಲಿ ಕೂಡ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರಿಂದ ಸದರಿಯವರ 2 ಕ್ಲಿನಿಕ್‌ಗಳಿಗೆ ಕೀಲಿ ಹಾಕಿ ಬಂದ ಮಾಡಲಾಯಿತು ಮತ್ತು ಮನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಸಿ ನೋಟಿಸ್‌ ನೀಡಲಾಯಿತು.
  5. ಧನ್ವಂತರಿ ಕ್ಲಿನಿಕ್, ಕಾತೂರು ಆರ್.ಜಿ ಪೂಜಾರ್ ಎನ್ನುವವರು ಯಾವುದೇ ವಿದ್ಯಾರ್ಹತೆ ಹೊಂದದೇ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಕ್ಲಿನಿಕ್ ಬಂದ ಮಾಡಿಸಿ ನೋಟಿಸ್ ನೀಡಲಾಯಿತು.
  6. ಗೋಪಾಲ ಬೆನ್ನೂರು ಎಂಬುವವರು ಗಣೇಶಪುರದ ಬಾಡಿಗೆ ಮನೆಯಲ್ಲಿ ಯಾವುದೇ ಬೋರ್ಡ್ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದದೇ ಆನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್‌ ಲಗತ್ತಿಸಿ, ಕೀಲಿ ಹಾಕಲಾಯಿತು.
  7. ಧನ್ವಂತರಿ ಕ್ಲಿನಿಕ್, ಕಾವಲಕೊಪ್ಪದಲ್ಲಿ ಬಸವರಾಜ ಹಡಪದ ಎಂಬುವವರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರಿಗೆ ನೋಟಿಸ್ ನೀಡಿ, ಕ್ಲಿನಿಕ್‌ಗೆ ಕೀಲಿ ಹಾಕಲಾಯಿತು.

ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

3 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

3 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

3 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

3 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

3 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

3 hours ago