Latest

ಅನಧಿಕೃತ ಕ್ಲಿನಿಕ್ ಗಳ ಮೇಲೆ ಮುಂದುವರೆದ ದಾಳಿ.

ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.

  1. ಶ್ರೀ ಚನ್ನಬಸವೇಶ್ವರ ಮೆಡಿಕಲ್ & ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  2. ಶ್ರೀ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  3. ಕೋಡಂಬಿಯಲ್ಲಿ ಅಹ್ಮದಸಾಬ ಎನ್ನುವವರು ತಮ್ಮ ಮನೆಯ ಪಕ್ಕದ ಶೆಡನಲ್ಲಿ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದು, ಇವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್ ಲಗತ್ತಿಸಿ, ಕೀಲಿ ಹಾಕಲಾಯಿತು
  4. ಶ್ರೀ ಗುರು ಕ್ಲಿನಿಕ್, ಡಾ| ಅಮರ ಶಿಂಧೆ, ಇವರು ಕೋಡಂಬಿ ಮತ್ತು ಪಾಳಾ ಹಾಗೂ ತಮ್ಮ ಮನೆಯಲ್ಲಿ ಕೂಡ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರಿಂದ ಸದರಿಯವರ 2 ಕ್ಲಿನಿಕ್‌ಗಳಿಗೆ ಕೀಲಿ ಹಾಕಿ ಬಂದ ಮಾಡಲಾಯಿತು ಮತ್ತು ಮನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಸಿ ನೋಟಿಸ್‌ ನೀಡಲಾಯಿತು.
  5. ಧನ್ವಂತರಿ ಕ್ಲಿನಿಕ್, ಕಾತೂರು ಆರ್.ಜಿ ಪೂಜಾರ್ ಎನ್ನುವವರು ಯಾವುದೇ ವಿದ್ಯಾರ್ಹತೆ ಹೊಂದದೇ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಕ್ಲಿನಿಕ್ ಬಂದ ಮಾಡಿಸಿ ನೋಟಿಸ್ ನೀಡಲಾಯಿತು.
  6. ಗೋಪಾಲ ಬೆನ್ನೂರು ಎಂಬುವವರು ಗಣೇಶಪುರದ ಬಾಡಿಗೆ ಮನೆಯಲ್ಲಿ ಯಾವುದೇ ಬೋರ್ಡ್ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದದೇ ಆನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್‌ ಲಗತ್ತಿಸಿ, ಕೀಲಿ ಹಾಕಲಾಯಿತು.
  7. ಧನ್ವಂತರಿ ಕ್ಲಿನಿಕ್, ಕಾವಲಕೊಪ್ಪದಲ್ಲಿ ಬಸವರಾಜ ಹಡಪದ ಎಂಬುವವರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರಿಗೆ ನೋಟಿಸ್ ನೀಡಿ, ಕ್ಲಿನಿಕ್‌ಗೆ ಕೀಲಿ ಹಾಕಲಾಯಿತು.

ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

10 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

17 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

17 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago