Latest

ಅನಧಿಕೃತ ಕ್ಲಿನಿಕ್ ಗಳ ಮೇಲೆ ಮುಂದುವರೆದ ದಾಳಿ.

ಮುಂಡಗೋಡ:- ದಿನಾಂಕ 03-04-2025ರಂದು ಮುಂಡಗೋಡ ತಾಲೂಕಿನಲ್ಲಿ ಕೆ.ಪಿ.ಎಮ್.ಇ ಖಾಯಿದೆ ಅಡಿಯಲ್ಲಿ ಕೆ.ಪಿ.ಎಮ್.ಇ ಮುಂಡಗೋಡ ಪ್ರಾಧಿಕಾರದ ತಂಡವು ದಾಳಿ ನಡೆಸಿ ಅನಧೀಕೃತವಾಗಿ ನಡೆಸುತ್ತಿದ್ದ ಕ್ಲಿನಿಕ್‌ಗಳನ್ನು ಬಂದು ಮಾಡಿಸಿ ನೋಟಿಸ್ ನೀಡಿದ್ದಾರೆ. ಮುಂಡಗೋಡ ತಾಲೂಕಿನ ಹಲವು ಭಾಗಗಳಲ್ಲಿ ಈ ಕೆಳಗಿನಂತೆ ದಾಳಿಯು ನಡೆದಿದೆ.

  1. ಶ್ರೀ ಚನ್ನಬಸವೇಶ್ವರ ಮೆಡಿಕಲ್ & ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  2. ಶ್ರೀ ರೇಣುಕಾ ಮೆಡಿಕಲ್ ಮತ್ತು ಜನರಲ್ ಸ್ಟೋರ್, ಮಳಗಿ ಇವರು ಮೆಡಿಕಲ್ ಸ್ಟೋರ್ ನಲ್ಲಿ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಅಂಗಡಿಗೆ ಬೀಗ ಹಾಕಿ ಬಂದ ಮಾಡಿಸಲಾಯಿತು.
  3. ಕೋಡಂಬಿಯಲ್ಲಿ ಅಹ್ಮದಸಾಬ ಎನ್ನುವವರು ತಮ್ಮ ಮನೆಯ ಪಕ್ಕದ ಶೆಡನಲ್ಲಿ ಅನಧಿಕೃತ ಕ್ಲಿನಿಕ್ ನಡೆಸುತ್ತಿದ್ದು, ಇವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್ ಲಗತ್ತಿಸಿ, ಕೀಲಿ ಹಾಕಲಾಯಿತು
  4. ಶ್ರೀ ಗುರು ಕ್ಲಿನಿಕ್, ಡಾ| ಅಮರ ಶಿಂಧೆ, ಇವರು ಕೋಡಂಬಿ ಮತ್ತು ಪಾಳಾ ಹಾಗೂ ತಮ್ಮ ಮನೆಯಲ್ಲಿ ಕೂಡ ಅನಧಿಕೃತವಾಗಿ ಕ್ಲಿನಿಕ್‌ಗಳನ್ನು ನಡೆಸುತ್ತಿದ್ದರಿಂದ ಸದರಿಯವರ 2 ಕ್ಲಿನಿಕ್‌ಗಳಿಗೆ ಕೀಲಿ ಹಾಕಿ ಬಂದ ಮಾಡಲಾಯಿತು ಮತ್ತು ಮನೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡದಂತೆ ಎಚ್ಚರಿಸಿ ನೋಟಿಸ್‌ ನೀಡಲಾಯಿತು.
  5. ಧನ್ವಂತರಿ ಕ್ಲಿನಿಕ್, ಕಾತೂರು ಆರ್.ಜಿ ಪೂಜಾರ್ ಎನ್ನುವವರು ಯಾವುದೇ ವಿದ್ಯಾರ್ಹತೆ ಹೊಂದದೇ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ ಸದರಿಯವರ ಕ್ಲಿನಿಕ್ ಬಂದ ಮಾಡಿಸಿ ನೋಟಿಸ್ ನೀಡಲಾಯಿತು.
  6. ಗೋಪಾಲ ಬೆನ್ನೂರು ಎಂಬುವವರು ಗಣೇಶಪುರದ ಬಾಡಿಗೆ ಮನೆಯಲ್ಲಿ ಯಾವುದೇ ಬೋರ್ಡ್ ಹಾಗೂ ಯಾವುದೇ ವಿದ್ಯಾರ್ಹತೆ ಹೊಂದದೇ ಆನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರ ಕ್ಲಿನಿಕ್‌ನ ಬಾಗಿಲಿಗೆ ನೋಟಿಸ್‌ ಲಗತ್ತಿಸಿ, ಕೀಲಿ ಹಾಕಲಾಯಿತು.
  7. ಧನ್ವಂತರಿ ಕ್ಲಿನಿಕ್, ಕಾವಲಕೊಪ್ಪದಲ್ಲಿ ಬಸವರಾಜ ಹಡಪದ ಎಂಬುವವರು ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿದ್ದರಿಂದ, ಸದರಿಯವರಿಗೆ ನೋಟಿಸ್ ನೀಡಿ, ಕ್ಲಿನಿಕ್‌ಗೆ ಕೀಲಿ ಹಾಕಲಾಯಿತು.

ಕೆ.ಪಿ.ಎಮ್.ಇ ಪ್ರಾಧಿಕಾರದ ತಂಡವು ಈ ದಾಳಿಯನ್ನು ನಡೆಸಿದ್ದು, ತಂಡದಲ್ಲಿ ಐ.ಎಮ್.ಎ ಮುಂಡಗೋಡದ ಅಧ್ಯಕ್ಷರಾದ ಡಾ| ರವಿ ಹೆಗಡೆ, ಡಾ| ನರೇಂದ್ರ ಪವಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಡಾ| ಸಂಜೀವ ಗಲಗಲಿ, ವೈದ್ಯಾಧಿಕಾರಿಗಳು, ಆಯುರ್ವೇದ ಆಸ್ಪತ್ರೆ, ಡಾ| ಭರತ ಡಿ.ಟಿ ಆಡಳಿತ ವೈದ್ಯಾಧಿಕಾರಿಗಳು, ಪ್ರಾ.ಅ.ಕೇಂದ್ರ ಹುನಗುಂದ, ಪೋಲೀಸ್ ಇಲಾಖೆಯಿಂದ ಶ್ರೀ ಲೋಕೇಶ್ವರ ಮೆಸ್ತ, ಎ.ಎಸ್.ಐ ಮತ್ತು ಶ್ರೀ ನಾಗರಾಜರವರು ದಾಳಿಯಲ್ಲಿ ಭಾಗವಹಿಸಿದ್ದರು.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago