Latest

ಮಲಮಗ, ಪತಿಯ ಸ್ನೇಹಿತರ ನಿರಂತರ ಅತ್ಯಾಚಾರ: ರಾಷ್ಟ್ರಪತಿ ಬಳಿ ದಯಾಮರಣ ಕೋರಿದ ಮಹಿಳೆ

ಮಲ ಮಗ ಮತ್ತು ಪತಿಯ ಸ್ನೇಹಿತರಿಂದ ನಿರಂತರ ಅತ್ಯಾಚಾರಕ್ಕೊಳಗಾಗಿರುವ ಮಹಿಳೆಯೊಬ್ಬರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ‘ದಯಾಮರಣ’ಕ್ಕೆ ಅನುಮತಿ ನೀಡುವಂತೆ ಕೋರಿದ್ದಾರೆ.
ಮೊದಲ ಪತಿಯಿಂದ ವಿಚ್ಛೇದನ ಪಡೆದ ಬಳಿಕ ಚಂಡೀಗಢದ 55 ವರ್ಷದ ವಿಚ್ಛೇದಿತ ರೈತನೊಬ್ಬನನ್ನು ವಿವಾಹವಾಗಿರುವುದಾಗಿ ಮಹಿಳೆ ಹೇಳಿದ್ದಾರೆ.
ನನ್ನ ಮಲಮಗ ನನ್ನೊಂದಿಗೆ ಲೈಂಗಿಕ ಸಂಪರ್ಕ ಬಯಸಿದ್ದ. ಪದೇ ಪದೆ ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ.
ವಿಷಯ ಬಹಿರಂಗಪಡಿಸಿದರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆತ ನನ್ನನ್ನು ಹೆದರಿಸಿದ್ದ. ಹೀಗಾಗಿ ಆರಂಭದಲ್ಲಿ ನಾನು ಸುಮ್ಮನಿರಲೇಬೇಕಾಯಿತು. ನಾನು ಗರ್ಭಿಣಿಯಾದೆ. ಡಿಎನ್‌ಎ ಪರೀಕ್ಷೆಗೆ ಹೋಗಲು ಬಯಸಿದಾಗ ನನ್ನ ಹೊಟ್ಟೆಗೆ ನಿಷ್ಕರುಣೆಯಿಂದ ಹೊಡೆಯಲಾಯಿತು. ನಂತರ, ಪುರನ್‌ಪುರದ ಖಾಸಗಿ ಆಸ್ಪತ್ರೆಯಲ್ಲಿ ನನಗೆ ಬಲವಂತವಾಗಿ ಗರ್ಭಪಾತ ಮಾಡಿಸಲಾಯಿತು ಎಂದು ಆಕೆ ಹೇಳಿದ್ದಾರೆ.
ಜುಲೈ 18 ರಂದು ಪತಿಯ ಸ್ನೇಹಿತನ ಫಾರ್ಮ್‌ಹೌಸ್‌ಗೆ ಕರೆದೊಯ್ಯಲಾಯಿತು. ಅಲ್ಲಿ ಆತನ ಸಂಬಂಧಿಕರೊಬ್ಬರು ಮತ್ತು ಇಬ್ಬರು ಸಹೋದ್ಯೋಗಿಗಳು ನನ್ನ ಮೇಲೆ ಅತ್ಯಾಚಾರ ಎಸಗಿದರು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಯಿತಾದರೂ ಅವರು ಕಿವಿಗೊಡಲೇ ಇಲ್ಲ ಎಂದು ಪೊಲೀಸರ ವಿರುದ್ಧ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಂತರ ನ್ಯಾಯಾಲಯಕ್ಕೆ ಹೋಗಿ ಎಫ್‌ಐಆರ್‌ ದಾಖಲಾಗುವಂತೆ ಮಾಡಲಾಯಿತು. ಇತ್ತೀಚೆಗಷ್ಟೇ ಪುರನ್‌ಪುರ್ ಕೊತ್ವಾಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪತಿ ಮತ್ತು ಮಲಮಗ ಸೇರಿದಂತೆ ಐವರ ವಿರುದ್ಧ ಐಪಿಸಿ ಸೆಕ್ಷನ್ 376-ಡಿ (ಗ್ಯಾಂಗ್-ರೇಪ್), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಯಾವುದೇ ಬಂಧನವಾಗಿಲ್ಲ ಎಂದು ಆಕೆ ವಿವರಿಸಿದ್ದಾರೆ.
ಅವರಿಂದ ನನಗೆ ಪದೇ ಪದೇ ಕೊಲೆ ಬೆದರಿಕೆಗಳು ಬರುತ್ತಿದೆ. ನನ್ನ ಮೇಲಿನ ದೌರ್ಜನ್ಯದ ಬಗ್ಗೆ ಮೌನವಾಗಿರುವಂತೆ ಹೆದರಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
‘ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ನ್ಯಾಯ ಸಿಗುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇನೆ. ಆದ್ದರಿಂದ, ರಾಷ್ಟ್ರಪತಿ ಅನುಮತಿಯೊಂದಿಗೆ ನನ್ನ ಜೀವನವನ್ನು ಅಂತ್ಯಗೊಳಿಸುತ್ತೇನೆ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಮಹಿಳೆ ಪ್ರಸ್ತುತ ತಾಯಿ, ಸಹೋದರ ಮತ್ತು ಆರು ವರ್ಷದ ಮಗನೊಂದಿಗೆ ಬರೇಲಿಯಲ್ಲಿ ವಾಸವಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕೋಲಾರ್ ಹೃದಯವಿದ್ರಾವಕ ಘಟನೆ: ವೃದ್ಧೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಮಾಡಿದ ಆರೋಪಿ ಬಂಧನ

ಕೋಲಾರ್: ರಾಜ್ಯದಾದ್ಯಂತ ಹತಾಶೆ ಮೂಡಿಸಿದ್ದ ಶ್ರೀನಿವಾಸಪುರ ವೃದ್ಧೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ತೀವ್ರ ತನಿಖೆ ನಡೆಸಿದ್ದ ಪೊಲೀಸರು ಇದೀಗ…

6 minutes ago

ಚಿಕ್ಕಬಳ್ಳಾಪುರದಲ್ಲಿ ಭೀಕರ ಹತ್ಯೆ: ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ದುಷ್ಕರ್ಮಿಗಳು

ಚಿಕ್ಕಬಳ್ಳಾಪುರದ ಬಿಬಿ ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿಯಲ್ಲಿಂದು ಮುಂಜಾನೆ ಹೃದಯವಿದ್ರಾವಕ ಘಟನೆ ನಡೆಯಿದ್ದು, ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದು ಯುವಕನನ್ನು ಹತ್ಯೆಗೈದಿದ್ದಾರೆ.…

49 minutes ago

ಹೋಂ ಗಾರ್ಡ್ ನೇಮಕಾತಿಗೆ ಲಂಚ: ರಾಯಚೂರಲ್ಲಿ ಕಮಾಂಡೆಂಟ್ ಲೋಕಾಯುಕ್ತ ಬಲೆಗೆ”

ರಾಯಚೂರು: ಹೋಂ ಗಾರ್ಡ್ ನೇಮಕಾತಿಗೆ ಲಂಚ ಪಡೆಯುತ್ತಿದ್ದ ರಾಯಚೂರಿನ ಹೋಂ ಗಾರ್ಡ್ ಕಮಾಂಡೆಂಟ್ ಜಂಬಣ್ಣ ರಾಮಸ್ವಾಮಿ ಅವರು ಲೋಕಾಯುಕ್ತದ ಜಾಲಕ್ಕೆ…

3 hours ago

ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಅಬ್ದುಲ್ ರಜಾಕ್ ಬಂಧನ

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮತ್ತೊಬ್ಬರನ್ನು ಬಂಧಿಸಿದ್ದಾರೆ. ಬಂಧಿತನನ್ನು ಬಜ್ಪೆ…

16 hours ago

ಮಧುಗಿರಿಯಲ್ಲಿ ಬಾಲಕನ ಆತ್ಮಹತ್ಯೆ: ಅನಾರೋಗ್ಯ, ಪರೀಕ್ಷಾ ಫಲಿತಾಂಶದಿಂದ ಖಿನ್ನತೆ ಹಿನ್ನೆಲೆಯಲ್ಲಿ ದಾರುಣ ಘಟನೆ

ತುಮಕೂರು: ಅನಾರೋಗ್ಯ ಹಾಗೂ ಪರೀಕ್ಷಾ ಫಲಿತಾಂಶದಿಂದ ಖಿನ್ನತೆಗೆ ಒಳಗಾಗಿದ್ದ 19 ವರ್ಷದ ಬಾಲಕನು ಆತ್ಮಹತ್ಯೆಗೆ ಶರಣಾದ ಮರುಮನಸ್ಸು ಮಾಡಬಲ್ಲ ದುರ್ಘಟನೆ…

18 hours ago

ಲಂಚ ಪಡೆಯುವಾಗ ಜೆಸ್ಕಾಂ ಎಂಜಿನಿಯರ್ ಶೇಖರ್ ಅರೆಸ್ಟ್ : ಲೋಕಾಯುಕ್ತ ಪೊಲೀಸರ ದಾಳಿ

ಕಲಬುರಗಿಯಲ್ಲಿ ಮಂಗಳವಾರ ದಿನದ ಬೆಳಗ್ಗೆ ಮಹತ್ವದ ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿಯ (ಜೆಸ್ಕಾಂ) ಗ್ರಾಮೀಣ…

19 hours ago