ಸಕಲೇಶಪುರ: ಸರ್ಕಾರಿ ಕಚೇರಿಯಲ್ಲಿ ನಿಯಮ ಉಲ್ಲಂಘಿಸಿ ಮಧ್ಯವರ್ತಿಯೊಬ್ಬರ ಹುಟ್ಟುಹಬ್ಬವನ್ನು ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಾರಿಗೆ ಇಲಾಖೆ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡುವಂತೆ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಜುಲೈ 11ರಂದು ಸಕಲೇಶಪುರದ ಎಆರ್ಟಿಒ ಕಚೇರಿಯಲ್ಲಿ ಮಧ್ಯವರ್ತಿ ಮೋಹನ್ ಎಂಬುವವರ ಜನ್ಮದಿನವನ್ನು ಅಧಿಕೃತವಾಗಿ ಆಚರಿಸಲಾಗಿತ್ತು. ಈ ವಿಚಾರ ಹೊರಬಿದ್ದ ನಂತರ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಯಿತು. ಕಚೇರಿಯಲ್ಲಿ ಸಾರ್ವಜನಿಕ ಸೇವೆಗಳನ್ನು ನಿರ್ವಹಿಸುವ ಬದಲು ಮಧ್ಯವರ್ತಿಯ ಪೋಷಣೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂಬ ಆರೋಪಗಳು ಕೇಳಿಬಂದವು.
ಈ ಕುರಿತು ಮಾಧ್ಯಮ ವರದಿಗಳು ಮತ್ತು ಸಾರ್ವಜನಿಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಸಾರಿಗೆ ಇಲಾಖೆಯ ಆಯುಕ್ತ ಯೋಗೀಶ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ ನಂತರ, ಮೋಟಾರು ವಾಹನ ನಿರೀಕ್ಷಕಿ ಎನ್.ಆರ್. ಆಶಾ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಸ್.ಎನ್. ಮಧುರಾ ಹಾಗೂ ಕಚೇರಿ ಅಧೀಕ್ಷಕ ಎಂ.ಕೆ. ಗಿರೀಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಕಾರ್ಯಕ್ರಮಗಳನ್ನು ನಡೆಸುವುದು ನಿರ್ಬಂಧಿತವಾಗಿದ್ದು, ಇದು ಸರ್ಕಾರಿ ವ್ಯವಸ್ಥೆಯ ಮೇಲೆ ನಂಬಿಕೆ ಕಳೆದುಕೊಳ್ಳುವಂತಾಗಿದೆ ಎಂಬ ಸೂಚನೆ ಕೂಡ ಆಯುಕ್ತರು ನೀಡಿದ್ದಾರೆ.
ಈ ಘಟನೆ ಸರ್ಕಾರಿ ಇಲಾಖೆಗಳಲ್ಲಿ ನಡೆಯುತ್ತಿರುವ ಶಿಸ್ತುಭಂಗ ಹಾಗೂ ಮಧ್ಯವರ್ತಿಗಳ ಪ್ರಭಾವದ ವಿರುದ್ಧದ ಚರ್ಚೆಗೆ ಕಾರಣವಾಗಿದೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…