Categories: LatestPolitics

ಶೋಭಕ್ಕ, ಬಿಡದಿ ಟೌನ್‌ಶಿಪ್‌ಗೆ ಟೆಂಡರ್ ಕರೆದಿದ್ದು ನಿಮ್ಮ ಯಜಮಾನ’ ಹೇಳಿಕೆ ವಿವಾದ: ನೋವಾಗಿದ್ದರೆ ಸಂಪೂರ್ಣ ವಿಷಾದ ಎಂದ ಶಾಸಕ ಎಚ್.ಸಿ. ಬಾಲಕೃಷ್ಣ

ಮಾಗಡಿ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ತಮ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿ, ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ಸಂಪೂರ್ಣ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತಾವು ಸದಾ ಗೌರವದಿಂದ “ಶೋಭಕ್ಕ” ಎಂದು ಸಂಬೋಧಿಸಿದ್ದೇನೆ ಎಂದು ಹೇಳಿದರು. ಬಿಡದಿ ಟೌನ್‌ಶಿಪ್ ಯೋಜನೆಗೆ 2010ರಲ್ಲಿ ಟೆಂಡರ್ ಕರೆಯಲಾಗಿತ್ತು. ಆ ಸಂದರ್ಭದಲ್ಲಿ ರಾಜಕೀಯ ಹಿನ್ನೆಲೆಯ ಉಲ್ಲೇಖವಾಗಿ “ನಿಮ್ಮ ಸಾಹೇಬ”, “ನಿಮ್ಮ ಯಜಮಾನ” ಎಂಬ ಪದಗಳನ್ನು ಬಳಸಿದ್ದೇನೆ ಎಂದು ವಿವರಿಸಿದರು.

ಶೋಭಾ ಕರಂದ್ಲಾಜೆ ಅವರನ್ನು ಸಾಮಾನ್ಯ ಕಾರ್ಯಕರ್ತೆಯಾಗಿ ಗುರುತಿಸಿ, ಸಚಿವೆಯನ್ನಾಗಿ ಬೆಳೆಸಿದ ನಾಯಕ ಬಿ.ಎಸ್. ಯಡಿಯೂರಪ್ಪ ಎಂಬ ರಾಜಕೀಯ ಸಂದರ್ಭವನ್ನು ಉಲ್ಲೇಖಿಸುವ ಉದ್ದೇಶದಿಂದ ಮಾತ್ರ ಆ ಪದಗಳನ್ನು ಬಳಸಿದ್ದೇನೆ. ಯಾವುದೇ ವೈಯಕ್ತಿಕ ಅವಹೇಳನ ಮಾಡುವ ಉದ್ದೇಶ ನನಗಿರಲಿಲ್ಲ ಎಂದು ಬಾಲಕೃಷ್ಣ ಸ್ಪಷ್ಟಪಡಿಸಿದರು.

ಸಾರ್ವಜನಿಕ ಜೀವನದಲ್ಲಿರುವವರು ಹೇಳಿಕೆಗಳ ಆಶಯವನ್ನು ಸರಿಯಾದ ಸಂದರ್ಭದಲ್ಲಿ ಅರ್ಥೈಸಿಕೊಳ್ಳಬೇಕು. ಆದಾಗ್ಯೂ, ನನ್ನ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ನಾನು ಸಂಪೂರ್ಣವಾಗಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದರು.

ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ಅವರು ಸುದ್ದಿಗೋಷ್ಠಿಯಲ್ಲಿ ಶೋಭಾ ಕರಂದ್ಲಾಜೆ ಅವರ ಬಗ್ಗೆ ಬಳಸಿದ ಭಾಷೆ ಅಸಭ್ಯತೆಯ ಪರಮಾವಧಿಯಾಗಿದ್ದು, ಅದು ಮಹಿಳೆಯರಿಗೆ ಅಗೌರವ ತೋರುವ ಕಾಂಗ್ರೆಸ್‌ನ ನಿಜವಾದ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಟೀಕಿಸಿದರು.

ಮಹಿಳಾ ಜನಪ್ರತಿನಿಧಿಯೊಬ್ಬರ ಕುರಿತು ಏಕವಚನದಲ್ಲಿ ಸಂವೇದನಾರಹಿತವಾಗಿ ಮಾತನಾಡಿರುವುದು ಖಂಡನೀಯ. ಬಾಲಕೃಷ್ಣ ಅವರು ಮಹಿಳಾ ಸಮುದಾಯದ ಕ್ಷಮೆಯಾಚಿಸಬೇಕು ಎಂದು ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಭ್ರಷ್ಟರ ಬೇಟೆ

Recent Posts

₹300 ಮೌಲ್ಯದ ದಿನಸಿಗೆ ಆಸೆ! ಕೋಟಿ ಮೌಲ್ಯದ ಫ್ಲ್ಯಾಟ್ ನಿವಾಸಿಗಳ ನಡೆ ಬಯಲಿಗೆ ತಂದ ಡೆಲಿವರಿ ಬಾಯ್ ಎಡವಟ್ಟು

ನೋಯ್ಡಾದ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸೊಸೈಟಿಯೊಂದರಲ್ಲಿ ನಡೆದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಕೇವಲ ₹300 ಮೌಲ್ಯದ ದಿನಸಿ…

5 hours ago

ಪ್ರಶ್ನೆಪತ್ರಿಕೆ ಸೋರಿಕೆ ಆರೋಪಿಗಳ ವಿರುದ್ಧ ಕ್ರಮ ಎಲ್ಲಿದೆ? ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರಕ್ಕೆ ಆಕ್ರೋಶ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳ ವಿರುದ್ಧ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು…

5 hours ago

ಪತ್ನಿಯ ಹುಟ್ಟುಹಬ್ಬಕ್ಕೆ ಸರ್ಪ್ರೈಸ್ ಕೊಡಲು ಬಂದ ಪತಿ; ಅಕ್ರಮ ಸಂಬಂಧ ಕಂಡು ಇಂಜಿನಿಯರ್ ಪತ್ನಿಯಿಂದ ಕೊಲೆಯಾದ..!

ಭುವನೇಶ್ವರ: ಪತ್ನಿಯ ಹುಟ್ಟುಹಬ್ಬದಂದು ಆಕೆಗೆ ಸರ್ಪ್ರೈಸ್ ನೀಡಲು ಸಂತಸದಿಂದ ಮನೆಗೆ ಬಂದಿದ್ದ ಇಂಜಿನಿಯರ್‌ ಒಬ್ಬರು ಕೆಲವೇ ಗಂಟೆಗಳಲ್ಲಿ ರಕ್ತದ ಮಡುವಿನಲ್ಲಿ…

5 hours ago

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಬಯಲು: ಡಿಸಿ ಸೇರಿ ಗಣಿ ಇಲಾಖೆ ಅಧಿಕಾರಿಗಳು, ಐವರು ತಹಶೀಲ್ದಾರ್‌ಗಳ ವಿರುದ್ಧ ಲೋಕಾಯುಕ್ತ ಪ್ರಕರಣ

ಬಾಗಲಕೋಟೆ ಜಿಲ್ಲೆಯಲ್ಲಿ ವ್ಯಾಪಕ ಪ್ರಮಾಣದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಲೋಕಾಯುಕ್ತ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಗಣಿ ಮತ್ತು ಭೂವಿಜ್ಞಾನ…

9 hours ago

ಶಿವಮೊಗ್ಗದಲ್ಲಿ ತಲೆಮರೆಸಿಕೊಂಡಿದ್ದ ಜಿಂಕೆ ಮಾಂಸ ಪ್ರಕರಣದ ಪ್ರಮುಖ ಆರೋಪಿ ಬಂಧನ

ಮುಂಡಗೋಡ: ಅರಣ್ಯ ವಲಯದ ಇಂದೂರು ಶಾಖೆಯ ನಂದಿಕಟ್ಟ ಗಸ್ತು ವ್ಯಾಪ್ತಿಯಲ್ಲಿ ಜುಲೈ 17ರಂದು ಪತ್ತೆಯಾದ ಅಕ್ರಮ ಜಿಂಕೆ ಮಾಂಸ ಪ್ರಕರಣದ…

1 day ago

ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ: ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ನಂಜನಗೂಡು: ಮೈಸೂರಿನ ನಂಜನಗೂಡು ತಾಲೂಕಿನ ಕಡಬೂರು ಗ್ರಾಮದಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದ ಮೇಲೆ…

1 day ago