ಬೀದರ್ ಜಿಲ್ಲೆಯಲ್ಲಿ ಸರ್ಕಾರದ ಅಧಿಕಾರಿಗಳನ್ನು ಶಾಕ್ಗೆ ಒಳಪಡಿಸುವಂತಹ ಭೂಮಿ ಹಗರಣವೊಂದು ಬೆಳಕಿಗೆ ಬಂದಿದೆ. ನಕಲಿ ಡಿಜಿಟಲ್ ಸಹಿ ಬಳಸಿ ಒಬ್ಬರ ಹೆಸರಿನಲ್ಲಿದ್ದ ಭೂಮಿಯನ್ನು ಮತ್ತೊಬ್ಬನ ಹೆಸರಿಗೆ ವರ್ಗಾಯಿಸಿರುವ ಗಂಭೀರ ಘಟನೆ ವರದಿಯಾಗಿದೆ.
ನಂದಗಾಂವ ಗ್ರಾಮದ ಜಗನ್ನಾಥ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 8 ಎಕರೆ 13 ಗುಂಟೆ ಭೂಮಿಯನ್ನು ಮೋಸಪೂರ್ವಕವಾಗಿ ಮೊಹಮ್ಮದ್ ಇಸ್ಮಾಯಿಲ್ ಎಂಬುವರ ಹೆಸರಿಗೆ ವರ್ಗಾವಣೆ ಮಾಡಲಾಗಿದೆ. ಇದನ್ನು ಸರ್ಕಾರದ ಅಧಿಕೃತ ಡಿಜಿಟಲ್ ಸಹಿಯನ್ನು ನಕಲು ಮಾಡಿ ಅಕ್ರಮವಾಗಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಗರಣದಲ್ಲಿ ಬೀದರ್ ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ ಸೃಜನ್ ಹಾಗೂ ಅಂಬರೀಶ್ ಎಂಬುವವರು ತಹಶೀಲ್ದಾರ ದಿಲ್ ಶಾದ್ ಅಲಿ ಮಹತ್ ಅವರ ಡಿಜಿಟಲ್ ಸಹಿಯನ್ನು ನಕಲು ಮಾಡಿಕೊಂಡು ಜಮೀನು ದಾಖಲೆಗಳನ್ನು ರಚಿಸಿದ್ದಾರೆ ಎನ್ನಲಾಗಿದೆ. ಅವರು ಪ್ರಿಂಟಾದ ಡಿಜಿಟಲ್ ಸಹಿಯನ್ನು ಬಳಸಿ ಪಹಣಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಅಕ್ರಮ ವರ್ಗಾವಣೆ ನಡೆಸಿದ್ದಾರೆ.
ಈ ಕುರಿತಂತೆ ತಹಶೀಲ್ದಾರ್ ಅವರು ಕೂಡಾ ಚುರುಕಾಗಿ ಕ್ರಮ ಕೈಗೊಂಡಿದ್ದು, ಜಿಲ್ಲಾಧಿಕಾರಿಗೆ ಸೂಕ್ತ ವರದಿ ಸಲ್ಲಿಸಿದ್ದಾರೆ. ಜೊತೆಗೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೂಡಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಆಡಳಿತ ವ್ಯವಸ್ಥೆಯ ಭದ್ರತೆ ಹಾಗೂ ಡಿಜಿಟಲ್ ಡಾಕ್ಯುಮೆಂಟ್ನ ಸುರಕ್ಷತೆ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಇದೀಗ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಹಾಗೂ ಭೂಮಿ ಮೂಲ ಮಾಲೀಕನಿಗೆ ಮರಳಿಸುವಂತೆ ಹೋರಾಟ ಆರಂಭವಾಗಿದೆ.
ಕಲಬುರ್ಗಿ ಜಿಲ್ಲೆ ಆಳಂದ್ ಶಾಸಕ ಬಿ.ಆರ್. ಪಾಟೀಲ್ ವಿರುದ್ಧ ಗಂಭೀರ ಆರೋಪ ಹೊರಿಸಿ, ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮಾಧ್ಯಮಗಳ…
ಭಟ್ಕಳ : ಮುರುಡೇಶ್ವರದ ಬಳಿ ಇರುವ ಮೂಡಲಕಟ್ಟಾ ಫ್ಯಾಮಿಲಿ ಫಾರಂ ಹೌಸ್ನಲ್ಲಿ ಅಂದರ್ ಬಾಹರ್ ಜುಗಾರಿ ಆಟದಲ್ಲಿ ತೊಡಗಿದ್ದ ಐವರ…
ರಾಯಚೂರು: ಸಚಿವ ಎನ್.ಎಸ್. ಬೋಸರಾಜು ಅವರ ಹುಟ್ಟುಹಬ್ಬದ ನಿಮಿತ್ತ ನಡೆದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅಚ್ಚರಿಯ ಕಳ್ಳತನ ಘಟನೆ…
ಫರಿದಾಬಾದ್ (ಜೂನ್ 20): ಹರಿಯಾಣದ ಫರಿದಾಬಾದ್ನ ರೋಶನ್ ನಗರದ ವಸತಿಬೀದಿಯೊಂದರಲ್ಲಿ 10 ಅಡಿ ಆಳದ ಕಂದಕದಲ್ಲಿ ಸಡಿಲ ಸ್ಥಿತಿಯಲ್ಲಿದ್ದ ಮಹಿಳೆಯ…
ಬೆಂಗಳೂರು: ರಾಜಕೀಯ ವೈಷಮ್ಯದ ಹಿನ್ನಲೆಯಲ್ಲಿ ಜಮೀನಿನಲ್ಲಿ ಮೇಯುತ್ತಿದ್ದ ಹಸುವಿಗೆ ಮಚ್ಚಿಯಿಂದ ಹಲ್ಲೆ ನಡೆಸಿದ ದಾರುಣ ಘಟನೆ ಯಶವಂತಪುರ ವಿಧಾನಸಭಾ ಕ್ಷೇತ್ರದ…
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…