Latest

ತಹಶೀಲ್ದಾರರ ಡಿಜಿಟಲ್ ಸಹಿ ನಕಲು: ಜಮೀನು ಅಕ್ರಮ ವರ್ಗಾವಣೆಯ ಹಗರಣ ಬಹಿರಂಗ”

ಬೀದರ್ ಜಿಲ್ಲೆಯಲ್ಲಿ ಸರ್ಕಾರದ ಅಧಿಕಾರಿಗಳನ್ನು ಶಾಕ್‌ಗೆ ಒಳಪಡಿಸುವಂತಹ ಭೂಮಿ ಹಗರಣವೊಂದು ಬೆಳಕಿಗೆ ಬಂದಿದೆ. ನಕಲಿ ಡಿಜಿಟಲ್ ಸಹಿ ಬಳಸಿ ಒಬ್ಬರ ಹೆಸರಿನಲ್ಲಿದ್ದ ಭೂಮಿಯನ್ನು ಮತ್ತೊಬ್ಬನ ಹೆಸರಿಗೆ ವರ್ಗಾಯಿಸಿರುವ ಗಂಭೀರ ಘಟನೆ ವರದಿಯಾಗಿದೆ.

ನಂದಗಾಂವ ಗ್ರಾಮದ ಜಗನ್ನಾಥ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 8 ಎಕರೆ 13 ಗುಂಟೆ ಭೂಮಿಯನ್ನು ಮೋಸಪೂರ್ವಕವಾಗಿ ಮೊಹಮ್ಮದ್ ಇಸ್ಮಾಯಿಲ್ ಎಂಬುವರ ಹೆಸರಿಗೆ ವರ್ಗಾವಣೆ ಮಾಡಲಾಗಿದೆ. ಇದನ್ನು ಸರ್ಕಾರದ ಅಧಿಕೃತ ಡಿಜಿಟಲ್ ಸಹಿಯನ್ನು ನಕಲು ಮಾಡಿ ಅಕ್ರಮವಾಗಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಹಗರಣದಲ್ಲಿ ಬೀದರ್ ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ ಸೃಜನ್ ಹಾಗೂ ಅಂಬರೀಶ್ ಎಂಬುವವರು ತಹಶೀಲ್ದಾರ ದಿಲ್ ಶಾದ್ ಅಲಿ ಮಹತ್ ಅವರ ಡಿಜಿಟಲ್ ಸಹಿಯನ್ನು ನಕಲು ಮಾಡಿಕೊಂಡು ಜಮೀನು ದಾಖಲೆಗಳನ್ನು ರಚಿಸಿದ್ದಾರೆ ಎನ್ನಲಾಗಿದೆ. ಅವರು ಪ್ರಿಂಟಾದ ಡಿಜಿಟಲ್ ಸಹಿಯನ್ನು ಬಳಸಿ ಪಹಣಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಅಕ್ರಮ ವರ್ಗಾವಣೆ ನಡೆಸಿದ್ದಾರೆ.

ಈ ಕುರಿತಂತೆ ತಹಶೀಲ್ದಾರ್ ಅವರು ಕೂಡಾ ಚುರುಕಾಗಿ ಕ್ರಮ ಕೈಗೊಂಡಿದ್ದು, ಜಿಲ್ಲಾಧಿಕಾರಿಗೆ ಸೂಕ್ತ ವರದಿ ಸಲ್ಲಿಸಿದ್ದಾರೆ. ಜೊತೆಗೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೂಡಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಆಡಳಿತ ವ್ಯವಸ್ಥೆಯ ಭದ್ರತೆ ಹಾಗೂ ಡಿಜಿಟಲ್ ಡಾಕ್ಯುಮೆಂಟ್‌ನ ಸುರಕ್ಷತೆ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಇದೀಗ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಹಾಗೂ ಭೂಮಿ ಮೂಲ ಮಾಲೀಕನಿಗೆ ಮರಳಿಸುವಂತೆ ಹೋರಾಟ ಆರಂಭವಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

19 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

19 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

19 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

19 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago