ಬೀದರ್ ಜಿಲ್ಲೆಯಲ್ಲಿ ಸರ್ಕಾರದ ಅಧಿಕಾರಿಗಳನ್ನು ಶಾಕ್ಗೆ ಒಳಪಡಿಸುವಂತಹ ಭೂಮಿ ಹಗರಣವೊಂದು ಬೆಳಕಿಗೆ ಬಂದಿದೆ. ನಕಲಿ ಡಿಜಿಟಲ್ ಸಹಿ ಬಳಸಿ ಒಬ್ಬರ ಹೆಸರಿನಲ್ಲಿದ್ದ ಭೂಮಿಯನ್ನು ಮತ್ತೊಬ್ಬನ ಹೆಸರಿಗೆ ವರ್ಗಾಯಿಸಿರುವ ಗಂಭೀರ ಘಟನೆ ವರದಿಯಾಗಿದೆ.
ನಂದಗಾಂವ ಗ್ರಾಮದ ಜಗನ್ನಾಥ ಎಂಬುವರ ಹೆಸರಿನಲ್ಲಿ ದಾಖಲಾಗಿದ್ದ 8 ಎಕರೆ 13 ಗುಂಟೆ ಭೂಮಿಯನ್ನು ಮೋಸಪೂರ್ವಕವಾಗಿ ಮೊಹಮ್ಮದ್ ಇಸ್ಮಾಯಿಲ್ ಎಂಬುವರ ಹೆಸರಿಗೆ ವರ್ಗಾವಣೆ ಮಾಡಲಾಗಿದೆ. ಇದನ್ನು ಸರ್ಕಾರದ ಅಧಿಕೃತ ಡಿಜಿಟಲ್ ಸಹಿಯನ್ನು ನಕಲು ಮಾಡಿ ಅಕ್ರಮವಾಗಿ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಈ ಹಗರಣದಲ್ಲಿ ಬೀದರ್ ತಾಲ್ಲೂಕು ಕಚೇರಿಯ ದ್ವಿತೀಯ ದರ್ಜೆ ಸಹಾಯಕರಾದ ಸೃಜನ್ ಹಾಗೂ ಅಂಬರೀಶ್ ಎಂಬುವವರು ತಹಶೀಲ್ದಾರ ದಿಲ್ ಶಾದ್ ಅಲಿ ಮಹತ್ ಅವರ ಡಿಜಿಟಲ್ ಸಹಿಯನ್ನು ನಕಲು ಮಾಡಿಕೊಂಡು ಜಮೀನು ದಾಖಲೆಗಳನ್ನು ರಚಿಸಿದ್ದಾರೆ ಎನ್ನಲಾಗಿದೆ. ಅವರು ಪ್ರಿಂಟಾದ ಡಿಜಿಟಲ್ ಸಹಿಯನ್ನು ಬಳಸಿ ಪಹಣಿ ದಾಖಲೆಗಳನ್ನು ತಿದ್ದುಪಡಿ ಮಾಡಿ ಅಕ್ರಮ ವರ್ಗಾವಣೆ ನಡೆಸಿದ್ದಾರೆ.
ಈ ಕುರಿತಂತೆ ತಹಶೀಲ್ದಾರ್ ಅವರು ಕೂಡಾ ಚುರುಕಾಗಿ ಕ್ರಮ ಕೈಗೊಂಡಿದ್ದು, ಜಿಲ್ಲಾಧಿಕಾರಿಗೆ ಸೂಕ್ತ ವರದಿ ಸಲ್ಲಿಸಿದ್ದಾರೆ. ಜೊತೆಗೆ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಕೂಡಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಈ ಘಟನೆ ಆಡಳಿತ ವ್ಯವಸ್ಥೆಯ ಭದ್ರತೆ ಹಾಗೂ ಡಿಜಿಟಲ್ ಡಾಕ್ಯುಮೆಂಟ್ನ ಸುರಕ್ಷತೆ ಕುರಿತಾಗಿ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಇದೀಗ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಹಾಗೂ ಭೂಮಿ ಮೂಲ ಮಾಲೀಕನಿಗೆ ಮರಳಿಸುವಂತೆ ಹೋರಾಟ ಆರಂಭವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…