ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿ ನಕಲಿ ಮಾಡಿ ಹಣ ವಿತ್ಡ್ರಾ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಐವರಲ್ಲಿ ಪಾಲಿಕೆ ಆಯುಕ್ತರ ವೆಕ್ತಿಗತ ಸಹಾಯಕ (ಪಿಎ) ಮೊಹಮ್ಮದ್ ನಯಿಮೋದ್ದಿನ್ ಸೇರಿದಂತೆ ವಾಜೀದ್ ಇಮ್ರಾನ್, ಮಿರ್ಜಾ ಬೇಗ್, ನಸೀರ್ ಅಹ್ಮದ್, ಮತ್ತು ಮೊಹಮ್ಮದ್ ರೆಹಮಾನ್ ಸೇರಿದ್ದಾರೆ. ಬಂಧಿತರಿಂದ ₹30 ಲಕ್ಷ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪ್ರಾರಂಭದಲ್ಲಿ ಆಯುಕ್ತರ ನಕಲಿ ಸಹಿಯನ್ನು ಬಳಸಿಕೊಂಡು, ಚೆಕ್ಬುಕ್ ಮೂಲಕ ₹1.32 ಕೋಟಿ ವಿತ್ಡ್ರಾ ಮಾಡಲು ಮೂರು ಚೆಕ್ಗಳನ್ನು ಬ್ಯಾಂಕ್ಗೆ ಕಳುಹಿಸಲಾಗಿತ್ತು. ಮೊದಲ ಚೆಕ್ ಮೂಲಕ ₹35,56,640 ವಿತ್ಡ್ರಾ ಮಾಡಲಾಗಿತ್ತು. ನಂತರ ಇನ್ನೆರಡು ಚೆಕ್ಗಳನ್ನು ಭಾರಿ ಮೊತ್ತದ ಹಣಕ್ಕಾಗಿ ಬಳಸಲು ಪ್ರಯತ್ನಿಸಿದ್ದನ್ನು ಬ್ಯಾಂಕ್ ಸಿಬ್ಬಂದಿ ಗಮನಿಸಿದರು. ಅನುವಾದು ಹೊಂದಿ, ಬ್ಯಾಂಕ್ ಸಿಬ್ಬಂದಿ ಆಯುಕ್ತರ ಕಚೇರಿಗೆ ಈ ಕುರಿತು ಮಾಹಿತಿ ನೀಡಿದರು. ಇದರಿಂದಾಗಿ ತಕ್ಷಣ ಕ್ರಮ ಕೈಗೊಂಡು ದೂರು ದಾಖಲಿಸಲಾಯಿತು. ಹೀಗಾಗಿ ಇದೀಗ, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…