ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತರ ಸಹಿ ನಕಲಿ ಮಾಡಿ ಹಣ ವಿತ್ಡ್ರಾ ಮಾಡಿದ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಐವರಲ್ಲಿ ಪಾಲಿಕೆ ಆಯುಕ್ತರ ವೆಕ್ತಿಗತ ಸಹಾಯಕ (ಪಿಎ) ಮೊಹಮ್ಮದ್ ನಯಿಮೋದ್ದಿನ್ ಸೇರಿದಂತೆ ವಾಜೀದ್ ಇಮ್ರಾನ್, ಮಿರ್ಜಾ ಬೇಗ್, ನಸೀರ್ ಅಹ್ಮದ್, ಮತ್ತು ಮೊಹಮ್ಮದ್ ರೆಹಮಾನ್ ಸೇರಿದ್ದಾರೆ. ಬಂಧಿತರಿಂದ ₹30 ಲಕ್ಷ ಜಪ್ತಿ ಮಾಡಲಾಗಿದ್ದು, ಈ ಸಂಬಂಧ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಪ್ರಾರಂಭದಲ್ಲಿ ಆಯುಕ್ತರ ನಕಲಿ ಸಹಿಯನ್ನು ಬಳಸಿಕೊಂಡು, ಚೆಕ್ಬುಕ್ ಮೂಲಕ ₹1.32 ಕೋಟಿ ವಿತ್ಡ್ರಾ ಮಾಡಲು ಮೂರು ಚೆಕ್ಗಳನ್ನು ಬ್ಯಾಂಕ್ಗೆ ಕಳುಹಿಸಲಾಗಿತ್ತು. ಮೊದಲ ಚೆಕ್ ಮೂಲಕ ₹35,56,640 ವಿತ್ಡ್ರಾ ಮಾಡಲಾಗಿತ್ತು. ನಂತರ ಇನ್ನೆರಡು ಚೆಕ್ಗಳನ್ನು ಭಾರಿ ಮೊತ್ತದ ಹಣಕ್ಕಾಗಿ ಬಳಸಲು ಪ್ರಯತ್ನಿಸಿದ್ದನ್ನು ಬ್ಯಾಂಕ್ ಸಿಬ್ಬಂದಿ ಗಮನಿಸಿದರು. ಅನುವಾದು ಹೊಂದಿ, ಬ್ಯಾಂಕ್ ಸಿಬ್ಬಂದಿ ಆಯುಕ್ತರ ಕಚೇರಿಗೆ ಈ ಕುರಿತು ಮಾಹಿತಿ ನೀಡಿದರು. ಇದರಿಂದಾಗಿ ತಕ್ಷಣ ಕ್ರಮ ಕೈಗೊಂಡು ದೂರು ದಾಖಲಿಸಲಾಯಿತು. ಹೀಗಾಗಿ ಇದೀಗ, ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ತನಿಖೆಯನ್ನು ಮುಂದುವರಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಗೆ ಮುನ್ನವೇ ಮಾರ್ಗದ ಸಮೀಪ ಜಿಲೆಟಿನ್ ಕಡ್ಡಿ ಪತ್ತೆಯಾಗಿದ್ದ ಘಟನೆ ಹೊಸ ಆತಂಕಕ್ಕೆ…
ಕನ್ನಡ ಕಿರುತೆರೆ ಹಾಗೂ ಸಿನಿಮಾರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಟ, ನಿರ್ಮಾಪಕ ಮತ್ತು ಕಂಠದಾನ ಕಲಾವಿದ ದಿಲೀಪ್ ರಾಜ್…
ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ವಿವಿಧ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ವಿವಿಧ…
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…