Latest

ಭ್ರಷ್ಟರ ಬೇಟೆ ಇಂಪ್ಯಾಕ್ಟ್: ಸರಿಯಾದ ರೀತಿಯಲ್ಲಿ ವಿದ್ಯುತ್ ವೈರ್ಗಳ ಅಳವಡಿಕೆಗೆ ಮುಂದಾದ ಅಧಿಕಾರಿಗಳು.

ಕೊಟ್ಟೂರು:- ಪಟ್ಟಣದಲ್ಲಿ ಮರಿ ಕೊಟ್ಟೂರೇಶ್ವರ ದೇವಸ್ಥಾನದಿಂದ ಕೂಡ್ಲಿಗಿ ರಸ್ತೆಯ ಡಾ. ಬಿ.ಆರ್.ಅಂಬೇಡ್ಕರ್ ನಗರದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದೀಪದ ಕಂಬಗಳನ್ನು ನಿರ್ಮಿಸಿದ್ದು,ಕಂಬಗಳಲ್ಲಿರುವ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಹಾಕಿ ಮುಚ್ಚುವುದು ಬಿಟ್ಟು ಹಾಗೆ ವಿದ್ಯುತ್ ತಂತಿಗಳಿಗೆ ಪ್ಯಾಚ್ ಹಾಕಿ ತಂತಿಗಳನ್ನು ಹಾಗೆ ಹೊರಗೆ ಬಿಟ್ಟಿದ್ದಾರೆ.ರಸ್ತೆಯ ಮಧ್ಯದಲ್ಲಿರುವ ಕಂಬಗಳು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಮತ್ತು ಶಾಲೆಗೆ ಹೋಗುವ ವಿಧ್ಯಾರ್ಥಿಗಳಿಗೆ ಕೈಗೆ ಸಿಗುವ ಹಾಗೆ ಇರುವ ಕಾರಣ ಸಾರ್ವಜನಿಕರಿಗೆ ಈ ವಿದ್ಯುತ್ ತಂತಿಗಳು ತಗುಲಿ ಅನಾಹುತ ಸಂಭವಿಸುವ ಮುನ್ಸೂಚನೆಗಳು ಕಾಣುತ್ತಿದೆ.ಅನಾಹುತ ಸಂಭವಿಸುವ ಮೊದಲು ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ತಂತಿಗಳನ್ನು ವಿದ್ಯುತ್ ಕಂಬದ ಒಳಗಡೆ ಸರಿಪಡಿಸಿ ಅನಾಹುತಗಳನ್ನು ತಡೆಗಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ಆರಂಭ ಆಗಿರುವುದರಿಂದ ಹಾಗೂ ತಾಲೂಕಿನಲ್ಲಿ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಬರುತ್ತಿರುವುದರಿಂದ ಮಳೆಗಾಲದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವುಗಳು ಆಗಿರುವುದು ನಮ್ ಕಣ್ ಮುಂದೆ ಅನೇಕ ಉದಾಹರಣೆಗಳು ಇವೆ ಹಾಗಾಗಿ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು ಇಲ್ಲವಾದರೆ ಸಂಬಂಧ ಪಟ್ಟ ಕಚೇರಿಯ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ತಿಳಿಸಿ ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ಸುದ್ದಿಯನ್ನು ಪ್ರಕಟಿಸಲಾಗಿತ್ತು.ಇದಕ್ಕೆ ಸ್ಪಂದಿಸಿ ಸಂಬಂಧಪಟ್ಟ ಅಧಿಕಾರಿಗಳು ಮರಿ ಕೊಟ್ಟುರೇಶ್ವರ ದೇವಸ್ಥಾನದಿಂದ ಕೂಡ್ಲಿಗಿ ರಸ್ತೆಯ ಡಾ. ಬಿ.ಆರ್.ಅಂಬೇಡ್ಕರ್ ನಗರದವರೆಗೆ ವಿದ್ಯುತ್ ದೀಪದ ಕಂಬಗಳಲ್ಲಿ ಹೊರಗಡೆ ಬಂದಂತಹ ತಂತಿಗಳನ್ನು ಒಳಗಡೆ ಹಾಕಿ ಮುಚ್ಚಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿದರು.ಅಪಾಯದಲ್ಲಿರುವ ಈ ಕೆಲಸಕ್ಕೆ ಮುಂದೆ ಬಂದು ಸಾರ್ವಜನಿಕರ ರಕ್ಷಣೆ ಕಾಪಾಡಿದ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಪಟ್ಟಣದ ಸಾರ್ವಜನಿಕರು ಅಭಿನಂದನೆಗಳನ್ನು ಸಲ್ಲಿಸಿದರು. ವರದಿ: ಮಣಿಕಂಠ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

23 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

23 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

23 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

23 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago