Categories: CorruptionLatest

ಆದರ್ಶನಗರ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ: ಪಿಎಸ್‌ಐ ವಿರುದ್ಧ ಸಿಬ್ಬಂದಿಯಿಂದ ಸಾಮೂಹಿಕ ದಯಾಮರಣ ಮನವಿ

ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸೀತಾರಾಮ್ ಲಮಾಣಿ ವಿರುದ್ಧ ಗಂಭೀರ ಭ್ರಷ್ಟಾಚಾರ ಹಾಗೂ ಕಿರುಕುಳ ಆರೋಪಗಳು ಕೇಳಿಬಂದಿವೆ. ಠಾಣೆಯ ಸಿಬ್ಬಂದಿ ಈ ವಿಷಯದಲ್ಲಿ ಬೇಸತ್ತು ಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿರುವುದು ದೊಡ್ಡ ಸಂಚಲನಕ್ಕೆ ಕಾರಣವಾಗಿದೆ.

ಪಿಎಸ್‌ಐ ಲಮಾಣಿ ಅವರನ್ನು ಆದರ್ಶನಗರ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಹಣ ಸಂಗ್ರಹಿಸುವ ಉದ್ದೇಶದಿಂದ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ಸಾರ್ವಜನಿಕರು ಹಾಗೂ ಠಾಣಾ ಸಿಬ್ಬಂದಿ ಇಬ್ಬರೂ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್‌ಗಳು ಮತ್ತು ದೂರುಗಳ ಸಂಬಂಧ ದೂರುದಾರರಿಂದ 10,000 ರೂ.ದಿಂದ 1 ಲಕ್ಷ ರೂ.ವರೆಗೆ ಹಣ ವಸೂಲಿ ಮಾಡಲು ಸಿಬ್ಬಂದಿಗೆ ಒತ್ತಡ ಹೇರಲಾಗುತ್ತಿದೆ ಎನ್ನಲಾಗಿದೆ. ಈ ವಸೂಲಿಗೆ ‘5.0’ ಎಂಬ ಕೋಡ್ ಬಳಸಲಾಗುತ್ತಿದ್ದು, ಅದರ ಅರ್ಥ 50,000 ರೂ. ಎಂದು ಹೇಳಲಾಗಿದೆ.

ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್, ಮಾವಾ (ತಂಬಾಕು) ವ್ಯಾಪಾರಗಳು ಹಾಗೂ ವೇಶ್ಯಾವಾಟಿಕೆ ಸೇರಿದಂತೆ ವಿವಿಧ ಅಕ್ರಮ ಚಟುವಟಿಕೆಗಳಿಂದ ಹಣ ಸಂಗ್ರಹಿಸಲು ಸಹ ಸಿಬ್ಬಂದಿಗೆ ಒತ್ತಡ ಹೇರುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ.

ಈ ಬೆಳವಣಿಗೆ ಪೊಲೀಸ್ ಇಲಾಖೆಯೊಳಗಿನ ಭ್ರಷ್ಟಾಚಾರದ ಬಗ್ಗೆ ಮತ್ತೊಮ್ಮೆ ಪ್ರಶ್ನೆ ಎಬ್ಬಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago