Latest

ನಂಗಲಿ ಠಾಣೆಯಲ್ಲಿ ಭ್ರಷ್ಟಾಚಾರದ ಬಲೆ – ಪೊಲೀಸ್ ಪೇದೆ ಲಂಚದೊಂದಿಗೆ ಬಂಧನ, PSI ವಿಚಾರಣೆಯಲ್ಲಿ”

ಕೋಲಾರ, ಜೂನ್ 11 – ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಅಧಿಕಾರದ ದುರ್ಬಳಕೆ ಹಾಗೂ ಮಾಮೂಲಿ ಹಣ ವಸೂಲಿಗೆ ಸಂಬಂಧಿಸಿದ ಪ್ರಕರಣವೊಂದು ಮುನ್ನೆಚ್ಚರಿಕೆಯ ದಾಳಿಯಿಂದ ಹೊರಬಿದ್ದಿದೆ. ಲೋಕಾಯುಕ್ತ ಇಲಾಖೆಯು ನೇರವಾಗಿ ಚಟುವಟಿಕೆ ನಡೆಸಿ, ಠಾಣೆಯ ಪೇದೆ ಹಾಗೂ ಪಿಎಸ್‌ಐ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಪೇದೆ ಸುರೇಶ್ ಅವರು ನಂಗಲಿಯಲ್ಲಿನ ಬಾರ್ ಮಾಲೀಕರಿಂದ ಪ್ರತಿದಿನ ಮಾಮೂಲಿ ಹಣ ಸಂಗ್ರಹಿಸುತ್ತಿದ್ದರು ಎಂಬ ಆರೋಪಗಳ ಹಿನ್ನೆಲೆಯಲ್ಲಿ, ಲೋಕಾಯುಕ್ತ ಅಧಿಕಾರಿಗಳು ಹಲವು ದಿನಗಳಿಂದ ಗುಪ್ತ ನಿಗಾವಹಿಸಿದ್ದರು. ಇತ್ತೀಚೆಗೆ ನಡೆದ ದಾಳಿಯಲ್ಲಿ, ಸುರೇಶ್ ಅವರು ಬಾರ್ ಮಾಲೀಕ ಪ್ರಶಾಂತ್ ಬಳಿ ₹10,000 ಲಂಚ ಸ್ವೀಕರಿಸುತ್ತಿರುವಾಗಲೇ ಬಲೆಗೆ ಬಿದ್ದಿದ್ದಾರೆ.

ಆತನ ವಶದಲ್ಲಿರುವ ಲೋಕಾಯುಕ್ತರು ನಡೆಸಿದ ಪ್ರಾಥಮಿಕ ವಿಚಾರಣೆಯಲ್ಲಿ, ಈ ಹಣ ಸಂಗ್ರಹ ಕಾರ್ಯ ನಂಗಲಿ ಠಾಣೆಯ ಪಿಎಸ್ಐ ಅರ್ಜುನ್ ಗೌಡ ಅವರ ಆದೇಶದಂತೆ ನಡೆಯುತ್ತಿದ್ದುದಾಗಿ ಸುರೇಶ್ ಒಪ್ಪಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ PSI ಅರ್ಜುನ್ ಗೌಡ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಲಾಗಿದೆ.

ಈ ಭರ್ಜರಿ ದಾಳಿಗೆ ರಾಮನಗರ ಲೋಕಾಯುಕ್ತ ಡಿವೈಎಸ್ಪಿ ಶಿವಪ್ರಸಾದ್ ನೇತೃತ್ವ ವಹಿಸಿದ್ದು, ಕೋಲಾರದ ಲೋಕಾಯುಕ್ತ ಎಸ್‌ಪಿಐ ಧನುಂಜಯ ಅವರು ಕೂಡ ನಂಗಲಿ ಠಾಣೆಗೆ ಭೇಟಿ ನೀಡಿ ತನಿಖೆಯ ಮೇಲ್ವಿಚಾರಣೆ ನಡೆಸಿದ್ದಾರೆ. ಪ್ರಸ್ತುತ ಇಬ್ಬರೂ ಅಧಿಕಾರಿಗಳು ಲೋಕಾಯುಕ್ತದ ವಶದಲ್ಲಿದ್ದು, ತನಿಖೆ ಮುಂದುವರಿದಿದೆ.

ನ್ಯಾಯದ ಸಂಕೇತವಾಗಬೇಕಾದ ಠಾಣೆಯೊಳಗೇ ಲಂಚ ಸಂಸ್ಕೃತಿಯು ದಿನನಿತ್ಯದ ಸಂಪ್ರದಾಯದಂತಾಗಿ ಬೆಳೆದುಬಂದಿರುವುದು ಸಾರ್ವಜನಿಕರಲ್ಲಿ ಭಾರಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಘಟನೆ, ಇತರ ಠಾಣೆಗಳಲ್ಲಿಯೂ ಇಂತಹ ಭ್ರಷ್ಟಾಚಾರ ನಡೆಯುತ್ತಿರುವುದೇ ಎಂಬ ಆತಂಕವನ್ನು ಹುಟ್ಟುಹಾಕಿದ್ದು, ಅಧಿಕಾರಿಗಳ ಮೇಲ್ವಿಚಾರಣೆಯ ಅಗತ್ಯತೆ ಪುನಃ ಒತ್ತಿ ಹೇಳುತ್ತಿದೆ

nazeer ahamad

Recent Posts

ಅತ್ತಿಗೆ ಜೊತೆಗಿನ ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಅಣ್ಣ ;ಕಾಡಿಗೆ ಕರೆದೊಯ್ದು ತಮ್ಮನಿಂದ ಭೀಕರ ಕೊಲೆ..!

ಉತ್ತರ ಕನ್ನಡ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಅಣ್ಣನನ್ನೇ ತಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ…

57 minutes ago

ಗದಗದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಖಾಸಗಿ ದೂರು; ಎಫ್‌ಐಆರ್ ವಿಳಂಬ ಆರೋಪ

ಗದಗ ಜಿಲ್ಲೆಯ ಡಿವೈಎಸ್ಪಿ ಮುರ್ತುಜಾ ಖಾದ್ರಿ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ ಸಿದ್ದರಾಮೇಶ್ವರ ಗಡದ ವಿರುದ್ಧ ಗದಗ ಜೆಎಂಎಫ್‌ಸಿ…

2 hours ago

ರಾಪಿಡೋ, ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ನಿಷೇಧಕ್ಕೆ ಆಗ್ರಹ; ಜಿಲ್ಲಾಧಿಕಾರಿಗೆ ಶಿರಸಿ ಆಟೋ ಚಾಲಕರ ಸಂಘ ಮನವಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್ ಹಾಗೂ ರಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ತಕ್ಷಣವೇ ನಿಷೇಧಿಸಬೇಕು ಎಂದು ಆಗ್ರಹಿಸಿ…

2 hours ago

ಶಿರಸಿ ಬಸ್ ನಿಲ್ದಾಣದಲ್ಲಿ 1.59 ಲಕ್ಷ ರೂ. ಚಿನ್ನಾಭರಣ ಕಳವು ಪ್ರಕರಣ ಭೇದಿಸಿದ ಪೊಲೀಸರು; ಬೆಂಗಳೂರು ಮೂಲದ ಮಹಿಳೆ ಬಂಧನ

ಶಿರಸಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಶಿರಸಿ ನಗರ…

2 hours ago

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

21 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

1 day ago