Latest

ಖೋಟಾ ನೋಟು ದಂಧೆ ಬಯಲಿಗೆ:₹3.75 ಲಕ್ಷ ನಕಲಿ ನೋಟು ವಶ

ದಾವಣಗೆರೆ, ಜು.25 – ಖೋಟಾ ನೋಟು ಚಲಾವಣೆಯ ದೊಡ್ಡ ಜಾಲವೊಂದನ್ನು ದಾವಣಗೆರೆ ಜಿಲ್ಲೆ ಬಸವಾಪಟ್ಟಣ ಪೊಲೀಸರು ಪತ್ತೆಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಹೂವಿನಹಡಗಲಿ ತಾಲೂಕಿನ ನಡುವಿನ ತಾಂಡದ ಸಂತೋಷಕುಮಾರ (32), ಕೊಟ್ಟೂರು ತಾಲ್ಲೂಕಿನ ಬೇವೂರು ಗ್ರಾಮದ ವಿರೇಶ (37), ದಾವಣಗೆರೆ ತಾಲೂಕಿನ ಕುಕ್ಕವಾಡದ ಕುಬೇರಪ್ಪ (60) ಮತ್ತು ಅದೇ ಬೇವೂರಿನ ಹನುಮಂತಪ್ಪ (75) ಎನ್ನಲಾಗಿದೆ.

ಚಿರಡೋಣಿಯಲ್ಲಿ ಖಚಿತ ಮಾಹಿತಿ, ದಾಳಿಗೆ ಚಾಲನೆ

ಚಿರಡೋಣಿ ಗ್ರಾಮದ ದೊಡ್ಡಘಟ್ಟ ರಸ್ತೆಯ ಶಾಂತಿವನದ ಬಳಿಯಲ್ಲಿ ಖೋಟಾ ನೋಟು ಚಲಾವಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಹಿನ್ನೆಲೆಯಲ್ಲಿ, ಚನ್ನಗಿರಿ ಉಪವಿಭಾಗದ ಎಎಸ್‌ಪಿ ಮಾರ್ಗದರ್ಶನದಲ್ಲಿ ಹಾಗೂ ಸಂತೇಬೆನ್ನೂರು ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ನೇತೃತ್ವದಲ್ಲಿ, ಬಸವಾಪಟ್ಟಣ ಠಾಣೆ ಪಿಎಸ್‌ಐ ಇಮ್ತಿಯಾಜ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಸಂತೋಷಕುಮಾರ ಹಾಗೂ ರಾಮಪ್ಪ ಎಂಬ ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಅವರ ಬಳಿ ₹500 ಮುಖಬೆಲೆಯ ₹2 ಲಕ್ಷ ನಕಲಿ ನೋಟು ಪತ್ತೆಯಾಯಿತು. ಜೊತೆಗೆ ಬಳಸಿದ ಬೈಕ್‌ ಸಹ ವಶಪಡಿಸಿಕೊಳ್ಳಲಾಯಿತು.

ಹಳೆ ಆರೋಪಿ ಕಣ್ಗೂಡಿಸಿದ ಕುಬೇರಪ್ಪ ಸಿಕ್ಕಿಬಿದ್ದಿದ್ದು ಹೇಗೆ?

ಆರೋಪಿಗಳ ವಿಚಾರಣೆ ವೇಳೆ ಈ ದಂಧೆಗೆ ಹಿಂದೆಯೂ ಸೇರ್ಪಡೆ ಹೊಂದಿದ್ದ ಕುಬೇರಪ್ಪ ಎಂಬಾತ ಪ್ರಮುಖ ಪಾತ್ರ ವಹಿಸುತ್ತಿದ್ದಾನೆ ಎಂಬುದು ಬೆಳಕಿಗೆ ಬಂತು. ತಕ್ಷಣವೇ ಪೊಲೀಸರು ಆತನ ಅಡಗಿರುವ ಸ್ಥಳದ ಮೇಲೆ ದಾಳಿ ನಡೆಸಿದಾಗ, ಆತ ಹಾಗೂ ಅವನ ಸಹಚರ ಹನುಮಂತಪ್ಪನಿಂದ ₹500 ಮುಖಬೆಲೆಯ ₹28,000 ಹಾಗೂ ₹200 ಮುಖಬೆಲೆಯ ₹47,400 ನಕಲಿ ನೋಟು ಪತ್ತೆಯಾಯಿತು.

ಮತ್ತೆ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಆರೋಪಿಯ ಬಳಿ ₹500 ಮತ್ತು ₹200 ಮುಖಬೆಲೆಯ ₹1 ಲಕ್ಷ ನಕಲಿ ನೋಟು ಪತ್ತೆಯಾಗಿ, ಒಟ್ಟು ₹3,75,400 ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖೋಟಾ ನೋಟುಗಳ ದಂಧೆ ತೀವ್ರಗೊಂಡಿರುವ ಹಿನ್ನೆಲೆ, ಪೊಲೀಸರು ದಾವಣಗೆರೆಯಲ್ಲಿಯೂ ಇದೇ ಮಾದರಿಯ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಮೈಸೂರು, ತುಮಕೂರು ಸೇರಿ ಹಲವು ಕಡೆ ಖೋಟಾ ನೋಟು ಚಲಾಯಿಸಿದ್ದರ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸಿದ್ದು, ಈ ಸಂಬಂಧ ಇನ್ನಷ್ಟು ಮಾಹಿತಿಗಾಗಿ ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

ಗಂಡನ ಬೆಂಬಲದಿಂದ ಸರ್ಕಾರಿ ಉದ್ಯೋಗ ಪಡೆದ ಪತ್ನಿ: ದೂರವಾಗಿದ್ದರಿಂದ ಮನನೊಂದ ಪತಿ ಆತ್ಮಹತ್ಯೆ

ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…

5 hours ago

ಮಲೆನಾಡಿನಲ್ಲಿ ನಿಗೂಢವಾಗಿ ಹಾರಾಡಿದ್ದ ವಿಮಾನದ ರಹಸ್ಯ ಬಯಲು..!

ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…

5 hours ago

ಧಾರವಾಡ ಅರಣ್ಯದಲ್ಲಿ ದಾರುಣ ಘಟನೆ: ಕಾರಿನಲ್ಲೇ ಸುಟ್ಟ ಸ್ಥಿತಿಯಲ್ಲಿ ಮಾಜಿ ಶಾಸಕನ ಪುತ್ರ

ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…

16 hours ago

ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಗಳಲ್ಲೇ ಹೆಚ್ಚಿನ ಕೊರತೆ

ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…

21 hours ago

ಸರ್ಕಾರಿ ನೌಕರರಿಗೆ ಹೊಸ ನಿಯಮ: ಮುಂಬಡ್ತಿಗೆ ತರಬೇತಿ ಕಡ್ಡಾಯ

ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…

22 hours ago

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…

1 day ago