Latest

ಖೋಟಾ ನೋಟು ದಂಧೆ ಬಯಲಿಗೆ:₹3.75 ಲಕ್ಷ ನಕಲಿ ನೋಟು ವಶ

ದಾವಣಗೆರೆ, ಜು.25 – ಖೋಟಾ ನೋಟು ಚಲಾವಣೆಯ ದೊಡ್ಡ ಜಾಲವೊಂದನ್ನು ದಾವಣಗೆರೆ ಜಿಲ್ಲೆ ಬಸವಾಪಟ್ಟಣ ಪೊಲೀಸರು ಪತ್ತೆಹಚ್ಚಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ₹3.75 ಲಕ್ಷ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರು ಹೂವಿನಹಡಗಲಿ ತಾಲೂಕಿನ ನಡುವಿನ ತಾಂಡದ ಸಂತೋಷಕುಮಾರ (32), ಕೊಟ್ಟೂರು ತಾಲ್ಲೂಕಿನ ಬೇವೂರು ಗ್ರಾಮದ ವಿರೇಶ (37), ದಾವಣಗೆರೆ ತಾಲೂಕಿನ ಕುಕ್ಕವಾಡದ ಕುಬೇರಪ್ಪ (60) ಮತ್ತು ಅದೇ ಬೇವೂರಿನ ಹನುಮಂತಪ್ಪ (75) ಎನ್ನಲಾಗಿದೆ.

ಚಿರಡೋಣಿಯಲ್ಲಿ ಖಚಿತ ಮಾಹಿತಿ, ದಾಳಿಗೆ ಚಾಲನೆ

ಚಿರಡೋಣಿ ಗ್ರಾಮದ ದೊಡ್ಡಘಟ್ಟ ರಸ್ತೆಯ ಶಾಂತಿವನದ ಬಳಿಯಲ್ಲಿ ಖೋಟಾ ನೋಟು ಚಲಾವಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಹಿನ್ನೆಲೆಯಲ್ಲಿ, ಚನ್ನಗಿರಿ ಉಪವಿಭಾಗದ ಎಎಸ್‌ಪಿ ಮಾರ್ಗದರ್ಶನದಲ್ಲಿ ಹಾಗೂ ಸಂತೇಬೆನ್ನೂರು ವೃತ್ತ ನಿರೀಕ್ಷಕ ಲಿಂಗನಗೌಡ ನೆಗಳೂರು ನೇತೃತ್ವದಲ್ಲಿ, ಬಸವಾಪಟ್ಟಣ ಠಾಣೆ ಪಿಎಸ್‌ಐ ಇಮ್ತಿಯಾಜ್ ಹಾಗೂ ತಂಡ ಕಾರ್ಯಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಸಂತೋಷಕುಮಾರ ಹಾಗೂ ರಾಮಪ್ಪ ಎಂಬ ಇಬ್ಬರನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ, ಅವರ ಬಳಿ ₹500 ಮುಖಬೆಲೆಯ ₹2 ಲಕ್ಷ ನಕಲಿ ನೋಟು ಪತ್ತೆಯಾಯಿತು. ಜೊತೆಗೆ ಬಳಸಿದ ಬೈಕ್‌ ಸಹ ವಶಪಡಿಸಿಕೊಳ್ಳಲಾಯಿತು.

ಹಳೆ ಆರೋಪಿ ಕಣ್ಗೂಡಿಸಿದ ಕುಬೇರಪ್ಪ ಸಿಕ್ಕಿಬಿದ್ದಿದ್ದು ಹೇಗೆ?

ಆರೋಪಿಗಳ ವಿಚಾರಣೆ ವೇಳೆ ಈ ದಂಧೆಗೆ ಹಿಂದೆಯೂ ಸೇರ್ಪಡೆ ಹೊಂದಿದ್ದ ಕುಬೇರಪ್ಪ ಎಂಬಾತ ಪ್ರಮುಖ ಪಾತ್ರ ವಹಿಸುತ್ತಿದ್ದಾನೆ ಎಂಬುದು ಬೆಳಕಿಗೆ ಬಂತು. ತಕ್ಷಣವೇ ಪೊಲೀಸರು ಆತನ ಅಡಗಿರುವ ಸ್ಥಳದ ಮೇಲೆ ದಾಳಿ ನಡೆಸಿದಾಗ, ಆತ ಹಾಗೂ ಅವನ ಸಹಚರ ಹನುಮಂತಪ್ಪನಿಂದ ₹500 ಮುಖಬೆಲೆಯ ₹28,000 ಹಾಗೂ ₹200 ಮುಖಬೆಲೆಯ ₹47,400 ನಕಲಿ ನೋಟು ಪತ್ತೆಯಾಯಿತು.

ಮತ್ತೆ ನಡೆದ ಕಾರ್ಯಾಚರಣೆಯಲ್ಲಿ ಮತ್ತೊಬ್ಬ ಆರೋಪಿಯ ಬಳಿ ₹500 ಮತ್ತು ₹200 ಮುಖಬೆಲೆಯ ₹1 ಲಕ್ಷ ನಕಲಿ ನೋಟು ಪತ್ತೆಯಾಗಿ, ಒಟ್ಟು ₹3,75,400 ಮೌಲ್ಯದ ನಕಲಿ ನೋಟುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ರಾಯಚೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖೋಟಾ ನೋಟುಗಳ ದಂಧೆ ತೀವ್ರಗೊಂಡಿರುವ ಹಿನ್ನೆಲೆ, ಪೊಲೀಸರು ದಾವಣಗೆರೆಯಲ್ಲಿಯೂ ಇದೇ ಮಾದರಿಯ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದ ತಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಮೈಸೂರು, ತುಮಕೂರು ಸೇರಿ ಹಲವು ಕಡೆ ಖೋಟಾ ನೋಟು ಚಲಾಯಿಸಿದ್ದರ ಬಗ್ಗೆ ಪ್ರಾಥಮಿಕ ಮಾಹಿತಿ ಲಭಿಸಿದ್ದು, ಈ ಸಂಬಂಧ ಇನ್ನಷ್ಟು ಮಾಹಿತಿಗಾಗಿ ವಿಸ್ತೃತ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago