Latest

40 ಕೋಟಿ ರೂ, ವಂಚನೆ ಮಾಡಿಕೊಂಡು ದಂಪತಿ ಪರಾರಿ : ಬೆಂಗಳೂರು ನಿವಾಸಿಗಳು ಶಾಕ್!

ಬೆಂಗಳೂರು, ಜುಲೈ 6 – ಚೀಟಿ ಹಣದ ಆಸೆಗೆ ಬಿದ್ದು ಕೋಟ್ಯಾಂತರ ರೂಪಾಯಿಗಳನ್ನು ಹೋದವರು ಶತಾರು. ಇದೀಗ, ಬೆಂಗಳೂರಿನ ಜರಗನಹಳ್ಳಿಯಲ್ಲಿ ದೊಡ್ಡ ಪ್ರಮಾಣದ ಚೀಟಿ ವಂಚನೆಯ ಪ್ರಕರಣ ವರದಿಯಾಗಿದೆ. ಸುಮಾರು 40 ಕೋಟಿ ರೂ. ವಂಚನೆ ಮಾಡಿದ ದಂಪತಿ ಈಗ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಆರೋಪಿಗಳು ಸುಧಾ ಮತ್ತು ಸಿದ್ದಾಚಾರಿ ಎಂಬ ದಂಪತಿ. ಇವರು ಕಳೆದ 20 ವರ್ಷಗಳಿಂದ ಜರಗನಹಳ್ಳಿಯಲ್ಲಿ ಚೀಟಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇದರಲ್ಲಿ ಸುಮಾರು 600ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು, ಕೆಲವರು 5 ಲಕ್ಷದಿಂದ 10 ಲಕ್ಷ ರೂಪಾಯಿವರೆಗೂ ಹಣ ಹೂಡಿಕೆ ಮಾಡಿದ್ದರು. ಆದರೆ, ಕಳೆದ ಒಂದು ವರ್ಷದಿಂದ ಸುಧಾ ದಂಪತಿ ಚೀಟಿ ಹಣ ವಾಪಸ್ ಕೊಡದೇ ವಿಳಂಬ ಮಾಡುತ್ತಿದ್ದರು.

ಪರಾರಿ ಆಗಿರುವ ಘಟನೆ ಜೂನ್ 3ರಂದು ಮಧ್ಯರಾತ್ರಿ ನಡೆದಿದೆ. ತಮ್ಮ ಇಬ್ಬರು ಮಕ್ಕಳೊಂದಿಗೆ ದಂಪತಿ ಮನೆಯನ್ನೇ ಬಿಟ್ಟು ಓಡಿದ್ದಾರೆ. ಈ ಹಿಂದೆ ಬ್ಯಾಂಕ್‌ನಲ್ಲಿ ಇರುವ ಚಿನ್ನವಸ್ತುಗಳನ್ನು ತೆಗೆದು, ಮೊಬೈಲ್‌ಗಳನ್ನು ಮನೆಯಲ್ಲೇ ಬಿಟ್ಟು, ಬೇರೆ ವಸ್ತುಗಳೊಂದಿಗೆ ನಾಪತ್ತೆಯಾಗಿದ್ದಾರೆ.

ಅವರ ಮನೆಯವರು ಮರುದಿನವೇ ಪುಟ್ಟೇನಹಳ್ಳಿ ಠಾಣೆಗೆ ಕಾಣೆಯಾದ ದೂರು ನೀಡಿದ್ದು, ಬಳಿಕ ಹಣ ಕಳೆದುಕೊಂಡ ಸಾರ್ವಜನಿಕರೂ ಒಟ್ಟುಗೂಡಿ FIR ದಾಖಲಿಸಿದ್ದಾರೆ. ಇದೀಗ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸುಧಾ ಮತ್ತು ಸಿದ್ದಾಚಾರಿ ಅವರು ಸುಳಿವು ಸಹ ಬಿಟ್ಟಿಲ್ಲ. ಮೊಬೈಲ್‌ ಬಳಸುವುದು ಇಲ್ಲ, ಸಂಬಂಧಿಕರಿಗೂ ಸಂಪರ್ಕವಿಲ್ಲ – ಇದರಿಂದಾಗಿ ಅವರು ಭೂಗತ ಜೀವನದತ್ತ ತಿರುಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ವಂಚನೆಗೆ ಒಳಪಟ್ಟ ಸಾರ್ವಜನಿಕರು ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಿ, ನ್ಯಾಯ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ.

ಈ ಪ್ರಕರಣವು ಮತ್ತೆ ಒಮ್ಮೆ ಖಾಸಗಿ ಚೀಟಿ ವ್ಯವಹಾರಗಳ ಅಪಾಯವನ್ನು ಸಾಬೀತು ಪಡಿಸಿದೆ. ಸಾರ್ವಜನಿಕರು ಈ ತರಹದ ಹೂಡಿಕೆಗಳಲ್ಲಿ ಎಚ್ಚರಿಕೆಯಿಂದ ಇರಬೇಕಾದ ಅವಶ್ಯಕತೆಯನ್ನು ನೆನಪಿಸಿದೆ.

nazeer ahamad

Recent Posts

ಜಾಗತಿಕ ಬ್ಯಾಂಕಿಂಗ್ ದಿಗ್ಗಜ JPMorganನಲ್ಲಿ ಲೈಂಗಿಕ ಕಿರುಕುಳ ಆರೋಪ: ಭಾರತೀಯ ಉದ್ಯೋಗಿಗೆ ಸೆಕ್ಸ್ ಮಾಡುವುದಕ್ಕೆ ನಿರ್ದೇಶಕಿಯಿಂದ ಒತ್ತಾಯ

ಜಾಗತಿಕ ಬ್ಯಾಂಕಿಂಗ್ ಕ್ಷೇತ್ರದ ಪ್ರಮುಖ ಸಂಸ್ಥೆಯಾದ JPMorgan Chase ನಲ್ಲಿ ಗಂಭೀರ ವಿವಾದವೊಂದು ಸ್ಫೋಟಗೊಂಡಿದೆ. ಸಂಸ್ಥೆಯ ಲಿವರೇಜ್ಡ್ ಫೈನಾನ್ಸ್ ವಿಭಾಗದ…

12 hours ago

ಲಿಂಗಸಗೂರು ತಾಲೂಕಿನಲ್ಲಿ ಕಳ್ಳಭಟ್ಟಿ ದಂಧೆ ವಿರುದ್ಧ ಅಬಕಾರಿ ದಾಳಿ: 4 ಲೀಟರ್ ಸರಾಯಿ ವಶ, ಮೂವರು ಬಂಧನ

ಲಿಂಗಸಗೂರು ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಕಳ್ಳಭಟ್ಟಿ ಸರಾಯಿ ದಂಧೆಗೆ ಕಡಿವಾಣ ಹಾಕಲು ಅಬಕಾರಿ ಇಲಾಖೆ ಚುರುಕಾಗಿ ಕಾರ್ಯಾಚರಣೆ ನಡೆಸುತ್ತಿದ್ದು,…

14 hours ago

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

2 days ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

2 days ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

2 days ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

2 days ago