Latest

40 ಕೋಟಿ ರೂ, ವಂಚನೆ ಮಾಡಿಕೊಂಡು ದಂಪತಿ ಪರಾರಿ : ಬೆಂಗಳೂರು ನಿವಾಸಿಗಳು ಶಾಕ್!

ಬೆಂಗಳೂರು, ಜುಲೈ 6 – ಚೀಟಿ ಹಣದ ಆಸೆಗೆ ಬಿದ್ದು ಕೋಟ್ಯಾಂತರ ರೂಪಾಯಿಗಳನ್ನು ಹೋದವರು ಶತಾರು. ಇದೀಗ, ಬೆಂಗಳೂರಿನ ಜರಗನಹಳ್ಳಿಯಲ್ಲಿ ದೊಡ್ಡ ಪ್ರಮಾಣದ ಚೀಟಿ ವಂಚನೆಯ ಪ್ರಕರಣ ವರದಿಯಾಗಿದೆ. ಸುಮಾರು 40 ಕೋಟಿ ರೂ. ವಂಚನೆ ಮಾಡಿದ ದಂಪತಿ ಈಗ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಆರೋಪಿಗಳು ಸುಧಾ ಮತ್ತು ಸಿದ್ದಾಚಾರಿ ಎಂಬ ದಂಪತಿ. ಇವರು ಕಳೆದ 20 ವರ್ಷಗಳಿಂದ ಜರಗನಹಳ್ಳಿಯಲ್ಲಿ ಚೀಟಿ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇದರಲ್ಲಿ ಸುಮಾರು 600ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು, ಕೆಲವರು 5 ಲಕ್ಷದಿಂದ 10 ಲಕ್ಷ ರೂಪಾಯಿವರೆಗೂ ಹಣ ಹೂಡಿಕೆ ಮಾಡಿದ್ದರು. ಆದರೆ, ಕಳೆದ ಒಂದು ವರ್ಷದಿಂದ ಸುಧಾ ದಂಪತಿ ಚೀಟಿ ಹಣ ವಾಪಸ್ ಕೊಡದೇ ವಿಳಂಬ ಮಾಡುತ್ತಿದ್ದರು.

ಪರಾರಿ ಆಗಿರುವ ಘಟನೆ ಜೂನ್ 3ರಂದು ಮಧ್ಯರಾತ್ರಿ ನಡೆದಿದೆ. ತಮ್ಮ ಇಬ್ಬರು ಮಕ್ಕಳೊಂದಿಗೆ ದಂಪತಿ ಮನೆಯನ್ನೇ ಬಿಟ್ಟು ಓಡಿದ್ದಾರೆ. ಈ ಹಿಂದೆ ಬ್ಯಾಂಕ್‌ನಲ್ಲಿ ಇರುವ ಚಿನ್ನವಸ್ತುಗಳನ್ನು ತೆಗೆದು, ಮೊಬೈಲ್‌ಗಳನ್ನು ಮನೆಯಲ್ಲೇ ಬಿಟ್ಟು, ಬೇರೆ ವಸ್ತುಗಳೊಂದಿಗೆ ನಾಪತ್ತೆಯಾಗಿದ್ದಾರೆ.

ಅವರ ಮನೆಯವರು ಮರುದಿನವೇ ಪುಟ್ಟೇನಹಳ್ಳಿ ಠಾಣೆಗೆ ಕಾಣೆಯಾದ ದೂರು ನೀಡಿದ್ದು, ಬಳಿಕ ಹಣ ಕಳೆದುಕೊಂಡ ಸಾರ್ವಜನಿಕರೂ ಒಟ್ಟುಗೂಡಿ FIR ದಾಖಲಿಸಿದ್ದಾರೆ. ಇದೀಗ ಪುಟ್ಟೇನಹಳ್ಳಿ ಠಾಣೆಯ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಸುಧಾ ಮತ್ತು ಸಿದ್ದಾಚಾರಿ ಅವರು ಸುಳಿವು ಸಹ ಬಿಟ್ಟಿಲ್ಲ. ಮೊಬೈಲ್‌ ಬಳಸುವುದು ಇಲ್ಲ, ಸಂಬಂಧಿಕರಿಗೂ ಸಂಪರ್ಕವಿಲ್ಲ – ಇದರಿಂದಾಗಿ ಅವರು ಭೂಗತ ಜೀವನದತ್ತ ತಿರುಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ವಂಚನೆಗೆ ಒಳಪಟ್ಟ ಸಾರ್ವಜನಿಕರು ಗೃಹ ಸಚಿವ ಜಿ. ಪರಮೇಶ್ವರ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೊರೆ ಹೋಗಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸಿ, ನ್ಯಾಯ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ.

ಈ ಪ್ರಕರಣವು ಮತ್ತೆ ಒಮ್ಮೆ ಖಾಸಗಿ ಚೀಟಿ ವ್ಯವಹಾರಗಳ ಅಪಾಯವನ್ನು ಸಾಬೀತು ಪಡಿಸಿದೆ. ಸಾರ್ವಜನಿಕರು ಈ ತರಹದ ಹೂಡಿಕೆಗಳಲ್ಲಿ ಎಚ್ಚರಿಕೆಯಿಂದ ಇರಬೇಕಾದ ಅವಶ್ಯಕತೆಯನ್ನು ನೆನಪಿಸಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago