Latest

ಅತ್ಯಾಚಾರ ಆರೋಪದಡಿಯಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್ ನೀಡಿದ ಕೋರ್ಟ್

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಮತ್ತೊಂದು ಕೋರ್ಟ್ ತೀವ್ರ ಎದುರಾಗಿದೆ. ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ಅವರು 3 ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೊಂದು ಇಂದು ವಜಾ ಮಾಡಿ ಶಾಕ್ ನೀಡಿದೆ.

ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣಗಳಲ್ಲಿ ಸಾಕ್ಷಿಗಳ ವೀಕ್ಷಣೆಗೆ ನ್ಯಾಯಾಲಯ ಅನುಮತಿ ನೀಡಿದ್ದಾದರೂ, ಜಾಮೀನು ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ನ್ಯಾಯಾಲಯ, ಆರೋಪದ ಗಂಭೀರತೆಯ ಹಿನ್ನೆಲೆಯಲ್ಲಿ ಜಾಮೀನು ನೀಡಲು ನಿರಾಕರಿಸಿದೆ.

ಇದಕ್ಕೆ ಮೊದಲು, ತಮ್ಮ ವಿರುದ್ಧ ನಡೆಯುತ್ತಿರುವ ದೋಷಾರೋಪನ ಪ್ರಕ್ರಿಯೆ ಮುಂದೂಡಬೇಕೆಂದು ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಗಳ ತಿರಸ್ಕಾರ, ಪ್ರಜ್ವಲ್‌ಗೆ ಎರಡನೇ ಬಾರಿಗೆ ಕಾನೂನುಭದ್ರತೆಯ ಆಘಾತ ತರುವಂತಾಗಿದೆ.

ಇತ್ತ ಪ್ರಕರಣ ಸಂಬಂಧ ತನಿಖೆ ನಿರಂತರ ಮುಂದುವರಿದಿದ್ದು, ಸಾಕ್ಷ್ಯಾಧಾರ ಸಂಗ್ರಹ, ದಾಖಲೆ ಪರಿಶೀಲನೆ ಕೆಲಸ ತೀವ್ರಗೊಂಡಿದೆ. ಪ್ರಜ್ವಲ್ ವಿರುದ್ಧ ಹೂರಹೊಂದಿರುವ ಆರೋಪಗಳು ಗಂಭೀರವಾಗಿದ್ದು, ನ್ಯಾಯಾಲಯದ ನಿರ್ಧಾರಗಳು ತೀವ್ರ ಕಾನೂನು ಪ್ರಕ್ರಿಯೆಯತ್ತ ದಾರಿ ಹಾಕಿವೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

12 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

12 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

12 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

12 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago