ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾಚಾರ ಪ್ರಕರಣ ಸಂಬಂಧ ಮತ್ತೊಂದು ಕೋರ್ಟ್ ತೀವ್ರ ಎದುರಾಗಿದೆ. ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ಅವರು 3 ಪ್ರತ್ಯೇಕ ಪ್ರಕರಣಗಳಲ್ಲಿ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಗಳನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವೊಂದು ಇಂದು ವಜಾ ಮಾಡಿ ಶಾಕ್ ನೀಡಿದೆ.
ಪ್ರಜ್ವಲ್ ವಿರುದ್ಧದ ಅತ್ಯಾಚಾರ ಪ್ರಕರಣಗಳಲ್ಲಿ ಸಾಕ್ಷಿಗಳ ವೀಕ್ಷಣೆಗೆ ನ್ಯಾಯಾಲಯ ಅನುಮತಿ ನೀಡಿದ್ದಾದರೂ, ಜಾಮೀನು ವಿಚಾರದಲ್ಲಿ ಕಠಿಣ ನಿಲುವು ತಾಳಿರುವ ನ್ಯಾಯಾಲಯ, ಆರೋಪದ ಗಂಭೀರತೆಯ ಹಿನ್ನೆಲೆಯಲ್ಲಿ ಜಾಮೀನು ನೀಡಲು ನಿರಾಕರಿಸಿದೆ.
ಇದಕ್ಕೆ ಮೊದಲು, ತಮ್ಮ ವಿರುದ್ಧ ನಡೆಯುತ್ತಿರುವ ದೋಷಾರೋಪನ ಪ್ರಕ್ರಿಯೆ ಮುಂದೂಡಬೇಕೆಂದು ಪ್ರಜ್ವಲ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಈಗ ಮತ್ತೆ ಜಾಮೀನು ಅರ್ಜಿಗಳ ತಿರಸ್ಕಾರ, ಪ್ರಜ್ವಲ್ಗೆ ಎರಡನೇ ಬಾರಿಗೆ ಕಾನೂನುಭದ್ರತೆಯ ಆಘಾತ ತರುವಂತಾಗಿದೆ.
ಇತ್ತ ಪ್ರಕರಣ ಸಂಬಂಧ ತನಿಖೆ ನಿರಂತರ ಮುಂದುವರಿದಿದ್ದು, ಸಾಕ್ಷ್ಯಾಧಾರ ಸಂಗ್ರಹ, ದಾಖಲೆ ಪರಿಶೀಲನೆ ಕೆಲಸ ತೀವ್ರಗೊಂಡಿದೆ. ಪ್ರಜ್ವಲ್ ವಿರುದ್ಧ ಹೂರಹೊಂದಿರುವ ಆರೋಪಗಳು ಗಂಭೀರವಾಗಿದ್ದು, ನ್ಯಾಯಾಲಯದ ನಿರ್ಧಾರಗಳು ತೀವ್ರ ಕಾನೂನು ಪ್ರಕ್ರಿಯೆಯತ್ತ ದಾರಿ ಹಾಕಿವೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…