Latest

ಕೋವಿಡ್​ ನಿಂದಾಗಿ ಮನುಷ್ಯರಲ್ಲಿ ವಯಸ್ಸಾಗುವಿಕೆ ವೇಗ ಹೆಚ್ಚಾಗಿದೆ : ಅಧ್ಯಯನ

ಎರಡೂವರೆ ವರ್ಷಗಳ ಕೋವಿಡ್​ 19 ಕುರಿತಾದ ಸಂಶೋಧನೆಗಳ ಪ್ರಕಾರ, ವಿಜ್ಞಾನಿಗಳು ಕೊರೊನಾ ವೈರಸ್​ ದೇಹದಲ್ಲಿನ ಅನೇಕ ಅಂಗಗಳಿಗೆ ಹಾನಿಯನ್ನುಂಟು ಮಾಡುತ್ತೆ ಎಂಬ ವಿಚಾರವನ್ನು ದೃಢೀಕರಿಸಿದ್ದಾರೆ. ಸೇಂಟ್​ ಲೂಯಿಸ್​ನಲ್ಲಿರುವ ವಾಷಿಂಗ್ಟನ್​ ವಿಶ್ವ ವಿದ್ಯಾಲಯದ ಕ್ಲಿನಿಕಲ್​ ಎಪಿಡೆಮಿಯಾಲಜಿ ಸೆಂಟರ್​ನ ನಿರ್ದೇಶಕ ಡಾ. ಜಿಯಾದ್​ ಅಲ್​ – ಅಲಿ ನೀಡಿರುವ ಮಾಹಿತಿಯ ಪ್ರಕಾರ ಕೋವಿಡ್​ 19 ಸೋಂಕಿಗೆ ಒಳಗಾದ ವ್ಯಕ್ತಿಯು ಬಹು ಬೇಗನೇ ವೃದ್ಧಾಪ್ಯವನ್ನು ಸಮೀಪಿಸುತ್ತಾನೆ ಎಂದು ತಿಳಿದು ಬಂದಿದೆ.
ವಿಜ್ಞಾನಿಗಳ ಅಧ್ಯಯನದ ಪ್ರಕಾರ ಮುಖ್ಯ ಸಂಶೋಧಕ, ಡಾ ಅಲ್​-ಅಲಿ ಯುನೈಟೆಡ್​ ಸ್ಟೇಟ್​ ಆಫ್​ ಅಮೆರಿಕಾದ್ಯಂತ ಲಕ್ಷಾಂತರ ಜನರನ್ನು ಸಮೀಕ್ಷೆ ಮಾಡಿದರು. ಸೋಂಕಿತ ರೋಗಿಗಳ ಮೂತ್ರಪಿಂಡಗಳು, ಹೃದಯಗಳು ಹಾಗೂ ಮೆದುಳುಗಳ ಮೇಲೆ ವೈರಸ್​​ನ ಪರಿಣಾಮವನ್ನು ವಿಜ್ಞಾನಿಗಳು ಗಮನಿಸಿದ್ದಾರೆ. ನಾವು ಅಧ್ಯಯನದ ಸಂದರ್ಭದಲ್ಲಿ ಗಮನಿಸಿದ ವಿಚಾರ ಏನೆಂದರೆ ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯು ಮುಂದಿನ ದಿನಗಳಲ್ಲಿ ಮೂತ್ರಪಿಂಡ ಸಂಬಂಧಿ ಕಾಯಿಲೆಯನ್ನು ಅನುಭವಿಸುತ್ತಿದ್ದಾರೆ. ಇದು ಸಾಮಾನ್ಯವಾಗಿ ವಯಸ್ಸಾದವರಲ್ಲಿ ಕಂಡು ಬರುವ ಸಮಸ್ಯೆಯಾಗಿದೆ ಎಂದು ಅಲ್​ ಅಲಿ ಹೇಳಿದ್ದಾರೆ .ಡಾ.ಜಿಯಾದ್​ ಅಲ್​ ಅಲಿ ಪ್ರಸ್ತುತ ಯುಸಿಎಸ್​ಎಫ್​ನಲ್ಲಿ ಸಾಂಕ್ರಾಮಿಕ ರೋಗ ತಜ್ಞ ಡಾ. ಮೈಕಲ್​ ಪೆಲುಸೊರೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago