ಯಲ್ಲಾಪುರ ತಾಲೂಕಿನ ರೈತ ಮಂಜುನಾಥನ ಎನ್ನುವವರ ಹಸು ಹುಲಿಯ ದಾಳಿಗೆ ಒಳಪಟ್ಟು ಸಾವನ್ನಪ್ಪಿದೆ. ರೈತರು ಎಂದರೆ ದೇಶದ ಬೆನ್ನೆಲುಬು. ಯಾರಾದರೂ ರೈತರಿಗೆ ಅನ್ಯಾಯ ಮಾಡಿದರೆ ದೇವರು ಕೂಡ ಮೆಚ್ಚುವುದಿಲ್ಲ. ಅಧಿಕಾರಿಗಳು ರೈತರಿಗೆ ಸ್ಪಂದಿಸಬೇಕು. ರೈತರಿಗೆ ತಾವು ಸಾಕಿದ ದನಕರುಗಳ ಆಧಾರ ರೈತರು ತಮಗೆ ಒಂದು ಹೊತ್ತು ಊಟ ಸಿಗದಿದ್ದರೂ ತೊಂದರೆಯಿಲ್ಲ. ಆದರೆ ತಮ್ಮ ದನಕರುಗಳಿಗೆ ಒಂದು ಹೊತ್ತು ಊಟ ಕಡಿಮೆ ಆಗಬಾರದು ಎಂದು ಕಾಳಜಿ ಮಾಡುತ್ತಾರೆ.
ಆದರೇ ವಿಧಿ ಏಷ್ಟು ಕ್ರೂರ ಎಂಬಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವ್ಯಾಪ್ತಿಯಲ್ಲಿ ಒಂದು ದುರ್ಘಟನೆ ನಡೆದಿದೆ. ಇಂದು ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅರಣ್ಯದಿಂದ ಒಂದು ಹುಲಿ ಬಂದು ಒಂದು ಜಾನುವಾರುವಿನ ಮೇಲೆ ದಾಳಿ ಮಾಡಿ ಜಾನುವಾರು ಕೊನೆಯುಸಿರು ಎಳೆಯುವ ವರೆಗೂ ಹಲ್ಲೆ ಮಾಡಿದೆ ಮಂಜುನಾಥ ಎಂಬ ರೈತ ಮಾಗೋಡು ಗ್ರಾಮದ ತನ್ನ ಮನೆಯ ಹೊರಗೆ ಕೊಟ್ಟಿಗೆಯಲ್ಲಿ ತನ್ನ 4-5 ದನವನ್ನು ಕಟ್ಟಿದ್ದರು. ಲಕ್ಷ್ಮೀ ನರಸಿಂಹ ದೇವಸ್ಥಾನದ ಬಳಿ ಹುಲ್ಲು ಮೇಯಲು ಹೋದಾಗ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಹುಲಿ ದಾಳಿ ಮಾಡಿದಾಗ ಒಂದು ಹಸುವು ಹುಲಿ ದಾಳಿಗೆ ಸಿಕ್ಕಿ ಸವನಪ್ಪಿರುತ್ತದೆ. ಹುಲಿಯು ದಾಳಿ ಮಾಡಿದ ಸಂದರ್ಭದಲ್ಲಿ ಹಸುವು ಕಿರುಚಿಕೊಂಡಾಗ ಸುತ್ತಮುತ್ತಲಿನ ಗ್ರಾಮಸ್ಥರು ಬಂದಕೂಡಲೇ ಹುಲಿ ಹಸುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.
ಈ ವಿಷಯ ತಿಳಿದ ಯಲ್ಲಾಪುರ ಅರಣ್ಯ ವಿಭಾಗದ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.ಇನ್ನೂ ಈ ಘಟನೆಯಿಂದ ಮಾಗೋಡು ಗ್ರಾಮದ ಜನ ಭಯ ಭಿತರಾಗಿದ್ದಾರೆ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡುತ್ತಾರಾ ಎಂದು ಕಾದು ನೋಡಬೇಕಾಗಿದೆ.
ವರದಿ:ಶ್ರೀಪಾದ್ ಹೆಗಡೆ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…