ಯಲ್ಲಾಪುರ ತಾಲೂಕಿನ ರೈತ ಮಂಜುನಾಥನ ಎನ್ನುವವರ ಹಸು ಹುಲಿಯ ದಾಳಿಗೆ ಒಳಪಟ್ಟು ಸಾವನ್ನಪ್ಪಿದೆ. ರೈತರು ಎಂದರೆ ದೇಶದ ಬೆನ್ನೆಲುಬು. ಯಾರಾದರೂ ರೈತರಿಗೆ ಅನ್ಯಾಯ ಮಾಡಿದರೆ ದೇವರು ಕೂಡ ಮೆಚ್ಚುವುದಿಲ್ಲ. ಅಧಿಕಾರಿಗಳು ರೈತರಿಗೆ ಸ್ಪಂದಿಸಬೇಕು. ರೈತರಿಗೆ ತಾವು ಸಾಕಿದ ದನಕರುಗಳ ಆಧಾರ ರೈತರು ತಮಗೆ ಒಂದು ಹೊತ್ತು ಊಟ ಸಿಗದಿದ್ದರೂ ತೊಂದರೆಯಿಲ್ಲ. ಆದರೆ ತಮ್ಮ ದನಕರುಗಳಿಗೆ ಒಂದು ಹೊತ್ತು ಊಟ ಕಡಿಮೆ ಆಗಬಾರದು ಎಂದು ಕಾಳಜಿ ಮಾಡುತ್ತಾರೆ.
ಆದರೇ ವಿಧಿ ಏಷ್ಟು ಕ್ರೂರ ಎಂಬಂತೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವ್ಯಾಪ್ತಿಯಲ್ಲಿ ಒಂದು ದುರ್ಘಟನೆ ನಡೆದಿದೆ. ಇಂದು ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಅರಣ್ಯದಿಂದ ಒಂದು ಹುಲಿ ಬಂದು ಒಂದು ಜಾನುವಾರುವಿನ ಮೇಲೆ ದಾಳಿ ಮಾಡಿ ಜಾನುವಾರು ಕೊನೆಯುಸಿರು ಎಳೆಯುವ ವರೆಗೂ ಹಲ್ಲೆ ಮಾಡಿದೆ ಮಂಜುನಾಥ ಎಂಬ ರೈತ ಮಾಗೋಡು ಗ್ರಾಮದ ತನ್ನ ಮನೆಯ ಹೊರಗೆ ಕೊಟ್ಟಿಗೆಯಲ್ಲಿ ತನ್ನ 4-5 ದನವನ್ನು ಕಟ್ಟಿದ್ದರು. ಲಕ್ಷ್ಮೀ ನರಸಿಂಹ ದೇವಸ್ಥಾನದ ಬಳಿ ಹುಲ್ಲು ಮೇಯಲು ಹೋದಾಗ ಬೆಳಿಗ್ಗೆ 5 ಗಂಟೆಯ ಸುಮಾರಿಗೆ ಹುಲಿ ದಾಳಿ ಮಾಡಿದಾಗ ಒಂದು ಹಸುವು ಹುಲಿ ದಾಳಿಗೆ ಸಿಕ್ಕಿ ಸವನಪ್ಪಿರುತ್ತದೆ. ಹುಲಿಯು ದಾಳಿ ಮಾಡಿದ ಸಂದರ್ಭದಲ್ಲಿ ಹಸುವು ಕಿರುಚಿಕೊಂಡಾಗ ಸುತ್ತಮುತ್ತಲಿನ ಗ್ರಾಮಸ್ಥರು ಬಂದಕೂಡಲೇ ಹುಲಿ ಹಸುವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದೆ.
ಈ ವಿಷಯ ತಿಳಿದ ಯಲ್ಲಾಪುರ ಅರಣ್ಯ ವಿಭಾಗದ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಘಟನೆಯ ಬಗ್ಗೆ ಮಾಹಿತಿ ಪಡೆದು ಪರಿಶೀಲಿಸಿ ಮುಂದಿನ ಕ್ರಮ ಜರುಗಿಸಿದ್ದಾರೆ.ಇನ್ನೂ ಈ ಘಟನೆಯಿಂದ ಮಾಗೋಡು ಗ್ರಾಮದ ಜನ ಭಯ ಭಿತರಾಗಿದ್ದಾರೆ ಅರಣ್ಯ ಇಲಾಖೆಯ ಅಧಿಕಾರಿಗಳು ಹುಲಿಯನ್ನು ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಡುತ್ತಾರಾ ಎಂದು ಕಾದು ನೋಡಬೇಕಾಗಿದೆ.
ವರದಿ:ಶ್ರೀಪಾದ್ ಹೆಗಡೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…