ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ ದೊಡ್ಡಮನಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಗೋಪಾಳಪುರ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ಡಿಎಸ್ಎಸ್ ತಾಲೂಕು ಸಂಚಾಲಕರಾಗಿರುವ ಆನಂದ್ ಭಜಂತ್ರಿ ಅವರು ನೀಡಿದ ದೂರಿನ ಮೇರೆಗೆ ಈ ಕಾರ್ಯಾಚರಣೆ ನಡೆದಿದ್ದು, ಅಟ್ರಾಸಿಟಿ ಪ್ರಕರಣದ ಪ್ರಗತಿ ಕುರಿತು ಮಾಹಿತಿ ಪಡೆಯಲು ಅವರು ಪೊಲೀಸ್ ಠಾಣೆಗೆ ತೆರಳಿದ್ದ ವೇಳೆ ಸಿಪಿಐ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನಲಾಗಿದೆ.
ಪ್ರಕರಣದಲ್ಲಿರುವ ಆರೋಪಿಗಳನ್ನು ಬಂಧಿಸಿ ಕೋರ್ಟ್ಗೆ ಹಾಜರುಪಡಿಸಲು ಹಣ ನೀಡಬೇಕೆಂದು ಸಿಪಿಐ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರಂಭದಲ್ಲಿ ₹2 ಲಕ್ಷ ಲಂಚ ಕೇಳಲಾಗಿದ್ದು, ನಂತರ ಮಾತುಕತೆಯ ಬಳಿಕ ಮೊದಲ ಹಂತವಾಗಿ ₹1 ಲಕ್ಷ ನೀಡಲು ಒಪ್ಪಂದವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದಾದ ಬಳಿಕ ದೂರುದಾರ ಆನಂದ್ ಭಜಂತ್ರಿ ಅವರು ಯಾದಗಿರಿ ಲೋಕಾಯುಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೂರಿನ ಆಧಾರದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಜೆ.ಹೆಚ್. ಇನಾಮದಾರ ನೇತೃತ್ವದಲ್ಲಿ ಪಿಐ ಸಿದ್ದರಾಯ ಬೆಳ್ಳೂರಗಿ ಹಾಗೂ ಸಿಬ್ಬಂದಿ ಬಲೆ ಬೀಸಿದರು.
ಶುಕ್ರವಾರ ರಾತ್ರಿ ಸುಮಾರು 8.30ರ ವೇಳೆಗೆ ಗುರುಮಠಕಲ್ನಲ್ಲಿರುವ ಸಿಪಿಐ ಅವರ ಸರ್ಕಾರಿ ನಿವಾಸದಲ್ಲಿ ₹1 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಸಿಪಿಐ ವೀರಣ್ಣ ದೊಡ್ಡಮನಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಯಾಚರಣೆಯ ಬಳಿಕ ಅಧಿಕಾರಿಗಳು ಸ್ಥಳದಲ್ಲೇ ಮಹಜರ್ ಪ್ರಕ್ರಿಯೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಕರ್ತವ್ಯ ನಿರ್ವಹಣೆಗೆ ಲಂಚ ಕೇಳಿದ ಆರೋಪದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಿಕ್ಕಿಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕೆಂದು ಜನರು ಆಗ್ರಹಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…