ಲಖನೌ: ಉತ್ತರ ಪ್ರದೇಶದಲ್ಲಿ ಸುಮಾರು ₹4,200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಲಖನೌ–ಕಾನ್ಪುರ ಗ್ರೀನ್ಫೀಲ್ಡ್ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಉದ್ಘಾಟನೆಯಾದ ಕೇವಲ 12 ದಿನಗಳಲ್ಲೇ ಬಿರುಕು ಬಿಟ್ಟಿರುವ ಘಟನೆ ಭಾರೀ ಚರ್ಚೆಗೆ ಕಾರಣವಾಗಿದೆ. ಮಳೆಯಿಂದ ರಸ್ತೆ ಕುಸಿದಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಮಗಾರಿಯ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ.
ಜುಲೈ 13ರಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಂಟಿಯಾಗಿ ಈ ಎಕ್ಸ್ಪ್ರೆಸ್ವೇಯನ್ನು ಉದ್ಘಾಟಿಸಿದ್ದರು. ಅಭಿವೃದ್ಧಿಯ ಸಂಕೇತವಾಗಿ ಬಿಂಬಿಸಲಾಗಿದ್ದ ಈ ಯೋಜನೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹಾನಿಗೊಳಗಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಜುಲೈ 25ರಂದು ಸುರಿದ ಭಾರೀ ಮಳೆಯ ಪರಿಣಾಮ ಉನ್ನಾವೋ ಜಿಲ್ಲೆಯ ಕೊರಾರಿ ಗ್ರಾಮದ ಸಮೀಪ ಎಕ್ಸ್ಪ್ರೆಸ್ವೇಯ ಒಂದು ಭಾಗದಲ್ಲಿ ಆಳವಾದ ಬಿರುಕುಗಳು ಕಾಣಿಸಿಕೊಂಡು, ರಸ್ತೆಯ ಕೆಲ ಭಾಗ ಕುಸಿದಿದೆ. ರಸ್ತೆಯ ಮೇಲ್ಮೈ ಹಾನಿಗೊಳಗಾದ ದೃಶ್ಯಗಳನ್ನು ವಾಹನ ಸವಾರರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಅವು ವ್ಯಾಪಕವಾಗಿ ವೈರಲ್ ಆಗಿವೆ.
ಈ ಘಟನೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೈಗೊಂಡ ಕಾಮಗಾರಿಯ ಗುಣಮಟ್ಟ ಹಾಗೂ ಯೋಜನೆಯ ಮೇಲ್ವಿಚಾರಣೆ ಕುರಿತು ಅನುಮಾನಗಳನ್ನು ಹುಟ್ಟುಹಾಕಿದೆ. ಸಮಾಜವಾದಿ ಪಕ್ಷದ ನಾಯಕ ಮಧುಸೂದನ್ ಯಾದವ್ ಕುಸಿತದ ವಿಡಿಯೋವನ್ನು ಹಂಚಿಕೊಂಡು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
“ನಾನು ಲಖನೌ–ಕಾನ್ಪುರ ಎಲಿವೇಟೆಡ್ ಎಕ್ಸ್ಪ್ರೆಸ್ವೇ ಮೂಲಕ ಪ್ರಯಾಣಿಸುತ್ತಿದ್ದಾಗ ಕೊರಾರಿ ಸಮೀಪ ಸುಮಾರು 5 ರಿಂದ 7 ಮೀಟರ್ ವ್ಯಾಪ್ತಿಯಲ್ಲಿ ರಸ್ತೆ ಕುಸಿದು ಬಿರುಕು ಬಿಟ್ಟಿರುವುದನ್ನು ಕಂಡೆ. ಇಂತಹ ಕಳಪೆ ಕಾಮಗಾರಿಯಿಂದ ಭೀಕರ ಅಪಘಾತಗಳು ಸಂಭವಿಸುವ ಅಪಾಯವಿದೆ,” ಎಂದು ಅವರು ಹೇಳಿದ್ದು, ಯೋಜನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪವನ್ನೂ ಮಾಡಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಆದರೆ, ಹೊಸದಾಗಿ ನಿರ್ಮಿಸಲಾದ ಎಕ್ಸ್ಪ್ರೆಸ್ವೇ ಇಷ್ಟು ಬೇಗ ಹಾನಿಗೊಳಗಾದ ಕುರಿತು ಎನ್ಎಚ್ಎಐ ಅಧಿಕಾರಿಗಳು ಇದುವರೆಗೆ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಈ ಘಟನೆ ಯೋಜನೆಯ ಗುಣಮಟ್ಟ, ಕಾಮಗಾರಿ ಮೇಲ್ವಿಚಾರಣೆ ಹಾಗೂ ಸಾರ್ವಜನಿಕ ಹಣದ ಸಮರ್ಪಕ ಬಳಕೆ ಕುರಿತಂತೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಗೌರಿಬಿದನೂರು: ದೇಶದ ಗಡಿಯಲ್ಲಿ 21 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ, ಬಳಿಕ ಸಮಾಜದ ಸುರಕ್ಷತೆಗಾಗಿ ಪೊಲೀಸ್ ಇಲಾಖೆಗೆ…
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ…
ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…
ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…
ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್ಗಳು ಹಾಗೂ ಅವಹೇಳನಕಾರಿ ಟ್ರೋಲ್ಗಳಿಂದ ಬೇಸತ್ತಿರುವ ಬಿಗ್ ಬಾಸ್…