Latest

ಟೋಪಿ ಹಿಂದೆ ಕ್ರೇಜಿಸ್ಟಾರ್ ರವಿಚಂದ್ರನ್ ರಹಸ್ಯ ಬಹಿರಂಗ! ವೇದಿಕೆಯ ಮೇಲೆ ಬೋಳು ತಲೆ ವೈರಲ್.!

ಬೆಂಗಳೂರು: ಕನ್ನಡ ಸಿನಿ ಪ್ರೇಕ್ಷಕರಿಗೆ ಕ್ರೇಜಿಸ್ಟಾರ್ ರವಿಚಂದ್ರನ್ ಎಂದರೆ ಗ್ಲಾಮರ್, ಸ್ಟೈಲ್ ಮತ್ತು ನಾಟಕೀಯತೆಯ ಮತ್ತೊಂದು ರೂಪ. ಅದೆಷ್ಟೋ ವರ್ಷಗಳಿಂದ ತಮ್ಮ ವಿಭಿನ್ನ ಚಲನಚಿತ್ರಗಳ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದ ರವಿಚಂದ್ರನ್ ಇದೀಗ ತಮ್ಮ ವೈಯಕ್ತಿಕ ಜೀವನದ ಒಂದು ಚಿಕ್ಕ ರಹಸ್ಯವನ್ನು ಬಹಿರಂಗವಾಗಿದೆ

ಹೌದು, ಈಗಾಗಲೇ ಹಲವು ವರ್ಷಗಳಿಂದ ರವಿಚಂದ್ರನ್ ಸಾರ್ವಜನಿಕವಾಗಿ ಯಾವ ಸಮಾರಂಭಕ್ಕೂ ಟೋಪಿ ಧರಿಸಿ ಬರುವ ಪರಂಪರೆಯನ್ನು ಮುಂದುವರಿಸುತ್ತಿದ್ದರು. ಇದು ಕೇವಲ ಫ್ಯಾಷನ್ ಸ್ಟೈಟ್‌ಮೆಂಟ್‌ ಅಲ್ಲ, ಅದರ ಹಿಂದೆ ಒಂದು ವಿಶೇಷ ಕಾರಣವಿತ್ತು ಎನ್ನುವುದು ಈಗ ಎಲ್ಲರಿಗೂ ಗೊತ್ತಾಗುತ್ತಿದೆ.

ಕಾಲಕ್ರಮೇಣ ಕೂದಲು ಕಳೆದುಕೊಂಡ ರವಿಚಂದ್ರನ್, ತಮ್ಮ ತಲೆ ಬೋಳು ಆಗಿರುವುದು ಬಹಿರಂಗಗೊಳ್ಳದಂತೆ ಸದಾ ಟೋಪಿ ಧರಿಸಿ ಎಲ್ಲೆಡೆ ತೆರಳುತ್ತಿದ್ದರು. ಈವರೆಗೂ ಯಾವುದೇ ಕಾರ್ಯಕ್ರಮದಲ್ಲಿ ತಮ್ಮ ಟೋಪಿಯನ್ನು ತೆಗೆದು ತಲೆಯನ್ನ ತೋರಿಸಿರಲಿಲ್ಲ.

ಆದರೆ ಈ ಸರಣಿಗೆ ಮುರಿದಂತಾಗಿದೆ. ಹಂಸಲೇಖ ನಿರ್ದೇಶನದ ಹೊಸ ಚಿತ್ರ “ಓಕೆ”ದ ಮುಹೂರ್ತ ಕಾರ್ಯಕ್ರಮದ ವೇಳೆ, ವೇದಿಕೆಯಲ್ಲಿ ಮಾತನಾಡುವಾಗ ರವಿಚಂದ್ರನ್ ಹಠಾತ್ ಟೋಪಿ ಸರಿಪಡಿಸುವ ಪ್ರಯತ್ನದಲ್ಲಿ ಅವರ ಬೋಳು ತಲೆ ಪ್ರತ್ಯಕ್ಷವಾಗಿದೆ. ಕೆಲ ಕ್ಷಣಗಳ ಜತೆಗೆ ಕ್ಯಾಮೆರಾಗಳ ಕಣ್ಣಿಗೂ ಇದು ಸಿಕ್ಕಿಹಾಕಿಕೊಂಡಿದೆ. ಈ ದೃಶ್ಯ ಇದೀಗ ವೈರಲ್ ಆಗಿದ್ದು, ಅಭಿಮಾನಿಗಳು ಇದನ್ನು ಸ್ವಾಗತಿಸುತ್ತಿದ್ದಾರೆ.

ಅಭಿಮಾನಿಗಳು ತಮ್ಮ ನೆಚ್ಚಿನ ನಟನ ವೈಯಕ್ತಿಕ ಆಯ್ಕೆಗಳನ್ನು ಗೌರವಿಸುತ್ತಿದ್ದರೂ, ಇಷ್ಟು ದಿನಗಳ ಹಿಂದೆ ಮರೆಮಾಚಿದ್ದ ಸತ್ಯ ಬಹಿರಂಗವಾಗಿದ್ದಕ್ಕೆ ಆಶ್ಚರ್ಯವೂ ವ್ಯಕ್ತಪಡಿಸುತ್ತಿದ್ದಾರೆ. ಕೆಲವರು “ನಟನಿಗೆ ಬೋಳು ತಲೆ ಬಂದರೆ ಏನು? ಅದು ಅವರ ಪ್ರತಿಭೆಗೆ ಏನು ಕಡಿಮೆ ಆಗಲ್ಲ!” ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago