ಕೊಟ್ಟೂರು:- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದವರ ವಿರುದ್ಧ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ತಂಡದವರು ದಾಳಿ ಮಾಡಿ ಮಂಗಳವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ವಾಲ್ ಕಟ್ಟೆ ಹತ್ತಿರ ಹಾಗೂ ಪಿಎಲ್ ಡಿ ಬ್ಯಾಂಕ್ ಮುಂಭಾಗದಲ್ಲಿ ಎರಡು ಕಡೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿರುವರೆಂದು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ವರಿಷ್ಠಾಧಿಕಾರಿಗಳಾದ ಶ್ರೀ ಹರಿಬಾಬು ಹಾಗೂ ಡಿಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ ರವರ ಮಾರ್ಗದರ್ಶನದಲ್ಲಿ ಪಿಎಸ್ಐ ಗೀತಾಂಜಲಿ ಶಿಂಧೆ ಮತ್ತು ತಂಡದವರ ಜೊತೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವವರ ಮೇಲೆ ದಾಳಿ ಮಾಡಿ ಒಟ್ಟು 13 ಜನರ ವಶಕ್ಕೆ ಪಡೆದು ಅವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ 40 ಸಾವಿರ ಬೆಲೆ ಬಾಳುವ ಎರಡು ಸ್ಕ್ರೀನ್ ಟಚ್ ಮೊಬೈಲ್, 2200 ನಗದು ಹಣ, ಜಪ್ತಿ ಮಾಡಲಾಗಿದ್ದು ಈ ಬಗ್ಗೆ ಕೊಟ್ಟೂರು ಠಾಣೆಯಲ್ಲಿ ಗುನ್ನೆ ನಂಬರ್.54/2024 ಕಲಂ 78(1)(ಎ) (6) ಕೆ ಪಿ ಯಾಕ್ಟ್ ರೀತ್ಯ ಪ್ರಕರಣ ದಾಖಲಾಗಿದೆ.
ವರದಿ:- ಮಣಿಕಂಠ. ಬಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…