ಕೊಟ್ಟೂರು:- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದವರ ವಿರುದ್ಧ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ತಂಡದವರು ದಾಳಿ ಮಾಡಿ ಮಂಗಳವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ವಾಲ್ ಕಟ್ಟೆ ಹತ್ತಿರ ಹಾಗೂ ಪಿಎಲ್ ಡಿ ಬ್ಯಾಂಕ್ ಮುಂಭಾಗದಲ್ಲಿ ಎರಡು ಕಡೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿರುವರೆಂದು ಖಚಿತ ಮಾಹಿತಿ ಮೇರೆಗೆ ಜಿಲ್ಲಾ ವರಿಷ್ಠಾಧಿಕಾರಿಗಳಾದ ಶ್ರೀ ಹರಿಬಾಬು ಹಾಗೂ ಡಿಎಸ್ ಪಿ ಮಲ್ಲೇಶಪ್ಪ ಮಲ್ಲಾಪುರ ರವರ ಮಾರ್ಗದರ್ಶನದಲ್ಲಿ ಪಿಎಸ್ಐ ಗೀತಾಂಜಲಿ ಶಿಂಧೆ ಮತ್ತು ತಂಡದವರ ಜೊತೆ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವವರ ಮೇಲೆ ದಾಳಿ ಮಾಡಿ ಒಟ್ಟು 13 ಜನರ ವಶಕ್ಕೆ ಪಡೆದು ಅವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿ 40 ಸಾವಿರ ಬೆಲೆ ಬಾಳುವ ಎರಡು ಸ್ಕ್ರೀನ್ ಟಚ್ ಮೊಬೈಲ್, 2200 ನಗದು ಹಣ, ಜಪ್ತಿ ಮಾಡಲಾಗಿದ್ದು ಈ ಬಗ್ಗೆ ಕೊಟ್ಟೂರು ಠಾಣೆಯಲ್ಲಿ ಗುನ್ನೆ ನಂಬರ್.54/2024 ಕಲಂ 78(1)(ಎ) (6) ಕೆ ಪಿ ಯಾಕ್ಟ್ ರೀತ್ಯ ಪ್ರಕರಣ ದಾಖಲಾಗಿದೆ.
ವರದಿ:- ಮಣಿಕಂಠ. ಬಿ
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…