Latest

ಕ್ರಿಕೇಟ್ ಬೆಟ್ಟಿಂಗ್ ನಡೆಸುತ್ತಿದ್ದವರ ಬಂಧನ”

ಮುಂಡಗೋಡ: 05/04/2025 ರಂದು ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯನ್ನು ಮುಂಡಗೋಡ ಪೋಲಿಸರು ಬಂಧಿಸಿದ್ದಾರೆ. ಮಂಜುನಾಥ ತಂದೆ ನಾಗಪ್ಪ ಕೊರವರ ,ಸಾ||ಅಂಬೇಡ್ಕರ್ ಓಣಿ, ಮುಂಡಗೋಡ, ವೆಂಕಟೇಶ ತಂದೆ ಅಶೋಕ ಅರಿವಾಣ ಸಾ||ಆನಂದ ನಗರ. ಮುಂಡಗೋಡ, ಮಂಜುನಾಥ ತಂದೆ ಬೈಲಪ್ಪ ಆಸಂಗಿ ಸಾ॥ಗದಗ ಹಾಗೂ ಹರೀಶ ತಂದೆ ದೇವೆಂದ್ರಪ್ಪ ಬಾಳಮ್ಮನವರ ಸಾ//ಹೊಸಕೊಪ್ಪ (ಸಾಲಗಾಂವ)ತಾ||ಮುಂಡಗೋಡ ರವರೆಲ್ಲರೂ ಸೇರಿಕೊಂಡು ಪಂಜಾಬ ರಾಜ್ಯದ ಚಂಡಿಘರನಲ್ಲಿರುವ ಮಹಾರಾಜ ಯದವಿಂದ್ರ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಾಜಸ್ಥಾನ ಮತ್ತು ಪಂಜಾಬ ತಂಡಗಳ ನಡುವೆ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳ ಮೇಲೆ ಹಣ ಕಟ್ಟಿ ರಸ್ತೆಯಲ್ಲಿ ಬರಹೋಗುವ ಜನರನ್ನು ಕರೆದು ಜನರನ್ನು ಸಂಪರ್ಕಿಸಿ ಬೆಟ್ಟಿಂಗ್ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿದ್ದಾಗ ಬೆಟ್ಟಿಂಗ್ ನಡೆಸುತ್ತಿದ್ದವರ ಪೈಕಿ ಮಂಜುನಾಥ ತಂದೆ ನಾಗಪ್ಪ ಕೊರವರ, ಸಾ|ಅಂಬೇಡ್ಕರ್ ಓಣಿ. ಮುಂಡಗೋಡ ಈತನು ಪೊಲೀಸರ ಕೈಗೆ ಸಿಕ್ಕಿದ್ದು. ಕ್ರಿಕೇಟ ಬೇಟ್ಟಿಂಗ ನಡೆಸುತ್ತಿದ್ದ ಇನ್ನೂ ಮೂವರು ಓಡಿ ಹೋಗಿರುತ್ತಾರೆ. ಬಂಧಿತ ಆರೋಪಿಯಿಂದ ನಗದು ಹಣ 2300/-ರೂ. ಲಾವಾ ಕಂಪನಿಯ ಕೀಪ್ಯಾಡ್ ಮೋಬೈಲ್ ಮತ್ತು ಕ್ರಿಕೇಟ್ ಬೆಟ್ಟಿಂಗ್ ಬರೆದಿರುವ ನೋಟಬುಕ್ ,ಪೆನ್ನುಗಳನ್ನು ಜಪ್ತುಪಡಿಸಿಕೊಂಡು ಸದರಿಯವರ ಮೇಲೆ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಎಮ್. ನಾರಾಯಣ ಐ.ಪಿ.ಎಸ್ ಮಾನ್ಯ ಪೊಲೀಸ್ ಅಧೀಕ್ಷಕರು ಉತ್ತರ ಕನ್ನಡ ಜಿಲ್ಲೆ ಕಾರವಾರ, ಕೃಷ್ಣಮೂರ್ತಿ ಜಿ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ. ಜಗದೀಶ ನಾಯ್ಕ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಕಾರವಾರ, ಶ್ರೀ ಗಣೇಶ ಕೆ. ಎಲ್ ಡಿ.ಎಸ್.ಪಿ ಶಿರಸಿ ರವರ ಮಾರ್ಗದರ್ಶನದಲ್ಲಿ ಶ್ರೀ ರಂಗನಾಥ ನೀಲಮ್ಮನವರ ಪೊಲೀಸ್ ನಿರೀಕ್ಷಕರು ಮುಂಡಗೋಡ ಪೋಲೀಸ್ ಠಾಣೆ ಇವರ ನೇತೃತ್ವದಲ್ಲಿ ಸಿಬ್ಬಂದಿಯವರಾದ ಮಹಾಂತೇಶ ಮುಧೋಳ, ಅನ್ವರ ಬಮ್ಮಿಗಟ್ಟಿ, ನಾಗಪ್ಪ ಎಮ್ ಇವರು ಆರೋಪಿತರನ್ನು ದಸ್ತಗಿರಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.ವರದಿ: ಮಂಜುನಾಥ್ ಎಫ್ ಹೆಚ್

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

7 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

7 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

7 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

7 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago