Latest

“ಯೂಟ್ಯೂಬ್‌ನಲ್ಲಿ ಕಲಿತ ಕ್ರೈಂ ಟ್ರಿಕ್ಸ್: 140 ಮನೆಗಳ ಲುಟೆಗೆ ಹೊಣೆಗಾರನ ಬಂಧನ

ಬೆಂಗಳೂರು: ಆನ್‌ಲೈನ್‌ನಿಂದ ಕಳ್ಳತನಕ್ಕೆ ತರಬೇತಿ ಪಡೆದು ನವೀನ ತಂತ್ರಗಳನ್ನು ಬಳಸಿಕೊಂಡು 140ಕ್ಕೂ ಹೆಚ್ಚು ಮನೆಗಳನ್ನು ಲುಟುಗೈದಿರುವ ಕುಖ್ಯಾತ ಕಳ್ಳನನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉತ್ತರಹಳ್ಳಿಯ ನಿವಾಸಿ ಪ್ರಕಾಶ್ ಅಲಿಯಾಸ್ ಬಾಲಾಜಿ (43) ಎಂದು ಗುರುತಿಸಲಾಗಿದೆ. ಪೊಲೀಸರು ಆರೋಪಿಯಿಂದ 779 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ಪ್ರಕಾಶ್ ತಾಂತ್ರಿಕ ಜಾಣ್ಮೆ ಬಳಸಿ ಅಪರಾಧ ಮಾಡುತ್ತಿದ್ದ. ಯೂಟ್ಯೂಬ್‌ ನೋಡಿ ಲಾಕ್ ತೆಗೆಯುವ ತಂತ್ರಗಳನ್ನು ಕಲಿತಿದ್ದ ಈತನಿಗೆ ಕೀ ಮೇಕಿಂಗ್ ಮಷಿನ್ ಬೇಕಾದಂತೆ ಅನಿಸಿ ಆನ್‌ಲೈನ್ ಮೂಲಕ ಖರೀದಿ ಮಾಡಿಕೊಂಡ. ಅಪಾರ್ಟ್‌ಮೆಂಟ್ ಖರೀದಿಯ ಆಸೆ ತೋರಿದಂತೆ ಮನೆಗಳಿಗೆ ಭೇಟಿ ನೀಡುತ್ತಿದ್ದ ಈತನ ಗುರಿ – ಮಹಿಳೆಯರ ಚಪ್ಪಲಿ ಕಾಣಿಸುತ್ತಿರುವ ಮನೆಗಳು!

ಹಾಗೆ ಕೀ ನಕಲಿ ಮಾಡಿಸಿಕೊಂಡು, ಮನೆಯ ಬಾಗಿಲು ತೆರೆದು ಒಳನುಗ್ಗುತ್ತಿದ್ದ. ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಸ್ವಿಗ್ಗಿ ಅಥವಾ ಜೊಮ್ಯಾಟೋ ಡೆಲಿವರಿ ಬ್ಯಾಗ್‌ನಲ್ಲಿ ತುಂಬಿಕೊಂಡು ಶಾಂತವಾಗಿ ತೆರಳುತ್ತಿದ್ದ. ಸಾರ್ವಜನಿಕರ ಮಧ್ಯೆ ಮರೆವಾಗಲು ಇದು ಸಹಾಯವಾಗುತ್ತಿತ್ತಂತೆ. ಕದ್ದ ಚಿನ್ನವನ್ನು ರಾಜೀವ್ ಎಂಬ ಪರಿಚಿತನ ಮೂಲಕ ಮಾರಾಟ ಮಾಡಿಸುತ್ತಿದ್ದ.

ಪ್ರಕಾಶ್ ಬಾಲ್ಯದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡು ಚಿಕ್ಕಮ್ಮನ ಬಳಿಯಲ್ಲಿ ಬೆಳೆದ. ಆರ್ಥಿಕ ಸಂಕಷ್ಟದಿಂದ ಚಿಂದಿ ಆಯುವ ಕೆಲಸ ಮಾಡುತ್ತಿದ್ದ ಈತ ಕಿಂಚಿತ್ ವಯಸ್ಸಿನಲ್ಲೇ ಕಳ್ಳತನದ ಮಾರ್ಗ ಹಿಡಿದ. ಕಾಲಕಾಲಕ್ಕೆ ಜೈಲಿಗೂ ತೆರಳಿ ಬಂದಿದ್ದ ಈತನ ನವೀನ ಶೈಲಿಯ ಕಳ್ಳತನ ಕ್ರಮ ಪೊಲೀಸ್ ಇಲಾಖೆಗೆ ತಲೆನೋವಿನ ವಿಷಯವಾಗಿತ್ತು.

ಆದರೆ ಇತ್ತೀಚೆಗೆ ನಡೆದ ಹಲವು ಪ್ರಕರಣಗಳ ಕುರಿತ ತನಿಖೆ ವೇಳೆ ಬಾಲಾಜಿ ಮಾದರಿಯಿರುವ ಕ್ಲೂಗಳನ್ನು ಪಡೆದು ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ನ್ಯಾಯಾಂಗ ಬಂಧನದಲ್ಲಿರುವ ಪ್ರಕಾಶ್ ಮೇಲೊಂದು ಸೆಂಟ್ರಲ್ ಕ್ರೈಮ್ ಬ್ರಾಂಚ್ ವಿಶೇಷ ತನಿಖೆ ನಡೆಸುತ್ತಿರುವ ಮಾಹಿತಿ ಲಭಿಸಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

32 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago