Categories: CrimeLatest

ಶಾಲೆಯಲ್ಲೇ ಕೋಟಿ ಕೋಟಿ ನಗದು, ಎಸಿ ರೂಂನಲ್ಲಿ ಬೆಡ್-ಕಾಂಡೋಮ್ ಪತ್ತೆ: ಪಶ್ಚಿಮ ಬಂಗಾಳದಲ್ಲಿ ಹೊಸ ವಿವಾದ!

ಪಶ್ಚಿಮ ಬಂಗಾಳದಲ್ಲಿ ಶಿಕ್ಷಣ ಸಂಸ್ಥೆಗಳ ದುರುಪಯೋಗದ ಆರೋಪಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗಷ್ಟೇ ಸುರೇಂದ್ರನಾಥ ಕಾಲೇಜಿನ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಗನ್ ಹಾಗೂ ಕೋಟ್ಯಂತರ ರೂಪಾಯಿ ನಗದು ಪತ್ತೆಯಾದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಆ ಪ್ರಕರಣದ ಬೆನ್ನಲ್ಲೇ ಇದೀಗ ಕಾಂಚ್ರಾಪಾರಾದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯೊಂದರಲ್ಲಿ ಮತ್ತೊಂದು ವಿವಾದಾತ್ಮಕ ಘಟನೆ ಬೆಳಕಿಗೆ ಬಂದಿದೆ.

ಅಕ್ರಮ ಹಣ ಸಂಗ್ರಹ ಹಾಗೂ ಅನೈತಿಕ ಚಟುವಟಿಕೆಗಳ ಆರೋಪದ ಹಿನ್ನೆಲೆ ಬಿಜೆಪಿ ಶಾಸಕ ಸಂದೀಪ್ ದಾಸ್ ಹಾಗೂ ಪೊಲೀಸರು ಬುಧವಾರ ರಾತ್ರಿ ಶಾಲೆಯ ಮೇಲೆ ಜಂಟಿ ದಾಳಿ ನಡೆಸಿದರು. ದಾಳಿ ವೇಳೆ ಶಾಲೆಯ ವಿವಿಧ ಕೊಠಡಿಗಳಲ್ಲಿ ಅಪಾರ ಪ್ರಮಾಣದ ನಗದು, ಕಾಂಡೋಮ್‌ಗಳು ಹಾಗೂ ಇತರ ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಯ ಅಕೌಂಟ್ಸ್ ಕಚೇರಿಯನ್ನು ಪರಿಶೀಲಿಸಿದ ವೇಳೆ ಸುಮಾರು 1.77 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. 500, 200 ಮತ್ತು 100 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಹಣವನ್ನು ಎಣಿಸಲು ಹಲವು ಗಂಟೆಗಳ ಕಾಲ ಯಂತ್ರಗಳ ಸಹಾಯ ಪಡೆಯಬೇಕಾಯಿತು. ಈ ಸಂಬಂಧ ಮೂವರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ ಅಕೌಂಟ್ಸ್ ಕಚೇರಿಯ ಪಕ್ಕದಲ್ಲಿದ್ದ ಎಸಿ ವ್ಯವಸ್ಥೆಯ ವಿಶ್ರಾಂತಿ ಕೊಠಡಿಯಲ್ಲಿ ಬೆಡ್ ಹಾಗೂ ಅಲಮಾರಿಯಲ್ಲಿ ಕಾಂಡೋಮ್‌ಗಳು ಪತ್ತೆಯಾಗಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಶಾಸಕ ಸಂದೀಪ್ ದಾಸ್ ಆರೋಪಿಸಿರುವಂತೆ, ಕೆಲವು ರಾಜಕೀಯ ಮುಖಂಡರು ಅಕ್ರಮ ಹಣವನ್ನು ಶಾಲೆಯಲ್ಲಿ ಸಂಗ್ರಹಿಸಿಟ್ಟಿದ್ದರು. ಅಲ್ಲದೆ, ಈ ಶಾಲೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದವರ ವಿವರಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಶಾಲೆಯ ಪ್ರಾಂಶುಪಾಲ ವಿಕಾಸ್ ಚಂದ್ರಪಾಲ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪತ್ತೆಯಾದ ಹಣವು ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು ಶುಲ್ಕದ ಮೊತ್ತವಾಗಿದ್ದು, ಸಾಮಾನ್ಯವಾಗಿ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತದೆ. ಕೆಲವು ಆಡಳಿತಾತ್ಮಕ ಕಾರಣಗಳಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಹಣವನ್ನು ಇನ್ನೂ ಬ್ಯಾಂಕ್‌ಗೆ ಜಮೆ ಮಾಡಲಾಗಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಆದರೆ, ಬೆಡ್ ಹಾಗೂ ಕಾಂಡೋಮ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಪತ್ತೆಯಾದ ಹಣದ ಮೂಲ ಹಾಗೂ ಕೊಠಡಿಯ ಬಳಕೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

12 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

12 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago