Categories: CrimeLatest

ಶಾಲೆಯಲ್ಲೇ ಕೋಟಿ ಕೋಟಿ ನಗದು, ಎಸಿ ರೂಂನಲ್ಲಿ ಬೆಡ್-ಕಾಂಡೋಮ್ ಪತ್ತೆ: ಪಶ್ಚಿಮ ಬಂಗಾಳದಲ್ಲಿ ಹೊಸ ವಿವಾದ!

ಪಶ್ಚಿಮ ಬಂಗಾಳದಲ್ಲಿ ಶಿಕ್ಷಣ ಸಂಸ್ಥೆಗಳ ದುರುಪಯೋಗದ ಆರೋಪಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ. ಇತ್ತೀಚೆಗಷ್ಟೇ ಸುರೇಂದ್ರನಾಥ ಕಾಲೇಜಿನ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ ಗನ್ ಹಾಗೂ ಕೋಟ್ಯಂತರ ರೂಪಾಯಿ ನಗದು ಪತ್ತೆಯಾದ ಘಟನೆ ರಾಜ್ಯದಲ್ಲಿ ಸಂಚಲನ ಮೂಡಿಸಿತ್ತು. ಆ ಪ್ರಕರಣದ ಬೆನ್ನಲ್ಲೇ ಇದೀಗ ಕಾಂಚ್ರಾಪಾರಾದ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯೊಂದರಲ್ಲಿ ಮತ್ತೊಂದು ವಿವಾದಾತ್ಮಕ ಘಟನೆ ಬೆಳಕಿಗೆ ಬಂದಿದೆ.

ಅಕ್ರಮ ಹಣ ಸಂಗ್ರಹ ಹಾಗೂ ಅನೈತಿಕ ಚಟುವಟಿಕೆಗಳ ಆರೋಪದ ಹಿನ್ನೆಲೆ ಬಿಜೆಪಿ ಶಾಸಕ ಸಂದೀಪ್ ದಾಸ್ ಹಾಗೂ ಪೊಲೀಸರು ಬುಧವಾರ ರಾತ್ರಿ ಶಾಲೆಯ ಮೇಲೆ ಜಂಟಿ ದಾಳಿ ನಡೆಸಿದರು. ದಾಳಿ ವೇಳೆ ಶಾಲೆಯ ವಿವಿಧ ಕೊಠಡಿಗಳಲ್ಲಿ ಅಪಾರ ಪ್ರಮಾಣದ ನಗದು, ಕಾಂಡೋಮ್‌ಗಳು ಹಾಗೂ ಇತರ ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಾಲೆಯ ಅಕೌಂಟ್ಸ್ ಕಚೇರಿಯನ್ನು ಪರಿಶೀಲಿಸಿದ ವೇಳೆ ಸುಮಾರು 1.77 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ. 500, 200 ಮತ್ತು 100 ರೂಪಾಯಿ ಮುಖಬೆಲೆಯ ನೋಟುಗಳ ಕಂತೆಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಹಣವನ್ನು ಎಣಿಸಲು ಹಲವು ಗಂಟೆಗಳ ಕಾಲ ಯಂತ್ರಗಳ ಸಹಾಯ ಪಡೆಯಬೇಕಾಯಿತು. ಈ ಸಂಬಂಧ ಮೂವರು ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದೇ ವೇಳೆ ಅಕೌಂಟ್ಸ್ ಕಚೇರಿಯ ಪಕ್ಕದಲ್ಲಿದ್ದ ಎಸಿ ವ್ಯವಸ್ಥೆಯ ವಿಶ್ರಾಂತಿ ಕೊಠಡಿಯಲ್ಲಿ ಬೆಡ್ ಹಾಗೂ ಅಲಮಾರಿಯಲ್ಲಿ ಕಾಂಡೋಮ್‌ಗಳು ಪತ್ತೆಯಾಗಿರುವುದು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲೂ ಭಾರೀ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಶಾಸಕ ಸಂದೀಪ್ ದಾಸ್ ಆರೋಪಿಸಿರುವಂತೆ, ಕೆಲವು ರಾಜಕೀಯ ಮುಖಂಡರು ಅಕ್ರಮ ಹಣವನ್ನು ಶಾಲೆಯಲ್ಲಿ ಸಂಗ್ರಹಿಸಿಟ್ಟಿದ್ದರು. ಅಲ್ಲದೆ, ಈ ಶಾಲೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದವರ ವಿವರಗಳನ್ನು ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆದರೆ ಶಾಲೆಯ ಪ್ರಾಂಶುಪಾಲ ವಿಕಾಸ್ ಚಂದ್ರಪಾಲ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಪತ್ತೆಯಾದ ಹಣವು ವಿದ್ಯಾರ್ಥಿಗಳ ಪ್ರವೇಶಾತಿ ಮತ್ತು ಶುಲ್ಕದ ಮೊತ್ತವಾಗಿದ್ದು, ಸಾಮಾನ್ಯವಾಗಿ ಬ್ಯಾಂಕ್‌ಗೆ ಜಮೆ ಮಾಡಲಾಗುತ್ತದೆ. ಕೆಲವು ಆಡಳಿತಾತ್ಮಕ ಕಾರಣಗಳಿಂದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳ ಹಣವನ್ನು ಇನ್ನೂ ಬ್ಯಾಂಕ್‌ಗೆ ಜಮೆ ಮಾಡಲಾಗಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಆದರೆ, ಬೆಡ್ ಹಾಗೂ ಕಾಂಡೋಮ್ ಪತ್ತೆಯಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಪತ್ತೆಯಾದ ಹಣದ ಮೂಲ ಹಾಗೂ ಕೊಠಡಿಯ ಬಳಕೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

₹10 ಸಾವಿರ ಲಂಚಕ್ಕೆ ಬೇಡಿಕೆ: ಠಾಣೆಯಲ್ಲೇ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಶಿವಕುಮಾರ್!

ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಾಯಕ ಪೊಲೀಸ್…

7 hours ago

ಜಮೀನು ಸರ್ವೆ ಸ್ಕೆಚ್‌ಗೆ ₹20 ಸಾವಿರ ಲಂಚ ಬೇಡಿಕೆ: ಹಣ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್ ಸುಮಾ!

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಇನ್ನೂ ಬೇರುಬಿಟ್ಟಿರುವುದಕ್ಕೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ಘಟನೆ ಮತ್ತೊಂದು ಉದಾಹರಣೆಯಾಗಿದೆ. ಜಮೀನಿನ ಸರ್ವೆ ಹಾಗೂ…

7 hours ago

ಮಿಸ್ಡ್ ಕಾಲ್‌ನಿಂದ ಶುರುವಾದ ಪ್ರೇಮ: ಐದು ಮಕ್ಕಳ ತಾಯಿ 19 ವರ್ಷದ ಯುವಕನೊಂದಿಗೆ ವಿವಾಹ, ಮತಾಂತರವೂ ಚರ್ಚೆಗೆ ಕಾರಣ!

ಬಿಹಾರದ ಜಮುಯಿ ಜಿಲ್ಲೆಯಲ್ಲಿ ನಡೆದ ವಿಶಿಷ್ಟ ಮದುವೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಒಂದು ಮಿಸ್ಡ್ ಕಾಲ್‌ನಿಂದ ಆರಂಭವಾದ…

13 hours ago

ವೆನಿಲ್ಲಾ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಆರೋಪಿಗಳ ಶಾಕಿಂಗ್ ಪ್ಲ್ಯಾನ್ ಬಹಿರಂಗ!

ಕಾಡುಗೋಡಿ ವ್ಯಾಪ್ತಿಯಲ್ಲಿ ನಾಲ್ಕು ವರ್ಷದ ಬಾಲಕಿ ವೆನಿಲ್ಲಾ ಹತ್ಯೆ ಪ್ರಕರಣವು ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣದ ತನಿಖೆ ಮುಂದುವರಿದಂತೆ…

15 hours ago

ಆರೋಗ್ಯ ಇಲಾಖೆಯಲ್ಲಿ 1290 ವೈದ್ಯರ ನೇಮಕಾತಿಗೆ ಸರ್ಕಾರದ ನಿರ್ಧಾರ; 5 ವರ್ಷ ಸೇವೆಯ ಬಳಿಕ ಕಾಯಂ ಹುದ್ದೆಗೆ ಅವಕಾಶ

ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಒಟ್ಟು 1290…

2 days ago

ವಿದ್ಯಾರ್ಥಿಯ ಸಾವಿನ ಬಗ್ಗೆ ಅನುಮಾನ: ಸಿಸಿಟಿವಿ ದೃಶ್ಯಾವಳಿ ಬಹಿರಂಗಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ

ಸಿದ್ದಾಪುರ: ತಾಲೂಕಿನ ಕಾನಸೂರಿನ ಗಟ್ಟಿಕೈ ಕ್ರಾಸ್ ಬಳಿ, ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿಯ…

2 days ago