Latest

ಮಿರ್ಜಾಪುರ ರೈಲು ನಿಲ್ದಾಣದಲ್ಲಿ ಸಿಆರ್‌ಪಿಎಫ್ ಜವಾನನ ಮೇಲೆ ಹಲ್ಲೆ: 7 ಕನ್ವಾರಿಯರು ಬಂಧನ

ಲಕ್ನೋ, ಜುಲೈ 20 – ಶ್ರಾವಣ ಮಾಸದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಯು ದೇಶದಾದ್ಯಂತ ಶಿವ ಭಕ್ತರ ಶ್ರದ್ಧಾ ಮತ್ತು ಭಕ್ತಿಯ ತೀವ್ರತೆಯನ್ನು ತೋರಿಸುತ್ತಿದೆ. ಆದರೆ, ಈ ಭಕ್ತಿಯ ಮಧ್ಯೆ ಕೆಲ ಕಡೆಗಳಿಂದ ಗಲಾಟೆ ಹಾಗೂ ಅಹಿತಕರ ಘಟನೆಗಳ ಸುದ್ದಿಗಳು ಎದುರಾಗುತ್ತಿವೆ.

ಅಂತೆಯೇ ಉತ್ತರ ಪ್ರದೇಶದ ಮಿರ್ಜಾಪುರ ರೈಲು ನಿಲ್ದಾಣದಲ್ಲಿ ನಡೆದ ಗಂಭೀರ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇಲ್ಲಿನ ರೈಲು ನಿಲ್ದಾಣದಲ್ಲಿ ಕನ್ವಾರಿಯರ ಗುಂಪೊಂದು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜವಾನನ ಮೇಲೆ ದಾಳಿ ನಡೆಸಿದ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನ ಕನ್ವಾರಿಯರಲ್ಲಿ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಮಾಹಿತಿಯ ಪ್ರಕಾರ, ಸಿಆರ್‌ಪಿಎಫ್ ಜವಾನ ಗೌತಮ್ ಮಣಿಪುರದ ಕರ್ತವ್ಯದತ್ತ ಹೋಗುವ ಉದ್ದೇಶದಿಂದ ಮಿರ್ಜಾಪುರ ನಿಲ್ದಾಣದಲ್ಲಿ ಬ್ರಹ್ಮಪುತ್ರ ಎಕ್ಸ್‌ಪ್ರೆಸ್ ರೈಲಿಗಾಗಿ ಕಾಯುತ್ತಿದ್ದರು. ಈ ವೇಳೆಯಲ್ಲಿ ಅಲ್ಲಿಗೆ ಬಂದಿದ್ದ ಕನ್ವಾರಿಯರೊಂದಿಗೆ ಜವಾನನಿಗೆ ವಾಗ್ವಾದ ಉಂಟಾಗಿದೆ. ಮಾತಿನ ಚಕಮಕೆಯು ಸ್ವಲ್ಪ ಸಮಯದಲ್ಲೇ ತೀವ್ರತೆಗೆ ತಲುಪಿದ್ದು, ಕೇಸರಿ ಬಟ್ಟೆ ಧರಿಸಿದ್ದ ಕನ್ವಾರಿಯರ ಗುಂಪು ಗೌತಮ್ ಅವರನ್ನು ನೆಲಕ್ಕುರುಳಿಸಿ ಕಾಲಿನಿಂದ ಒದ್ದು ಥಳಿಸಿದ್ದಾರೆ.

ಘಟನೆಯು ನಿಲ್ದಾಣದ ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಡಿಯೋ ಇದೀಗ ವೈರಲ್ ಆಗಿದೆ. ಗಲಾಟೆಯ ದೃಶ್ಯಗಳನ್ನು ನೋಡುತ್ತಿದ್ದ ಇತರ ಪ್ರಯಾಣಿಕರು ಮಾತ್ರ ಭೀತಿಯಿಂದ ನಿಂತು ನೋಡಿದರು; ಯಾರಿಂದಲೂ ಸಹಾಯವೊ, ಮಧ್ಯಸ್ಥಿಕವೊ ಕಂಡುಬರಲಿಲ್ಲ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಯು ಕೂಡ ನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಘಟನೆಯ ಬಳಿಕ, ಸಿಆರ್‌ಪಿಎಫ್ ಜವಾನ ಗೌತಮ್ ತಕ್ಷಣವೇ ರೈಲು ಹತ್ತಿ ತನ್ನ ಗಮ್ಯಸ್ಥಾನಕ್ಕೆ ತೆರಳಿದರೂ, ವಿಷಯವನ್ನು ರೈಲ್ವೆ ರಕ್ಷಣಾ ಪಡೆ (RPF) ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ಆರ್‌ಪಿಎಫ್ ತಂಡ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿತು.

ತದನಂತರ ನೀಡಲಾದ ವಿವರದಲ್ಲಿ ಆರ್‌ಪಿಎಫ್ ಉಸ್ತುವಾರಿ ಇನ್ಸ್‌ಪೆಕ್ಟರ್ ಚಮನ್ ಸಿಂಗ್ ತೋಮರ್ ಮಾತನಾಡಿ, “ಈ ಘಟನೆಯಲ್ಲಿರುವ ವಿಡಿಯೋ ಪುರಾವೆಗಳನ್ನು ಆಧರಿಸಿ ಎಳು ಜನ ಕನ್ವಾರಿಯರನ್ನು ಬಂಧಿಸಲಾಗಿದೆ. ಘಟನೆ ಕುರಿತು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

ಘಟನೆಯ ಕುರಿತು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಯಾತ್ರೆಗಳ ಸಂದರ್ಭದಲ್ಲಿ ಭದ್ರತೆ ಮತ್ತು ಶಿಸ್ತು ಕಾಪಾಡುವ ಕುರಿತು ಆಡಳಿತ ಮಂಡಳಿಗೆ ಆಗಲಾದ ಒತ್ತಡ ಹೆಚ್ಚಾಗಿದೆ.

ಇದೊಂದು ಯಾತ್ರೆಯ ಆತ್ಮಸಾತ್ವಿಕ ಭಾವನೆಗೆ ಮಸಿ ಬಳಿಯುವಂತಹ ಘಟನೆ ಎಂದು ಹಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

6 hours ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

22 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

1 day ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

1 day ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago