ಚಿಕ್ಕಬಳ್ಳಾಪುರ: ಹೆಣ್ಣು ಮಗು ಜನಿಸಿದ್ದನ್ನು ಒಪ್ಪಿಕೊಳ್ಳಲಾಗದೆ ಸ್ವಂತ ತಂದೆಯೇ ಕೇವಲ 13 ದಿನದ ಹಸುಗೂಸನ್ನು ನೀರಿನ ಸಂಪ್ಗೆ ಎಸೆದು ಹತ್ಯೆ ಮಾಡಿರುವ ಅಮಾನವೀಯ ಘಟನೆ ಚಿಕ್ಕಬಳ್ಳಾಪುರ ನಗರದ ಶಾಂತಿನಗರದಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಇಮ್ರಾನ್ ಮತ್ತು ಮುಸ್ಕಾನ್ ದಂಪತಿಗೆ 13 ದಿನಗಳ ಹಿಂದೆ ಹೆಣ್ಣು ಮಗು ಜನಿಸಿತ್ತು. ಆದರೆ ಹೆಣ್ಣು ಮಗು ಹುಟ್ಟಿರುವುದರ ಬಗ್ಗೆ ಅಸಮಾಧಾನ ಹೊಂದಿದ್ದ ತಂದೆ ಇಮ್ರಾನ್, ಬುಧವಾರ ತಡರಾತ್ರಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಎಲ್ಲರೂ ನಿದ್ರಿಸುತ್ತಿದ್ದ ವೇಳೆ, ತಾಯಿ ಮುಸ್ಕಾನ್ ಪಕ್ಕದಲ್ಲಿ ಮಲಗಿದ್ದ ಕಂದಮ್ಮನನ್ನು ಇಮ್ರಾನ್ ಯಾರಿಗೂ ತಿಳಿಯದಂತೆ ಎತ್ತಿಕೊಂಡು ಹೋಗಿ ಮನೆಯ ಅಂಗಳದಲ್ಲಿದ್ದ ನೀರಿನ ಸಂಪ್ಗೆ ಎಸೆದಿದ್ದಾನೆ ಎನ್ನಲಾಗಿದೆ. ಬಳಿಕ ಮಗು ಕಾಣೆಯಾಗಿರುವ ವಿಚಾರ ತಿಳಿದಾಗ, ತನಗೆ ಏನೂ ಗೊತ್ತಿಲ್ಲವೆಂಬಂತೆ ಮನೆಯವರೊಂದಿಗೆ ಸೇರಿ ಮಗುವಿಗಾಗಿ ಹುಡುಕಾಟ ನಡೆಸುವ ನಾಟಕವಾಡಿದ್ದಾನೆ.
ಮಗು ಎಲ್ಲಿಯೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಅನುಮಾನ ಮೂಡಿದೆ. ನಂತರ ನೀರಿನ ಸಂಪ್ನಲ್ಲಿದ್ದ ನೀರನ್ನು ಹೊರಹಾಕಿ ಪರಿಶೀಲಿಸಿದಾಗ, ಕಂದಮ್ಮನ ಮೃತದೇಹ ಪತ್ತೆಯಾಗಿದೆ. ಈ ದೃಶ್ಯ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ಸಂಬಂಧ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಇಮ್ರಾನ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಝಾರ್ಖಂಡ್ನಲ್ಲಿ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಮದುವೆಗೆ ನಿಶ್ಚಯವಾಗಿದ್ದ ಯುವಕನನ್ನು ಕಾಡಿಗೆ ಕರೆಸಿ ಹತ್ಯೆಗೈದ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ…
ಗದಗ: ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ನಲ್ಲಿ ಮೃತಪಟ್ಟಿರುವ ಘಟನೆ ಹಲವು…
ಬೆಂಗಳೂರು: ರಾಜ್ಯದಲ್ಲಿ ಎಸ್ಐಆರ್ (SIR) ಕಾರ್ಯದ ಒತ್ತಡದ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ…
ನಂಜನಗೂಡು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಗೂಡ್ಸ್ ಆಟೋದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ…
ಲಂಡನ್: ಬ್ರಿಟನ್ನ ಲಂಡನ್ ನಗರದಲ್ಲಿರುವ ಐಷಾರಾಮಿ ಕೆನ್ಸಿಂಗ್ಟನ್ ಪ್ರದೇಶದ ಮ್ಯಾರಿಯಟ್ ಹೋಟೆಲ್ನಲ್ಲಿ ಸಾವನ್ನಪ್ಪಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಬ್ದುಲ್ಲಾ ಬಿನ್…
ಬೆಂಗಳೂರು: ಹೊಸೂರು ರಸ್ತೆಯ ಕೂಡ್ಲು ಗೇಟ್ ಸಮೀಪ ಇರುವ ಎಸ್ಎನ್ಎನ್ ರಾಜ್ ಎಟರ್ನಿಯಾ ಅಪಾರ್ಟ್ಮೆಂಟ್ ಸಮುಚ್ಚಯದ 18 ಮಹಡಿಗಳ ಟವರ್…