Latest

ಹರಿಯಾಣದಲ್ಲಿ ಶಿಸ್ತಿಗೆ ಕೇಳದ ವಿದ್ಯಾರ್ಥಿಗಳ ಕ್ರೌರ್ಯ: ಪ್ರಾಂಶುಪಾಲನನ್ನು ಚಾಕುವಿನಿಂದ ಇರಿದು ಹತ್ಯೆ.!

ಹರಿಯಾಣ, ಜುಲೈ 10: ಹರಿಯಾಣದ ಹಿಸಾರ್ ಜಿಲ್ಲೆಯ ಬಾಸ್ ಬಾದ್‌ಶಾಪುರ್ ಗ್ರಾಮದ ಕರ್ತಾರ್ ಸ್ಮಾರಕ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಬೆಳಿಗ್ಗೆ ಸಂಭವಿಸಿದ ಭೀಕರ ಘಟನೆಯೊಂದು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಶಾಲೆಯ ಪ್ರಾಂಶುಪಾಲ ಜಗ್ಬೀರ್ ಸಿಂಗ್ (50) ಅವರನ್ನು 12ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸರಿಯಾದ ಉಡುಪು ಧರಿಸಬೇಕು, ಶಿಸ್ತಿನಿಂದ ನಡೆದುಕೊಳ್ಳಬೇಕು ಮತ್ತು ಕೂದಲು ಕಡಿಸಿಕೊಳ್ಳಬೇಕು ಎಂದು ಬೋಧನೆ ನೀಡಿದ್ದರು. ಈ ಸಲಹೆಗಳು ಇಬ್ಬರು ವಿದ್ಯಾರ್ಥಿಗಳ ಕೆರಳಿಗೆ ಕಾರಣವಾಯಿತು. ಭಾವನಾತ್ಮಕ ಹಿಂಸೆಗೊಳಗಾದ ಅವರು ಇಂದು ಬೆಳಿಗ್ಗೆ ಸುಮಾರು 10.30ರ ಹೊತ್ತಿಗೆ ತಮ್ಮೊಂದಿಗೆ ತಂದಿದ್ದ ಮಡಿಸುವ ಚಾಕುವಿನಿಂದ ಸಿಂಗ್ ಅವರನ್ನು ಅನೇಕ ಬಾರಿ ಇರಿದಿದ್ದಾರೆ.

ಘಟನೆಯ ಸ್ಥಳದಲ್ಲಿಯೇ ಸಿಂಗ್ ಅವರು ಭಾರೀ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಶಾಲಾ ಆವರಣದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದ ಕೂಡಲೇ ಪಾಠಶಾಲೆ ಭೀತಿಯಿಂದ ನಿಶ್ಶಬ್ದಗೊಂಡಿತು. ಇತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಯತ್ನ ಮಾಡಿದರೂ ಅವರು ಅಲ್ಲಾಗಲೇ ಮೃತಪಟ್ಟಿದ್ದರು.

ಹುಡುಗರ ಆರೋಪಿತ ಕ್ರಮ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಇಬ್ಬರು ವಿದ್ಯಾರ್ಥಿಗಳು ಇರಿತ ನಂತರ ಸ್ಥಳದಿಂದ ಓಡುವ ದೃಶ್ಯ ಹಾಗೂ ಅವರನ್ನು ಹಿಡಿಯಲು ಇತರರು ಹರಸಾಹಸ ಪಡುತ್ತಿರುವ ಚಿತ್ರಗಳು ಕಂಡುಬಂದಿವೆ. ಅವರಲ್ಲಿ ಒಬ್ಬನು ಕೊಲೆಗೆ ಉಪಯೋಗಿಸಿದ ಆಯುಧವನ್ನು ಎಸೆಯುತ್ತಿರುವುದು ಸ್ಪಷ್ಟವಾಗಿದೆ.

ಹಂಸಿಯ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಯಶವರ್ಧನ್ ಈ ಕುರಿತು ಪ್ರತಿಕ್ರಿಯಿಸಿ, “ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದಾರೆ ಎಂಬುದು ಬೆಳಕಿಗೆ ಬಂದಿದೆ. ಈ ಸಲಹೆಗಳೇ ಕೊಲೆಗೆ ದಾರಿ ಮಾಡಿಕೊಟ್ಟಿರಬಹುದು” ಎಂದು ಹೇಳಿದರು.

ಈ ಇಬ್ಬರು ವಿದ್ಯಾರ್ಥಿಗಳು ಅಪ್ರಾಪ್ತ ವಯಸ್ಕರಾಗಿದ್ದು, ಪೊಲೀಸರು ಈಗಾಗಲೇ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಶಾಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಹೇಳಿಕೆಗಳನ್ನು ಆಧರಿಸಿ ತನಿಖೆ ಮುಂದುವರೆಸಿದ್ದಾರೆ. ಇನ್ನು ಮರಣೋತ್ತರ ಪರೀಕ್ಷೆಯ ವರದಿ ಮತ್ತು ತನಿಖೆಯ ಪೂರಕ ಮಾಹಿತಿಗಳ ನಂತರ ಘಟನೆಗೆ ಸಂಬಂಧಿಸಿದ ಸಂಪೂರ್ಣ ಪೋಟೋ ಸ್ಪಷ್ಟವಾಗಲಿದೆ.

ಘಟನೆ ಹಿನ್ನೆಲೆಯಲ್ಲಿ ಶಾಲೆಯ ವಾತಾವರಣ ತೀವ್ರ ಶೋಕದ ಛಾಯೆಯಲ್ಲಿ ಮುಳುಗಿದ್ದು, ಸ್ಥಳೀಯರು ಮತ್ತು ಪಾಲಕರು ಭದ್ರತಾ ವಿಚಾರದಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago