Latest

ಮನೆ ಕಳ್ಳತನಕ್ಕೆ ಕಡಿವಾಣ – ಪೊಲೀಸರ ಕಾರ್ಯಾಚರಣೆ ಯಶಸ್ವಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತ್ಯಾಗರಾಜ ಕಾಲನಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಜಿಲ್ಲಾ ಪೊಲೀಸರು ಪ್ರಮುಖ ಯಶಸ್ಸು ಸಾಧಿಸಿದ್ದಾರೆ. ಆರೋಪಿಗಳನ್ನು ಬಂಧಿಸುವ ಜೊತೆಗೆ ಕಳವು ಮಾಡಲಾದ ಚಿನ್ನಾಭರಣ, ನಗದು ಸೇರಿದಂತೆ ಒಟ್ಟು 35.14 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳ್ಳತನ ಮತ್ತು ಪೊಲೀಸರ ಕಾರ್ಯಾಚರಣೆ

ಜ.10ರಂದು ಅಶ್ವತ್ಥನಾರಾಯಣ ಶೆಟ್ಟಿ ಎಂಬುವವರ ಮನೆಗೆ ಬೀಗ ಹಾಕಿ ಕುಟುಂಬಸ್ಥರು ಬೆಂಗಳೂರಿಗೆ ತೆರಳಿದ್ದರು. ಆ ರಾತ್ರಿ ಕಳ್ಳರು ಬೀಗ ಮುರಿದು ಒಳಹೋದರು ಮತ್ತು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿದ್ದರು. ಘಟನೆಯ ಬಗ್ಗೆ ಮಾಲೀಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು.

ತಕ್ಷಣ ಪೊಲೀಸ್ ತಂಡ ಸಕ್ರಿಯವಾಗಿ ಕಾರ್ಯಾಚರಣೆ ನಡೆಸಿತು. ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ, ಅನುಮಾನಾಸ್ಪದ ವ್ಯಕ್ತಿಗಳ ಮಾಹಿತಿ ಸಂಗ್ರಹಿಸಲಾಯಿತು. ಕಳ್ಳರು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು ಖಾಸಗಿ ವಾಹನದಲ್ಲಿ ಹೋದಾಗ, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸಮೀಪ ಅಪಘಾತಕ್ಕೆ ಒಳಗಾದರೂ, ತಮ್ಮ ಕಾರ್ಯಚರಣೆಯನ್ನು ನಿಲ್ಲಿಸದೆ ಮುಂದುವರಿಸಿದರು.

ಬಂಧಿತರು ಮತ್ತು ವಶಪಡಿಸಿಕೊಳ್ಳಲಾದ ವಸ್ತುಗಳು

ಈ ಪ್ರಕರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಗಣಿ ತಾಲೂಕಿನ ಮಾದಪಟ್ಟಣದ ನೂರುಲ್ಲಾ (50), ಆತನ ಪತ್ನಿ ಹಮೀನಾ ಬೀ, ಹಾರೋಗದ್ದೆಯ ವಿನೋದ್ ಮಾರ್ಕಕರ್ ಮತ್ತು ಸಾಗರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 412 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ, 2 ಕೈಗಡಿಯಾರಗಳು ಮತ್ತು ನಗದು ಸೇರಿ ಒಟ್ಟು 35,14,460 ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ನೀಡಿದ ಸಲಹೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಾರ್ವಜನಿಕರು ಕೆಲಸದ ನಿಮಿತ್ತ ಮನೆಯಿಂದ ಹೊರಡುವಾಗ ತಮ್ಮ ಆಭರಣಗಳು ಹಾಗೂ ಬೆಲೆಬಾಳುವ ವಸ್ತುಗಳನ್ನು ಬ್ಯಾಂಕ್ ಲಾಕರ್‌ನಲ್ಲಿ ಸುರಕ್ಷಿತವಾಗಿ ಇಡಬೇಕೆಂದು ಸಲಹೆ ನೀಡಿದರು. ಜೊತೆಗೆ, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲು ಹಾಗೂ ಅಪರಾಧ ಚಟುವಟಿಕೆ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲು ಮನವಿ ಮಾಡಿದರು.

ಈ ಕಾರ್ಯಾಚರಣೆಯಲ್ಲಿ ಡಿವೈಎಸ್ಪಿ ಶಿವಕುಮಾರ್, ವೃತ್ತ ನಿರೀಕ್ಷಕ ಸತ್ಯನಾರಾಯಣ, ಉಪ ನಿರೀಕ್ಷಕ ಚಂದ್ರಕಲಾ, ಗೋಪಾಲ, ರಮೇಶ್ ಗುಗ್ಗುರಿ, ಪ್ರಭಾಕರ್, ಶ್ರೀರಾಮಯ್ಯ, ರಿಜ್ವಾನ್, ಶ್ರೀನಿವಾಸರೆಡ್ಡಿ, ಅಶ್ವತ್ಥ್, ಶಿವಶೇಖರ್, ಮಹಾಂತೇಶ್, ಮರುಳು ಸಿದ್ದೇಶ್ವರ, ರವಿಕುಮಾರ್ ಮತ್ತು ಮುನಿಕೃಷ್ಣ ಅವರನ್ನೊಳಗೊಂಡ ತಂಡದ ಶ್ರಮ ಪ್ರಮುಖ ಪಾತ್ರವಹಿಸಿದೆ.

ಈ ಪ್ರಕರಣದ ಯಶಸ್ವಿ ಭೇದನೆಗೆ ಸಾರ್ವಜನಿಕರು ಹಾಗೂ ಅಧಿಕಾರಿಗಳು ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

13 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

13 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

13 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

13 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

13 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

13 hours ago