Categories: CrimeLatest

ಲಾಕಪ್ ಡೆತ್ ಪ್ರಕರಣ: ಪೊಲೀಸರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಖಲೀಲ್ ಸಾಬ್ ಪತ್ನಿ ಆಗ್ರಹ

ಹರಪನಹಳ್ಳಿ: ಲಾಕಪ್‌ನಲ್ಲಿ ಮೃತಪಟ್ಟ ಕಟ್ಟಡ ಕಾರ್ಮಿಕ ಖಲೀಲ್ ಸಾಬ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ತಮ್ಮ ಪತಿಯನ್ನು ಪೊಲೀಸರು ಅಮಾನುಷವಾಗಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿರುವ ಪತ್ನಿ ಶೈನಾಜ್ ಬೇಗಂ, ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಗೆ ಕಠಿಣ ಶಿಕ್ಷೆ, ಅಗತ್ಯವಿದ್ದರೆ ಗಲ್ಲು ಶಿಕ್ಷೆಯನ್ನೇ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಹರಪನಹಳ್ಳಿಯ ಮೆಹಬೂಬ್ ನಗರದಲ್ಲಿರುವ ಖಲೀಲ್ ಸಾಬ್ ಅವರ ನಿವಾಸಕ್ಕೆ ಅಂಜುಮನ್ ಕಮಿಟಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎನ್.ಎಂ. ನಬಿ ಅವರ ಪುತ್ರ ಎನ್.ಎಂ. ನೂರ್ ಅಹಮದ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಶೈನಾಜ್ ಬೇಗಂ, “ಕುಡಿದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಕಾರಣ ಬುದ್ಧಿವಾದ ಹೇಳುವಂತೆ ನನ್ನ ಪತಿಯನ್ನು ಠಾಣೆಗೆ ಕರೆದುಕೊಂಡು ಹೋದರು. ಆದರೆ ಅಲ್ಲೇ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನುಷವಾಗಿ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದಾರೆ” ಎಂದು ಆರೋಪಿಸಿದರು.

ವಾಹನದ ಹಿಂದೆ ಮಕ್ಕಳೊಂದಿಗೆ ಓಡಿದೆ

“ನನ್ನ ಪತಿ ಠಾಣೆಯಲ್ಲಿಯೇ ಮೃತಪಟ್ಟಿದ್ದರೂ ಚಿಕಿತ್ಸೆಗಾಗಿ ಕರೆದೊಯ್ಯುತ್ತಿರುವಂತೆ ಸರಕು ಸಾಗಾಣಿಕೆ ವಾಹನದಲ್ಲಿ ಕರೆದೊಯ್ದರು. ಅವರು ಮೃತದೇಹವನ್ನು ಎಲ್ಲೋ ಬಿಸಾಡಿಬಿಡುತ್ತಾರೆ ಎಂಬ ಆತಂಕದಿಂದ ಇಬ್ಬರು ಮಕ್ಕಳನ್ನು ಕರೆದುಕೊಂಡು ವಾಹನದ ಹಿಂದೆ ಓಡಿದೆ. ಆಸ್ಪತ್ರೆಯಲ್ಲಿ ನನ್ನ ಪತಿಯ ಬಾಯಿ ಹಾಗೂ ಕಿವಿಯಿಂದ ರಕ್ತಸ್ರಾವವಾಗಿರುವುದನ್ನು ನೋಡಿದ್ದೇನೆ. ನನಗೆ ಯಾವುದೇ ಪರಿಹಾರ ಬೇಡ, ತಪ್ಪಿತಸ್ಥರಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಅವರು ಕಣ್ಣೀರಿಟ್ಟರು.

ಪೊಲೀಸರ ಹೇಳಿಕೆ ಸುಳ್ಳು ಎಂದು ಆರೋಪ

“ನನ್ನ ಪತಿ ಕಟ್ಟಡ ಕಾರ್ಮಿಕರಾಗಿದ್ದು, ಆರೋಗ್ಯವಾಗಿದ್ದರು. ಶೌಚಾಲಯಕ್ಕೆ ಹೋಗುವ ವೇಳೆ ಜಾರಿ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿದ್ದಾರೆ ಎಂಬ ಪೊಲೀಸರ ಹೇಳಿಕೆ ಸಂಪೂರ್ಣ ಸುಳ್ಳು. ಈ ಪ್ರಕರಣದಲ್ಲಿ ನ್ಯಾಯ ದೊರೆಯದಿದ್ದರೆ ಠಾಣೆ ಎದುರು ಧರಣಿ ನಡೆಸುತ್ತೇನೆ” ಎಂದು ಶೈನಾಜ್ ಬೇಗಂ ಎಚ್ಚರಿಸಿದರು.

ಸಿಸಿ ಟಿವಿ ದೃಶ್ಯ ಮತ್ತು ಮರಣೋತ್ತರ ಪರೀಕ್ಷೆ ವರದಿ ಬಹಿರಂಗಪಡಿಸಲು ಆಗ್ರಹ

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಎಂ. ನೂರ್ ಅಹಮದ್, “ಘಟನೆ ನಡೆದು ನಾಲ್ಕು ದಿನ ಕಳೆದರೂ ಮರಣೋತ್ತರ ಪರೀಕ್ಷೆಯ ವರದಿ ಹಾಗೂ ಠಾಣೆಯ ಸಿಸಿ ಟಿವಿ ದೃಶ್ಯಾವಳಿಗಳನ್ನು ಜಿಲ್ಲಾ ಪೊಲೀಸ್ ಇಲಾಖೆ ಬಹಿರಂಗಪಡಿಸಿಲ್ಲ. ಪ್ರಕರಣದ ಬಗ್ಗೆ ಇದುವರೆಗೆ ಸಮಗ್ರ ತನಿಖೆ ನಡೆದಿರುವ ಲಕ್ಷಣ ಕಾಣುತ್ತಿಲ್ಲ” ಎಂದು ಆರೋಪಿಸಿದರು.

ಖಲೀಲ್ ಸಾಬ್ ಕುಟುಂಬದ ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, “ಪ್ರಕರಣದ ಸತ್ಯಾಸತ್ಯತೆ ಬಹಿರಂಗವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೆ ಕುಟುಂಬದ ಜೊತೆ ನಿಲ್ಲುತ್ತೇನೆ. ಎರಡು ದಿನಗಳಲ್ಲಿ ತನಿಖೆಯ ಪ್ರಗತಿ ಕುರಿತು ಸ್ಪಷ್ಟ ಮಾಹಿತಿ ನೀಡದಿದ್ದರೆ ಕುಟುಂಬದವರೊಂದಿಗೆ ಸಂಬಂಧಪಟ್ಟ ಸಚಿವರ ಗಮನಕ್ಕೆ ವಿಷಯವನ್ನು ತಂದು ಪೊಲೀಸ್ ಇಲಾಖೆಯ ವೈಫಲ್ಯದ ಕುರಿತು ದೂರು ಸಲ್ಲಿಸಲಾಗುವುದು” ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ನೆಲ್ಲು ಇಸ್ಮಾಯಿಲ್, ನ್ಯಾಯಬೆಲೆ ಇಸ್ಮಾಯಿಲ್, ಬಶೀರ್ ಅಹಮದ್, ಎಲ್ಲಪ್ಪ ಸೇರಿದಂತೆ ಕುಟುಂಬ ಸದಸ್ಯರು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

21 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

21 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

21 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

21 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago