Latest

ಸೈಬರ್ ವಂಚನೆ ಪ್ರಕರಣ: ಆರೋಪಿಗಳ ಜೊತೆ ಸೆಲ್ಫಿ ತೆಗೆದುಕೊಂಡ ಹೆಡ್‌ ಕಾನ್‌ಸ್ಟೆಬಲ್ ಅಮಾನತು

ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿಗಳೊಂದಿಗೆ ಸ್ನೇಹಪೂರಿತವಾಗಿ ವರ್ತಿಸಿ, ಅವರ ಜೊತೆ ಸೆಲ್ಫಿ ತೆಗೆಸಿಕೊಂಡ ಘಟನೆಯು ಪೊಲೀಸರ ತೊಡಕಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಗಂಭೀರ ಕ್ರಮ ಕೈಗೊಂಡಿದ್ದಾರೆ. ಉರ್ವಾ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಲಾಗಿದ್ದು, ಇನ್‌ಸ್ಪೆಕ್ಟರ್ (ಭಾರತಿ) ಅವರ ವಿರುದ್ಧವೂ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ.

ಆರೋಪಿಗಳೊಂದಿಗೆ ಸೆಲ್ಫಿ: ಪ್ರಕರಣದ ಹಿನ್ನೆಲೆ

ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಆರೋಪದಲ್ಲಿ ಬಂಧಿತರಾದವರನ್ನು ವಿಚಾರಣೆಗಾಗಿ ಮಂಗಳೂರು ಪೊಲೀಸರು ರಾಜಸ್ಥಾನಕ್ಕೆ ಕರೆದೊಯ್ದಿದ್ದರು. ಈ ಸಂದರ್ಭ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಪ್ರಯಾಣಿಸುವಾಗ, ಪೊಲೀಸರು ಆರೋಪಿ ರಾಜಕುಮಾರ್ ಮೀನಾ ಅವರೊಂದಿಗೆ ಸ್ನೇಹಪೂರ್ಣವಾಗಿ ತೊಡಗಿಸಿಕೊಂಡು, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ವೈರಲ್ ಆದ ಚಿತ್ರಗಳಲ್ಲಿ, ಆರೋಪಿ ತಾನೇ ಮೊಬೈಲ್ ಹಿಡಿದು ಸೆಲ್ಫಿ ತೆಗೆದುಕೊಂಡಿರುವುದು, ಮತ್ತೊಂದು ಫೋಟೋದಲ್ಲಿ ಪೊಲೀಸ್ ಅಧಿಕಾರಿಯೇ ಆರೋಪಿ ಹೆಗಲಿಗೆ ಕೈಹಾಕಿರುವುದು ಕಂಡುಬಂದಿತ್ತು. ಈ ದೃಶ್ಯಗಳು ಪೊಲೀಸ್ ಇಲಾಖೆಯ ಶಿಸ್ತು ಮತ್ತು ಪದವಿಯ ಗೌರವಕ್ಕೆ ಧಕ್ಕೆಯುಂಟು ಮಾಡಿವೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕಮಿಷನರ್ ಗಂಭೀರ ಕ್ರಮ

ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಹೆಡ್‌ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ತಕ್ಷಣದ ಪ್ರಭಾವದಿಂದ ಅಮಾನತು ಮಾಡಿದ್ದಲ್ಲದೆ, ಇನ್‌ಸ್ಪೆಕ್ಟರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಿದ್ದಾರೆ.

“ಆರೋಪಿಗಳೊಂದಿಗೆ ಅನಾವಶ್ಯಕವಾಗಿ ಸ್ನೇಹಪೂರಿತವಾಗಿ ವರ್ತಿಸುವುದು, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಪೊಲೀಸ್ ಶಿಸ್ತಿನ ಉಲ್ಲಂಘನೆ. ಆದ್ದರಿಂದ, ಈ ಬಗ್ಗೆ ಗಂಭೀರ ಕ್ರಮ ತೆಗೆದುಕೊಳ್ಳಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಘಟನೆ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕೆಂಬ ಸಂದೇಶವನ್ನು ಮತ್ತೊಮ್ಮೆ ಒತ್ತಿಹೇಳಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

4 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

4 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

4 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

4 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago