ಮಂಗಳೂರು: ಸೈಬರ್ ವಂಚನೆ ಪ್ರಕರಣದ ಆರೋಪಿಗಳೊಂದಿಗೆ ಸ್ನೇಹಪೂರಿತವಾಗಿ ವರ್ತಿಸಿ, ಅವರ ಜೊತೆ ಸೆಲ್ಫಿ ತೆಗೆಸಿಕೊಂಡ ಘಟನೆಯು ಪೊಲೀಸರ ತೊಡಕಾಗಿದ್ದು, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಈ ಬಗ್ಗೆ ಗಂಭೀರ ಕ್ರಮ ಕೈಗೊಂಡಿದ್ದಾರೆ. ಉರ್ವಾ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಲಾಗಿದ್ದು, ಇನ್ಸ್ಪೆಕ್ಟರ್ (ಭಾರತಿ) ಅವರ ವಿರುದ್ಧವೂ ಇಲಾಖಾ ಶಿಸ್ತು ಕ್ರಮ ಜರುಗಿಸಲಾಗಿದೆ.
ಆರೋಪಿಗಳೊಂದಿಗೆ ಸೆಲ್ಫಿ: ಪ್ರಕರಣದ ಹಿನ್ನೆಲೆ
ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಆರೋಪದಲ್ಲಿ ಬಂಧಿತರಾದವರನ್ನು ವಿಚಾರಣೆಗಾಗಿ ಮಂಗಳೂರು ಪೊಲೀಸರು ರಾಜಸ್ಥಾನಕ್ಕೆ ಕರೆದೊಯ್ದಿದ್ದರು. ಈ ಸಂದರ್ಭ, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಪ್ರಯಾಣಿಸುವಾಗ, ಪೊಲೀಸರು ಆರೋಪಿ ರಾಜಕುಮಾರ್ ಮೀನಾ ಅವರೊಂದಿಗೆ ಸ್ನೇಹಪೂರ್ಣವಾಗಿ ತೊಡಗಿಸಿಕೊಂಡು, ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ವೈರಲ್ ಆದ ಚಿತ್ರಗಳಲ್ಲಿ, ಆರೋಪಿ ತಾನೇ ಮೊಬೈಲ್ ಹಿಡಿದು ಸೆಲ್ಫಿ ತೆಗೆದುಕೊಂಡಿರುವುದು, ಮತ್ತೊಂದು ಫೋಟೋದಲ್ಲಿ ಪೊಲೀಸ್ ಅಧಿಕಾರಿಯೇ ಆರೋಪಿ ಹೆಗಲಿಗೆ ಕೈಹಾಕಿರುವುದು ಕಂಡುಬಂದಿತ್ತು. ಈ ದೃಶ್ಯಗಳು ಪೊಲೀಸ್ ಇಲಾಖೆಯ ಶಿಸ್ತು ಮತ್ತು ಪದವಿಯ ಗೌರವಕ್ಕೆ ಧಕ್ಕೆಯುಂಟು ಮಾಡಿವೆ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.
ಕಮಿಷನರ್ ಗಂಭೀರ ಕ್ರಮ
ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಹೆಡ್ಕಾನ್ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ತಕ್ಷಣದ ಪ್ರಭಾವದಿಂದ ಅಮಾನತು ಮಾಡಿದ್ದಲ್ಲದೆ, ಇನ್ಸ್ಪೆಕ್ಟರ್ ಅವರ ವಿರುದ್ಧವೂ ಶಿಸ್ತು ಕ್ರಮ ಜರುಗಿಸಿದ್ದಾರೆ.
“ಆರೋಪಿಗಳೊಂದಿಗೆ ಅನಾವಶ್ಯಕವಾಗಿ ಸ್ನೇಹಪೂರಿತವಾಗಿ ವರ್ತಿಸುವುದು, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವುದು ಪೊಲೀಸ್ ಶಿಸ್ತಿನ ಉಲ್ಲಂಘನೆ. ಆದ್ದರಿಂದ, ಈ ಬಗ್ಗೆ ಗಂಭೀರ ಕ್ರಮ ತೆಗೆದುಕೊಳ್ಳಲಾಗಿದೆ,” ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಘಟನೆ, ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕೆಂಬ ಸಂದೇಶವನ್ನು ಮತ್ತೊಮ್ಮೆ ಒತ್ತಿಹೇಳಿದೆ.
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…