ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳದ ಪ್ರಾಥಮಿಕ ಪ್ರದೇಶದಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯು ಹಲವಾರು ಡೇರೆಗಳಿಗೆ ಹರಡಿದ್ದು, ಅವು ಸುಟ್ಟುಹೋಗಿವೆ.
ಮಹಾ ಕುಂಭಮೇಳದ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ಅಗ್ನಿಶಾಮಕ ವಾಹನಗಳು ಕೂಡಾ ಸ್ಥಳದಲ್ಲಿ ನಿಂತಿದ್ದವು. ಘಟನಾ ಪ್ರದೇಶದಲ್ಲಿ ತಕ್ಷಣವೇ ಬೆಂಕಿಯನ್ನು ನಂದಿಸಲು ಅವು ಧಾವಿಸಿವೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಮಹಾಕುಂಭಮೇಳದ ಸೆಕ್ಟರ್ 19 ನಲ್ಲಿ ಎರಡು ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಟೆಂಟ್ಗಳಲ್ಲಿ ಭಾರೀ ಬೆಂಕಿ ಹರಡಿದೆ. ಅಗ್ನಿಶಾಮಕ ದಳವು ಶೀಘ್ರವೇ ಬೆಂಕಿಯನ್ನು ನಂದಿಸಿದ ಘಟನೆ ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ತಿಳಿಸಿದ್ದಾರೆ.
ಮಹಾಕುಂಭದ, “ಅತ್ಯಂತ ದುಃಖಕರ ಘಟನೆ. ಮಹಾ ಕುಂಭದಲ್ಲಿ ನಡೆಯುತ್ತಿರುವ ಬೆಂಕಿ ಅವಘಡವು ಎಲ್ಲರನ್ನೂ ಆಘಾತಗೊಳಿಸಿದೆ. ಆಡಳಿತವು ತಕ್ಷಣದ ಪರಿಹಾರ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಎಲ್ಲರ ಸುರಕ್ಷತೆಗಾಗಿ ನಾವು ಗಂಗಾ ಮಾತೆಯ ಮುಂದಿನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಪ್ರಕಟಣೆ ಪ್ರಕಟಿಸಿದೆ.
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…