ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳದ ಪ್ರಾಥಮಿಕ ಪ್ರದೇಶದಲ್ಲಿ ಎರಡು ಗ್ಯಾಸ್ ಸಿಲಿಂಡರ್ಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯು ಹಲವಾರು ಡೇರೆಗಳಿಗೆ ಹರಡಿದ್ದು, ಅವು ಸುಟ್ಟುಹೋಗಿವೆ.
ಮಹಾ ಕುಂಭಮೇಳದ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ಅಗ್ನಿಶಾಮಕ ವಾಹನಗಳು ಕೂಡಾ ಸ್ಥಳದಲ್ಲಿ ನಿಂತಿದ್ದವು. ಘಟನಾ ಪ್ರದೇಶದಲ್ಲಿ ತಕ್ಷಣವೇ ಬೆಂಕಿಯನ್ನು ನಂದಿಸಲು ಅವು ಧಾವಿಸಿವೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಮಹಾಕುಂಭಮೇಳದ ಸೆಕ್ಟರ್ 19 ನಲ್ಲಿ ಎರಡು ಸಿಲಿಂಡರ್ಗಳು ಸ್ಫೋಟಗೊಂಡಿದ್ದು, ಟೆಂಟ್ಗಳಲ್ಲಿ ಭಾರೀ ಬೆಂಕಿ ಹರಡಿದೆ. ಅಗ್ನಿಶಾಮಕ ದಳವು ಶೀಘ್ರವೇ ಬೆಂಕಿಯನ್ನು ನಂದಿಸಿದ ಘಟನೆ ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ತಿಳಿಸಿದ್ದಾರೆ.
ಮಹಾಕುಂಭದ, “ಅತ್ಯಂತ ದುಃಖಕರ ಘಟನೆ. ಮಹಾ ಕುಂಭದಲ್ಲಿ ನಡೆಯುತ್ತಿರುವ ಬೆಂಕಿ ಅವಘಡವು ಎಲ್ಲರನ್ನೂ ಆಘಾತಗೊಳಿಸಿದೆ. ಆಡಳಿತವು ತಕ್ಷಣದ ಪರಿಹಾರ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಎಲ್ಲರ ಸುರಕ್ಷತೆಗಾಗಿ ನಾವು ಗಂಗಾ ಮಾತೆಯ ಮುಂದಿನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಪ್ರಕಟಣೆ ಪ್ರಕಟಿಸಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…