Latest

ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಸಿಲಿಂಡರ್ ಸ್ಫೋಟ: ಟೆಂಟ್‌ಗಳಲ್ಲಿ ಬೆಂಕಿ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳದ ಪ್ರಾಥಮಿಕ ಪ್ರದೇಶದಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಕಿಯು ಹಲವಾರು ಡೇರೆಗಳಿಗೆ ಹರಡಿದ್ದು, ಅವು ಸುಟ್ಟುಹೋಗಿವೆ.
ಮಹಾ ಕುಂಭಮೇಳದ ಸುರಕ್ಷತಾ ವ್ಯವಸ್ಥೆಯ ಭಾಗವಾಗಿ ಅಗ್ನಿಶಾಮಕ ವಾಹನಗಳು ಕೂಡಾ ಸ್ಥಳದಲ್ಲಿ ನಿಂತಿದ್ದವು. ಘಟನಾ ಪ್ರದೇಶದಲ್ಲಿ ತಕ್ಷಣವೇ ಬೆಂಕಿಯನ್ನು ನಂದಿಸಲು ಅವು ಧಾವಿಸಿವೆ, ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಮಹಾಕುಂಭಮೇಳದ ಸೆಕ್ಟರ್ 19 ನಲ್ಲಿ ಎರಡು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಟೆಂಟ್‌ಗಳಲ್ಲಿ ಭಾರೀ ಬೆಂಕಿ ಹರಡಿದೆ. ಅಗ್ನಿಶಾಮಕ ದಳವು ಶೀಘ್ರವೇ ಬೆಂಕಿಯನ್ನು ನಂದಿಸಿದ ಘಟನೆ ಅಖಾರಾ ಪೊಲೀಸ್ ಠಾಣೆಯ ಉಸ್ತುವಾರಿ ಭಾಸ್ಕರ್ ಮಿಶ್ರಾ ತಿಳಿಸಿದ್ದಾರೆ.
ಮಹಾಕುಂಭದ, “ಅತ್ಯಂತ ದುಃಖಕರ ಘಟನೆ. ಮಹಾ ಕುಂಭದಲ್ಲಿ ನಡೆಯುತ್ತಿರುವ ಬೆಂಕಿ ಅವಘಡವು ಎಲ್ಲರನ್ನೂ ಆಘಾತಗೊಳಿಸಿದೆ. ಆಡಳಿತವು ತಕ್ಷಣದ ಪರಿಹಾರ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುತ್ತಿದೆ. ಎಲ್ಲರ ಸುರಕ್ಷತೆಗಾಗಿ ನಾವು ಗಂಗಾ ಮಾತೆಯ ಮುಂದಿನಲ್ಲಿ ಪ್ರಾರ್ಥಿಸುತ್ತೇವೆ” ಎಂದು ಪ್ರಕಟಣೆ ಪ್ರಕಟಿಸಿದೆ.

nazeer ahamad

Recent Posts

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…

3 hours ago

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…

3 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

3 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

7 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

11 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

11 hours ago