ಜಾರ್ಖಂಡ್ ರಾಜ್ಯದ ಜಮ್ಶೆಡ್ಪುರ ನಗರದ ಕದ್ಮಾ ಪ್ರದೇಶದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸಜೀವ ದಹನವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಕಾರು ಚಾಲನೆಯಲ್ಲಿದ್ದ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದೆ. ತಕ್ಷಣವೇ ಕಾರಿನಲ್ಲಿ ಬೆಂಕಿ ಹರಡಿದ್ದು, ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿಯಿತು. ಘಟನೆಯ ತೀವ್ರತೆ ಕುರಿತು ಪ್ರತ್ಯಕ್ಷದರ್ಶಿಗಳು, “ಬೆಂಕಿಯ ಅಬ್ಬರ ಇಷ್ಟೊಂದು ಭೀಕರವಾಗಿತ್ತು ಎನ್ನುವುದು, ಕಾರಿನೊಳಗಿದ್ದ ವ್ಯಕ್ತಿಯನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ,” ಎಂದು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಆದರೆ ಅಷ್ಟೊತ್ತಿಗೆ ಕಾರಿನೊಳಗಿದ್ದ ವ್ಯಕ್ತಿ ಜೀವ ಕಳೆದುಕೊಂಡಿದ್ದರು ಎಂದು ಪೊಲೀಸರು ದೃಢಪಡಿಸಿದ್ದಾರೆ.
ಈ ನಡುವೆ, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರೆದಿದ್ದು, ಸಿಲಿಂಡರ್ನ ಲೀಕ್ ಅಥವಾ ತಾಂತ್ರಿಕ ದೋಷವೊಂದೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ನಿವಾಸಿಗಳು ಈ ಘಟನೆಗೆ ಭೀತಿಗೊಳಗಾಗಿದ್ದು, ನಗರದಾದ್ಯಂತ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…