ಜಾರ್ಖಂಡ್ ರಾಜ್ಯದ ಜಮ್ಶೆಡ್ಪುರ ನಗರದ ಕದ್ಮಾ ಪ್ರದೇಶದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸಜೀವ ದಹನವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಕಾರು ಚಾಲನೆಯಲ್ಲಿದ್ದ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದೆ. ತಕ್ಷಣವೇ ಕಾರಿನಲ್ಲಿ ಬೆಂಕಿ ಹರಡಿದ್ದು, ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿಯಿತು. ಘಟನೆಯ ತೀವ್ರತೆ ಕುರಿತು ಪ್ರತ್ಯಕ್ಷದರ್ಶಿಗಳು, “ಬೆಂಕಿಯ ಅಬ್ಬರ ಇಷ್ಟೊಂದು ಭೀಕರವಾಗಿತ್ತು ಎನ್ನುವುದು, ಕಾರಿನೊಳಗಿದ್ದ ವ್ಯಕ್ತಿಯನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ,” ಎಂದು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಆದರೆ ಅಷ್ಟೊತ್ತಿಗೆ ಕಾರಿನೊಳಗಿದ್ದ ವ್ಯಕ್ತಿ ಜೀವ ಕಳೆದುಕೊಂಡಿದ್ದರು ಎಂದು ಪೊಲೀಸರು ದೃಢಪಡಿಸಿದ್ದಾರೆ.
ಈ ನಡುವೆ, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರೆದಿದ್ದು, ಸಿಲಿಂಡರ್ನ ಲೀಕ್ ಅಥವಾ ತಾಂತ್ರಿಕ ದೋಷವೊಂದೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಸ್ಥಳೀಯ ನಿವಾಸಿಗಳು ಈ ಘಟನೆಗೆ ಭೀತಿಗೊಳಗಾಗಿದ್ದು, ನಗರದಾದ್ಯಂತ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…