Latest

ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟ: ಜಾರ್ಖಂಡ್‌ನಲ್ಲಿ ಭೀಕರ ಅಗ್ನಿದುರಂತ

ಜಾರ್ಖಂಡ್ ರಾಜ್ಯದ ಜಮ್‌ಶೆಡ್‌ಪುರ ನಗರದ ಕದ್ಮಾ ಪ್ರದೇಶದಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಾರು ಬೆಂಕಿಗೆ ಆಹುತಿಯಾದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಸಜೀವ ದಹನವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಕಾರು ಚಾಲನೆಯಲ್ಲಿದ್ದ ವೇಳೆ ಏಕಾಏಕಿ ಬ್ಲಾಸ್ಟ್ ಆಗಿದೆ. ತಕ್ಷಣವೇ ಕಾರಿನಲ್ಲಿ ಬೆಂಕಿ ಹರಡಿದ್ದು, ಕೆಲವೇ ಕ್ಷಣಗಳಲ್ಲಿ ಸಂಪೂರ್ಣವಾಗಿ ಹೊತ್ತಿ ಉರಿಯಿತು. ಘಟನೆಯ ತೀವ್ರತೆ ಕುರಿತು ಪ್ರತ್ಯಕ್ಷದರ್ಶಿಗಳು, “ಬೆಂಕಿಯ ಅಬ್ಬರ ಇಷ್ಟೊಂದು ಭೀಕರವಾಗಿತ್ತು ಎನ್ನುವುದು, ಕಾರಿನೊಳಗಿದ್ದ ವ್ಯಕ್ತಿಯನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ,” ಎಂದು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಆದರೆ ಅಷ್ಟೊತ್ತಿಗೆ ಕಾರಿನೊಳಗಿದ್ದ ವ್ಯಕ್ತಿ ಜೀವ ಕಳೆದುಕೊಂಡಿದ್ದರು ಎಂದು ಪೊಲೀಸರು ದೃಢಪಡಿಸಿದ್ದಾರೆ.

ಈ ನಡುವೆ, ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ಮುಂದುವರೆದಿದ್ದು, ಸಿಲಿಂಡರ್‌ನ ಲೀಕ್ ಅಥವಾ ತಾಂತ್ರಿಕ ದೋಷವೊಂದೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಸ್ಥಳೀಯ ನಿವಾಸಿಗಳು ಈ ಘಟನೆಗೆ ಭೀತಿಗೊಳಗಾಗಿದ್ದು, ನಗರದಾದ್ಯಂತ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿದೆ.

nazeer ahamad

Recent Posts

ಮದರಸಾದಿಂದ 24 ಮಕ್ಕಳು ಪರಾರಿ! ತುಮಕೂರಿನಲ್ಲಿ ಬಯಲಾಯ್ತು ಅಮಾನವೀಯ ಹಿಂಸೆ

ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…

27 minutes ago

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

16 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

23 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

23 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago