Latest

ಡಿ.ಎಚ್.ಒ. ನಿರ್ಧಾರಕ್ಕೆ ಅನಾಥವಾದ ಪ್ರಾಥಮಿಕ ಆರೋಗ್ಯ ಕೇಂದ್ರ.

ಧಾರವಾಡ : ಜಿಲ್ಲೆಯ ಅಳ್ನಾವರ ತಾಲೂಕಿನ ಪ್ರಾಥಮಿಕ ಆರೋಗ್ಯ ಕೆಂದ್ರ ಹಿರಿಯ ಅಧಿಕಾರಿಯ ಧಿಡಿರ ನಿರ್ಧಾರದಿಂದ ಅನಾಥವಾಗಿದೆ. ತಾಲೂಕಿನ ಸುತ್ತ ಮುತ್ತಲ್ಲಿನ ಸಾರ್ವಜನಿಕರು ಅನಾರೋಗ್ಯದ ಹಿನ್ನಲೆಯಲ್ಲಿ ಇಲ್ಲಿಗೆ ಬಂದು ಇಲ್ಲಿ ಆರೋಗ್ಯ ತಪಾಸನೆ ಮಾಡುವ ವೈದ್ಯರಿಲ್ಲದೆ ಇರುವುದನ್ನು ನೋಡಿ ಕಂಗಾಲಾಗಿ ಮತ್ತೊಂದು ದಾರಿ ಕಾಣದೆ ಖಾಸಗಿ ಕ್ಲಿನಿಕ್ ಗಳತ್ತ ಮೊರೆಹೋಗುತ್ತಿರುವುದು ಬೇಸರದ ಸಂಗತಿ. ಇದ್ದು ಉಪಯೋಗಕ್ಕೆ ಬಾರದ ಈ ಆಸ್ಪತ್ರೆ ಮೊದಲೆ ಹಳ್ಳಿಗಳಿಂದ ಅನಾರೋಗ್ಯ ಪಿಡಿತ ಸಾರ್ವಜನೀಕರು ಸುಮಾರು ಬಸ ನಿಲ್ದಾಣದಿಂದ ನಡೆದುಕೊಂಡು ಬರುವ ಇವರುಗಳು ಇಲ್ಲಿ ನೋಡಿದರೆ ಆರೋಗ್ಯ ತಪಾಸಣೆ ಮಾಡುವ ವೈದ್ಯರಿಲ್ಲದೆ ಆಸ್ಪತ್ರೆಯ ಆಡಳಿತ ಅದಿಕಾರಿಗಳಿಗೆ ಹಿಡಿಶಾಪ ಹಾಕಿ ಹೊಗುವಂತಾಗಿದೆ.

ನೂತನ ತಾಲೂಕಾ ಘೋಷಣೆ ಆಗಿ ಸುಮಾರು ವರ್ಷಗಳೆ ಕಳೆದರು ಸರಿಯಾದ ಅಭಿವೃದ್ಧಿಯ ವ್ಯವಸ್ಥೆ ಕಾಣದ ಅಳ್ನಾವರ. ಇಲ್ಲೋಬ್ಬ ಅಧಿಕೃತ ವೈದ್ಯರ ನಿಯೋಜನೆಯಿಲ್ಲ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ನಿಯೋಜಿತ ತತ್ಕಾಲವಾಗಿ ಸತತ ಎಳು ವರ್ಷಗಳಿಂದ ಈ ಭಾಗದ ಅನಾರೋಗ್ಯದಿಂದ ಬರುವ ಸಾರ್ವಜನಿಕರಿಗೆ (ನಾರಾಯಣನಾಗಿ ) ಜೀವ ನಾಡಿಯಾಗಿ ಆಸ್ಪತ್ರೆಯ ವೈದ್ಯನಾಗಿ ಎನ್.ಎಸ್.ಪಾಟೀಲ ಎಂಬುವರು ಎಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಬಹುದೊಡ್ಡ ಜಗತ್ತಿಗೆ ಗ್ರಾಸವಾಗಿ ಹಗಲಿರುಳು ಯಮ ಕಾಲನಾಗಿ ಮನುಷ್ಯರನ್ನು ಕಾಡಿದ ಸಾಂಕ್ರಾಮಿಕ ರೋಗ ಕರೊನಾ ಎಂಬ ದೈತ್ಯ ಅಲೆ ಇಂತಹ ಸಂದರ್ಭದಲ್ಲಿ ಹಳೆಯದಾದ ಶಿಥಿಲಾವ್ಯವಸ್ಥೆಯಲ್ಲಿ ಅವಾಗೊ ಇವಾಗೊ ಬೀಳುವಂತ ಕಟ್ಟಡಗಳಲ್ಲಿ ಜನರ ಜೀವನಾಡಿಯಾಗಿ ತಮ್ಮ ಜೀವಲಕ್ಷಿಸದೆ ಹಗಲಿರುಳು ಜನರ ಆರೋಗ್ಯ ತಪಾಸಣೆಯಲ್ಲಿ ಕಾರ್ಯನೀರತಾದ ವೈದ್ಯರು ಇವರು ಬೇರೊಬ್ಬ ಯಾವ ವೈದ್ಯರು ಈ ಆಸ್ಪತ್ರೆಗೆ ಬರಲು ಮುಂದಾಗಲಿಲ್ಲ .

ಅದರೂ ಇವರು ಮಾತ್ರ ಇಲ್ಲೆ ಇದ್ದು ಈ ಭಾಗದ ಜನರೋಂದಿಗೆ ಅಷ್ಟೆ ಮಮಕಾರದಿಂದ ಆಸ್ಪತ್ರೆಯಲ್ಲಿ ಜನರ ಸೇವೆ ಮಾಡುತ್ತಿರುವ ವೈದ್ಯ ಎನ್ .ಎಸ್ . ಪಾಟೀಲ್. ಈಗ ತಾನೆ ಸರಕಾರದ ಅನುದಾನದಡಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಆಸ್ಪತ್ರೆಯ ಕಟ್ಟಡ ಅಲ್ಲಿ ಒಂದಿಷ್ಟು ನಿಟ್ಟುಸಿರು ಬಿಟ್ಟು ಇರುವಾಗಲೆ ಡಿ.ಎಚ್.ಒ. ಮನಬಂದಂತೆ ಇವರನ್ನು ಬೆರೊಂದು ಕಡೆ ವರ್ಗಾವಣೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ದಿನಾಂಕ 09/03/2023 ರಂದು ಆದೇಶ ಹೊರಡಿಸಿದ್ದಾರೆ . ವಾರದಲ್ಲಿ ಮೂರು ದಿನ ಒಬ್ಬರಂತೆ ಹೇಬ್ಬಳ್ಳಿಯ ಅಸ್ಪತ್ರೆಯ ವೈದ್ಯರನ್ನು ಇಲ್ಲಿಗೆ ನಿಯೊಜನೆ ಮಾಡಿದ್ದಾರೆ ಅಲ್ಲಿಂದ ಇವತ್ತಿನವರೆಗೂ ಯಾವೊಬ್ಬ ವೈದ್ಯರು ಇತ್ತ ತಿರುಗಿ ಸಹ ನೋಡಿಲ್ಲ. ಹಿಗಾದರೆ ಇಲ್ಲಿಗೆ ಅನಾರೋಗ್ಯದಿಂದ ಬಳಲಿ ಬರುವ ಸಾರ್ವಜನಿಕರ ಗತಿ ಎನು …? ಇಷ್ಟಾದರೂ ಇಲ್ಲಿರುವ ವೈದ್ಯರನ್ನು ಅಷ್ಟೋಂದು ತ್ವರಿತಗತಿಯಲ್ಲಿ ತೆಗೆದುಹಾಕಿದ್ದಾದರು ಎಕೆ….? ಎಂಬುವುದೆ ಸಾರ್ವಜನೀಕರ ಮುಂದಿರುವ ಯಕ್ಷ ಪ್ರಶ್ನೆ..

ಇನ್ನಾದರೂ ಹಿರಿಯ ಅಧಿಕಾರಿಗಳು , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಶಾಸಕರು ಇತ್ತ ಶೀಘ್ರವಾಗಿ ಗಮನ ಹರಸಿ ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ವೈದ್ಯಾಧಿಕಾರಿಗಳನ್ನು ನಿಯೋಜಿಸಬೇಕು.
ವರದಿ : ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಮದ್ಯದ ದರ ಏರಿಕೆ ಶಾಕ್: ‘ಎಕಾನಮಿ’ ಬ್ರ್ಯಾಂಡ್‌ಗಳೇ ಹೆಚ್ಚು ದುಬಾರಿ

ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…

12 hours ago

ಬೇಸಿಗೆ ಬಿಸಿಗೆ ಬೈಕ್ ಟೈರ್ ಬ್ಲಾಸ್ಟ್: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ದುರ್ಮರಣ

ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…

14 hours ago

ಶಿರಸಿ ವೈದ್ಯನ ಕೊಲೆ ರಹಸ್ಯ ಬಯಲು: ಮದುವೆ ಮುನ್ನವೇ ಸ್ನೇಹಿತನಿಂದ ಕ್ರೂರ ಹತ್ಯೆ.!

ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…

14 hours ago

“ಉದ್ಯೋಗವೇ ಜೀವನವಲ್ಲ”: ಕೆಲಸ ಕಳೆದುಕೊಂಡ ಬಳಿಕ ಯುವತಿಯ ಮನವರಿಕೆಯ ಮಾತುಗಳು ವೈರಲ್

ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…

18 hours ago

ಶವಪೆಟ್ಟಿಗೆಯ ಮುಂದೆ ಬಯಲಾಯ್ತು ಡಬಲ್ ಲವ್ ಸ್ಟೋರಿ: ಇಬ್ಬರು ಪ್ರೇಯಸಿಯರ ಮಧ್ಯೆ ಭಾರೀ ಗಲಾಟೆ!

ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…

18 hours ago

ಅಗ್ನಿಶಾಮಕ ದಳದಲ್ಲಿ 1,828 ಹುದ್ದೆಗಳ ಭರ್ತಿ: ಯುವಕರಿಗೆ ಭರ್ಜರಿ ಸರ್ಕಾರಿ ಉದ್ಯೋಗ ಅವಕಾಶ

ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…

22 hours ago